ಬೂದಿಕೋಟೆಯ ಮಾರ್ಕಂಡೇಯ ಡ್ಯಾಂ ಭರ್ತಿ


Team Udayavani, Nov 22, 2021, 2:18 PM IST

ಬೂದಿಕೋಟೆಯ ಮಾರ್ಕಂಡೇಯ ಡ್ಯಾಂ ಭರ್ತಿ

ಬಂಗಾರಪೇಟೆ: ಕೋಲಾರದ ಮಿನಿ ಕೆಆರ್‌ ಎಸ್‌ ಎಂದು ಖ್ಯಾತಿ ಇರುವ ಬೂದಿಕೋಟೆಯ ಮಾರ್ಕಂಡೇಯ ಡ್ಯಾಂ ಸುಮಾರು 17 ವರ್ಷಗಳ ನಂತರ ಕೋಡಿ ಹರಿದಿದ್ದು, ನೀರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.

1936ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್‌ ಮೈಸೂರಿನ ಕೆ.ಆರ್‌.ಎಸ್‌ ಮಾದರಿ ಯಲ್ಲಿ ನಿರ್ಮಿಸಿರುವ ಬೂದಿ ಕೋಟೆಯ ಮಾರ್ಕಂಡೇಯ ಡ್ಯಾಂ 2004ರ ನಂತರ ತುಂಬಿರಲಿಲ್ಲ. ಈ ಡ್ಯಾಂಗೆ ಕೆ.ಸಿ.ವ್ಯಾಲಿ ನೀರನ್ನು ಹರಿಸಿ ತುಂಬಿಸಬೇಕು ಎಂದು ಕೆ.ಸಿ ವ್ಯಾಲಿ ಯೋಜನೆಯಲ್ಲಿ ಸೇರಿಸಲಾಗಿತ್ತು.

ಇದನ್ನೂ ಓದಿ:- ಮಳೆ ಹಿನ್ನೆಲೆ ಮನೆಗೋಡೆ ಕುಸಿದು ವ್ಯಕ್ತಿ ಸಾವು

ಆದರೆ, ಕೆ.ಸಿ ವ್ಯಾಲಿ ನೀರು ಹರಿಯಲೇ ಇಲ್ಲ. ಬದಲಿಗೆ ಇತ್ತೀಚೆಗೆ ಸುರಿದ ಮಳೆಗೆ ಡ್ಯಾಂ ಕೋಡಿ ಹರಿದಿದ್ದು, ಈ ಭಾಗದ ಜನರಿಗೆ ಸಂತಸ ತಂದಿದೆ. ಇತ್ತ ಡ್ಯಾಂ ನೋಡಲು ಸಾವಿರಾರು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕೋಲಾರ ಶಾಸಕ ಶ್ರೀನಿವಾಸಗೌಡ ಸಹ ಮಾರ್ಕಂಡೇಯ ಡ್ಯಾಂಗೆ ಭೇಟಿ ನೀಡಿ ಸಂತಸಪಟ್ಟರು.

ಡ್ಯಾಂಗೆ ಬರುವ ರಸ್ತೆ ಸಂಪೂರ್ಣ ಹಾಳು: ಶಾಸಕ ಶ್ರೀನಿವಾಸಗೌಡ ಮಾತನಾಡಿ, 17 ವರ್ಷದ ನಂತರ ಡ್ಯಾಂ ಕೋಡಿ ಹರಿದಿದೆ. ಯರಗೋಳ್‌ ಜೊತೆಗೆ ಮಾರ್ಕಂಡೇಯ ಡ್ಯಾಂ ನೀರನ್ನು ಆದ್ಯತೆ ಮೇರೆಗೆ ಕುಡಿಯಲು ಬಳಸಲಾಗುತ್ತದೆ. ಕುಡಿಯಲು ಬಳಸಿ ಉಳಿದ ನೀರನ್ನು ಭತ್ತ ಬೆಳೆಗೆ ಬಳಸಲು ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಯರಗೋಳ್‌ ಡ್ಯಾಂಗೆ 80 ಅಡಿ ನೀರು ಬಂದಿದ್ದು, ಮಾರ್ಕಂಡೇಯ ಡ್ಯಾಂ ನೀರು ಹೋದರೆ ಬೇಗ ತುಂಬಲಿದೆ. ಮುಖ್ಯಮಂತ್ರಿಗಳನ್ನು ಕರೆಸಿ ಯರಗೋಳ್‌ ಡ್ಯಾಂ ಹಾಗೂ ಮಾರ್ಕಂಡೇಯ ಡ್ಯಾಂಗೆ ಪೂಜೆ ಮಾಡಿಸಲಾಗುತ್ತದೆ. ಮಾರ್ಕಂಡೇಯ ಡ್ಯಾಂಗೆ ಬರುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಜಿಲ್ಲೆಯ ಎಲ್ಲಾ ಶಾಸಕರು ಒಟ್ಟಾಗಿ ಮುಂದಿನ ವಿಧಾನ ಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ಥಾಪಿಸಿ, ಅಭಿವೃದ್ಧಿ ಮಾಡಲಾಗುತ್ತದೆ ಎಂದರು. ತಾಪಂ ಮಾಜಿ ಸದಸ್ಯ ಮಾರ್ಕಂಡೇಗೌಡ, ಎಂ.ರಾಮಪ್ಪ, ಕೋಲಾರ ನಗರ ಸಭೆ ಮಾಜಿ ಸದಸ್ಯ ತ್ಯಾಗರಾಜ್‌, ಟಿಎಪಿಸಿಎಂಎಸ್‌ ನಿರ್ದೇಶಕ ಸತೀಶ್‌ಕುಮಾರ್‌, ಮುಖಂಡರಾದ ಚನ್ನವೀರಯ್ಯ, ರಾಮಸ್ವಾಮಿ, ರಘು, ಮಂಜುನಾಥ ಹಾಜರಿದ್ದರು.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.