ದೇಶಕ್ಕೆ ಸಂಕಷ್ಟ ಬಂದಾಗ ನೆರವಾಗಿದೆ ಎಬಿವಿಪಿ: ಮಿಸೆ


Team Udayavani, Nov 23, 2021, 3:35 PM IST

18ABBp

ವಿಜಯಪುರ: ದೇಶಕ್ಕೆ ಯಾವುದಾದರೂ ಸಂಕಷ್ಟದ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ದೇಶದ ಬೆನ್ನುಲಬಾಗಿ ನಿಲ್ಲುವ ಯುವಶಕ್ತಿಯ ಬಲಿಷ್ಠ ಸಂಘಟನೆಯೇ ನಮ್ಮದು ಎಂದು ಎಬಿವಿಪಿ ಪ್ರಾಂತ ಸಂಘಟನಾ ಕಾರ್ಯದರ್ಶಿ ಮಂಜುನಾಥ ಮಿಸೆ ಹೇಳಿದರು.

ನಗರದ ಪಿಡಿಜೆ ಕಾಲೇಜಿನಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಹಮ್ಮಿಕೊಂಡಿದ್ದ ಮಹಾನಗರ ಅಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 73 ವರ್ಷಗಳಿಂದ ದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಧ್ವನಿಯಾಗಿ ನಿಲ್ಲುವ ಸಂಘಟನೆ ಎಬಿವಿಪಿ. ಸಾಮಾನ್ಯವಾಗಿ ಕಾಲೇಜಿಗೆ ಬಂದಿರುವ ವಿದ್ಯಾರ್ಥಿಗಳಲ್ಲಿ ಈ ದೇಶದ ಮಹಾನ್‌ ಪುರುಷರ ವಿಚಾರಗಳನ್ನು ತುಂಬಿ ಈ ದೇಶದ ಶಕ್ತಿಯನ್ನಾಗಿ ಪರಿವರ್ತನೆ ಮಾಡುವ ಕಾರ್ಯವನ್ನು ಎಬಿವಿಪಿ ಮಾಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಡಿ.ಕೆ. ಕುಲಕರ್ಣಿ ಮಾತನಾಡಿ, ಯುವಶಕ್ತಿ ದೇಶದ ಪರ ಚಿಂತನೆ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳ ಬೇಕು. ಯುವಕರ ಪ್ರೇರಣಾ ವ್ಯಕ್ತಿಗಳು ಚಲನಚಿತ್ರ ನಟ-ನಟಿಯರನ್ನು ಮಾಡಿ ಕೊಳ್ಳದೆ ದೇಶಕ್ಕಾಗಿ ಪ್ರಾಣ ಅರ್ಪಣೆ ಮಾಡಿದ ವ್ಯಕ್ತಿಗಳು ಪ್ರೇರಣೆಯನ್ನಾಗಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಎಬಿವಿಪಿಯ ಕಾರ್ಯಕರ್ತರು ಕೋವಿಡ್‌ ಸಂದರ್ಭದಲ್ಲಿ ಮಾಡಿದ ಸೇವಾ ಚಟುವಟಿಕೆಗಳ ಕಾರ್ಯವೂ ನಿಜಕ್ಕೂ ಎಲ್ಲರಿಗೂ ಪ್ರೇರಣೆ ದಾಯಕವಾಗಿದೆ. ಬೇರೆ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ 31 ದಿನಗಳ ಕಾಲ ಉಚಿತ ಫುಡ್‌ಕಿಟ್‌ ವಿತರಣೆ, ಸರ್ಕಾರಿ ಕಚೇರಿಗಳ ಸ್ಯಾನಿಟೈಸ್‌, ಉಚಿತ ಮಾಸ್ಕ್ ವಿತರಣೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮಾಡಿದ ಕಾರ್ಯಕರ್ತರ ಸೇವೆ ಸ್ಮರಿಸಿದರು.ನಗರ ಸಂಘಟನಾ ಕಾರ್ಯದರ್ಶಿ ನಾರಗಾಜ ಬಟಗೇರಾ ಸಮಾರೋಪ ಭಾಷಣ ಮಾಡಿದರು.

ಇದೇ ವೇಳೆ ಎಬಿವಿಪಿ ನಗರ ಘಟಕದ ಅಧ್ಯಕ್ಷರಾಗಿ ಅಮಿತಕುಮಾರ ಬಿರಾದಾರ, ಕಾರ್ಯದರ್ಶಿಯಾಗಿ ಸಿದ್ದು ಪತ್ತಾರ ಮರು ಆಯ್ಕೆಯಾದರು. ನಗರ ಉಪಾಧ್ಯಕ್ಷರಾಗಿ ಓಂಕಾರ ನಾವಿ, ಸೀಮಾ ಹೋನವಾಡ, ಐ.ಬಿ. ಜಾಬಾ, ತಾಲೂಕು ಸಹ ಸಂಚಾಲಕರಾಗಿ ಮಹಂತೇಶ ಕಂಬಾರ, ತಾಲೂಕು ಹಾಸ್ಟೆಲ್‌ ಪ್ರಮುಖರಾಗಿ ಸಂತೋಷ ದೊಡಮನಿ, ನಗರ ಸಹ ಕಾರ್ಯದರ್ಶಿಗಳಾಗಿ ಮಂಜುನಾಥ ಹಳ್ಳಿ, ವರ್ಷಾ ನಂದಿ, ಐಶ್ವರ್ಯ ಪಾಟೀಲ, ಸಿದ್ದು ಉಪ್ಪಾರ, ಅಧ್ಯಯನ ಕೇಂದ್ರ ಪ್ರಮುಖರಾಗಿ ನಾನಾಗೌಡ ಪಾಟೀಲ, ಹಾಸ್ಟೆಲ್‌ ಪ್ರಮುಖರಾಗಿ ಮಹೇಶ, ಸಹ ಪ್ರಮುಖರಾಗಿ ಕಿರಣ ದೊಡಮನಿ, ಸಂಪರ್ಕ ಪ್ರಮುಖರಾಗಿ ಮಾಲೂ ಪೂಜಾರಿ, ಕಾರ್ಯಾಲಯ ಕಾರ್ಯದರ್ಶಿಯಾಗಿ ಆಕಾಶ ರಂಜನಗಿ, ಕಾರ್ಯಕಾರಣಿ ಸದಸ್ಯರಾಗಿ ರೇಖಾ ಅರಕೇರಿ, ಅಮೋಘಸಿದ್ದ ಮರನೂರ, ಬಸವರಾಜ ಓಕಾರ, ಅರವಿಂದ, ಅಮೂಲ್ಯ ಮೋರೆ, ಕಾವೇರಿ ಕಂದಗೊಳ, ಭಾಗ್ಯಾ ಆಯ್ಕೆಯಾದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.