ಟಿಕೆಟ್‌ ಕೊಡಿಸುವಲ್ಲಿ ಡಿಕೆಶಿ, ಸಿದ್ದು ಯಶಸ್ವಿ

ಬಳ್ಳಾರಿ ವಿಚಾರದಲ್ಲಿ ಖರ್ಗೆ ಮೇಲುಗೈ, ಕೆಎಚ್‌ಎಂ ಮಾತಿಗೆ ಸೊಪ್ಪು ಹಾಕದ ಹೈಕಮಾಂಡ್‌

Team Udayavani, Nov 23, 2021, 6:00 AM IST

ಟಿಕೆಟ್‌ ಕೊಡಿಸುವಲ್ಲಿ ಡಿಕೆಶಿ, ಸಿದ್ದು ಯಶಸ್ವಿ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಹೈಕಮಾಂಡ್‌ ಮಣೆ ಹಾಕಿದ್ದರೆ ಮತ್ತೂಬ್ಬ ನಾಯಕ ಕೆ.ಎಚ್‌.ಮುನಿಯಪ್ಪ ಅವರ ಮಾತಿಗೆ ಸೊಪ್ಪು ಹಾಕಿಲ್ಲ.

ಬಳ್ಳಾರಿ ಕ್ಷೇತ್ರದ ವಿಚಾರದಲ್ಲಿ ಕೊಂಡಯ್ಯ ಅವರಿಗೆ ಮತ್ತೊಮ್ಮೆ ಟಿಕೆಟ್‌ ಕೊಡಿಸಿಕೊಂಡು ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ಮಟ್ಟದಲ್ಲಿ ತಮ್ಮ ಪ್ರಭಾವ ಸಾಬೀತುಪಡಿಸಿಕೊಂಡರೆ ಅಲ್ಲಿ ಮುಂಡರಗಿ ನಾಗರಾಜ್‌ಗೆ ಟಿಕೆಟ್‌ ಕೊಡಿಸಲು ಪಟ್ಟು ಹಿಡಿದಿದ್ದ ಕೆ.ಎಚ್‌.ಮುನಿಯಪ್ಪ ಹಿನ್ನಡೆ ಅನುಭವಿಸುವಂತಾಗಿದೆ.

ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಅಧಿಕೃತವಾಗಿ ಘೋಷಣೆ ಮಾಡದಿದ್ದರೂ ಸೋಮವಾರ ಮಧ್ಯಾಹ್ನವೇ ಅನಿಲ್‌ಕುಮಾರ್‌ಗೆ ಬಿ ಫಾರಂ ನೀಡಲಾಗಿದೆ ಎಂದು ಹೇಳಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಬರುವಂತೆ ಅವರು ಜಿಲ್ಲಾ ನಾಯಕರಿಗೆ ದೂರವಾಣಿ ಕರೆ ಮೂಲಕ ಆಹ್ವಾನ
ನೀಡಿದ್ದಾರೆ. ಇದರಿಂದಾಗಿ ಕೆಪಿಸಿಸಿ ಅಷ್ಟೇ ಅಲ್ಲದೆ ಎಐಸಿಸಿಯಲ್ಲೂ ಕೆ.ಎಚ್‌.ಮುನಿಯಪ್ಪ ಅವರ ಮಾತು ನಡೆಯದಂತಾಗಿದೆ.

ಬಳ್ಳಾರಿ-ವಿಜಯನಗರ ಕ್ಷೇತ್ರದ ಟಿಕೆಟ್‌ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಕೆ.ಎಚ್‌.ಮುನಿಯಪ್ಪ ಅವರು ರಾಜ್ಯಸಭೆ ಸದಸ್ಯ ಎಲ್‌.ಹನುಮಂತಯ್ಯ, ಮಾಜಿ ಸಚಿವರಾದ ಎಚ್‌.ಆಂಜನೇಯ, ಆರ್‌.ಬಿ.ತಿಮ್ಮಾಪುರ, ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಜತೆಗೂಡಿ ಸೋನಿಯಾಗಾಂಧಿಯವರಿಗೆ ಪತ್ರ ಬರೆದು ಆ ಜಿಲ್ಲೆಯಲ್ಲಿ ದಲಿತ ಎಡಗೈ ಸಮುದಾಯದ ಮುಂಡರಗಿ ನಾಗರಾಜ್‌ ಅವರಿಗೆ ಟಿಕೆಟ್‌ ನೀಡಬೇಕು. ಅಲ್ಲಿನ ದಲಿತ ಸಮುದಾಯದ ಜನಸಂಖ್ಯೆಯಲ್ಲಿ ಶೇ.70ರಷ್ಟು ಎಡಗೈ ಸಮುದಾಯವಿದೆ ಎಂದು ಉಲ್ಲೇಖೀಸಲಾಗಿತ್ತು. ಇಷ್ಟಾದರೂ ಕೊಂಡಯ್ಯ ಅವರಿಗೆ ಟಿಕೆಟ್‌ ಕೊಡಿಸುವಲ್ಲಿ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಮರೆಗುಳಿ ಕಾಯಿಲೆ ಮೂಲ ಪತ್ತೆ; ಐಐಟಿ ಮಂಡಿ ಸಂಶೋಧಕರಿಂದ ಮಹತ್ವದ ಸಂಶೋಧನೆ

ಜೆಡಿಎಸ್‌ ಹೊಡೆತದ ಆತಂಕ
ಕೋಲಾರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲ್ಲುವ ಅವಕಾಶ ಇದೆಯಾದರೂ ಜೆಡಿಎಸ್‌ ಯಾವ ರೀತಿ ಕಾರ್ಯತಂತ್ರ ಮಾಡಲಿದೆ ಎಂಬುದು ನಿಗೂಢವಾಗಿದೆ. ಇಲ್ಲಿ ಜೆಡಿಎಸ್‌ ಕೈಗೊಳ್ಳುವ ನಿಲುವು ಕಾಂಗ್ರೆಸ್‌ ಮೆಲೆ ಪರಿಣಾಮ ಬೀರಲಿದ್ದು ಜೆಡಿಎಸ್‌ ಯಾವ ರೀತಿ ಹೊಡೆತ ನೀಡಬಹುದೆಂಬ ಆತಂಕವೂ ಇದೆ.

ಜೆಡಿಎಸ್‌ ಸ್ಪರ್ಧಿಸದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ಪಡೆಯಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವುದು. ಕಾಂಗ್ರೆಸ್‌ ಸೋಲಿಸಲು ಜೆಡಿಎಸ್‌ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಗುಸು ಗುಸು ಪ್ರಾರಂಭವಾ ಗಿರುವುದು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಕೆಲವೆಡೆ ಎದೆಬಡಿತ ಹೆಚ್ಚಿಸಿದೆ.

– ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.