ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿ: ಮುತಾಲಿಕ್


Team Udayavani, Nov 25, 2021, 2:15 PM IST

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿ: ಮುತಾಲಿಕ್

ವಿಜಯಪುರ: ದೇಶದ್ರೋಹಿ ಕೃತ್ಯಕ್ಕೆ ಸಮಾನವಾದ ಮತಾಂತರವನ್ನು ತಡೆಯುವ ಕುರಿತು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ಪೃಶ್ಯ ದಲಿತರು ಮಾತ್ರವಲ್ಲ ಮೇಲ್ವರ್ಗದ ಬ್ರಾಹ್ಮಣ, ಲಿಂಗಾಯತ, ಕುರುಬ ಹೀಗೆ ಮುಂದುವರೆದ ಸಮುದಾಯಗಳ ಜನರನ್ನೂ ಮತಾಂತರ ಮಾಡಲಾಗುತ್ತಿದೆ ಎಂದರು.

ಬೀದರ್, ಕಲಬುರ್ಗಿ ಭಾಗದಲ್ಲಿ ಮಾದಿಗ ಸಮುದಾಯ, ವಿಜಯಪುರ ಜಿಲ್ಲೆಯಲ್ಲಿ ಬಂಜಾರಾ ಸಮುದಾಯ, ದಾವಣಗೆರೆ, ಚಿತ್ರದುರ್ಗ ಭಾಗದಲ್ಲಿ ಲಿಂಗಾಯತರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಾಹ್ಮಣರನ್ನೂ ಮತಾಂತರ ಮಾಡಲಾಗಿದೆ ಎಂದು ವಿವರಿಸಿದರು‌.

ಈ ದೇಶದ್ರೋಹಿ ಮತಾಂತರ ಕೃತ್ಯ ತಡೆಯುವ ಕುರಿತು ಕಾನೂನು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಬೇಕಿದೆ. ಮತಾಂತರ ತಡೆ ಕಾಯ್ದೆ ಜಾರಿಗಾಗಿ ಮಠಾಧೀಶರು ಮಠಗಳನ್ನು ಬಿಟ್ಟು ಹೊರಗೆ ಬರಬೇಕು ಎಂದು ಆಗ್ರಹಿಸಿದರು.

ಈ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯ ಮಠಾಧೀಶರ ನಡೆ ಸ್ವಾಗತಾರ್ಹ ಹಾಗೂ ಮಾದರಿ. ರಾಜಕೀಯ, ಸ್ವಾರ್ಥ, ಹಿಂದೂ ಸಂಘಟನೆಗಳು ದುರ್ಬಲತೆಯೇ ಅನ್ಯ ಧರ್ಮೀಯರು ನಿರ್ಭಯವಾಗಿ ಮತಾಂತರ ಕೃತ್ಯ ನಡೆಯಲು ಕಾರಣವಾಗಿದೆ ಎಂದರು.

ಅಸ್ಪೃಶ್ಯತೆ ನಿವಾರಣೆ ವಿಷಯದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ. ಮತಾಂತರದ ಬಳಿಕ ದಲಿತ ಕ್ರಿಶ್ಚಿಯನ್ ಎಂದು ಪ್ರತ್ಯೇಕಿಸಿದ್ದಾರೆ. ಆರಂಭದಲ್ಲಿ ಹಣದ ಅಮಿಷ ಒಡ್ಡಿ ಮತಾಂತರ ಮಾಡಿ, ನಂತರ ಮತಾಂತರ ಆದವರಿಂದಲೇ ಸುಲಿಗೆ ಮಾಡುವ ಕೃತ್ಯ ಮಾಡಲಾಗುತ್ತದೆ ಎಂಬುದನ್ನು ಮತಾಂತರ ಆಗುವವರು ಅರಿಯಬೇಕು ಎಂದರು.

ರಾತ್ರಿಯಿಂದ ಬೆಳಗಿನ ವರೆಗೆ ಮಸೀದಿ ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಕೆ ನಿಷೇಧದ ಬಗ್ಗೆ ಸುಪ್ರೀಂ ಕೋರ್ಟ್ ಅದೇಶವಿದೆ. ಆದರೂ ಆದೇಶ ಉಲ್ಲಂಘಿಸಿ, ನ್ಯಾಯಾಂಗ ನಿಂದನೆ ಮಾಡುವ ಕೆಲಸ ನಡೆಯುತ್ತಲೇ ಇದೆ. ಹಲವು ಬಾರಿ ಮನವಿ ಮಾಡಿದರೂ ನಿಶ್ಯಬ್ಧ ವಲಯಗಳ ಪರಿಸರದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತದೆ. ಕೂಡಲೇ ಸರ್ಕಾರ, ಪೊಲೀಸರು ಮಸೀದಿಗಳಲ್ಲಿ ಮೈಕ್ ತೆಗೆಸದಿದ್ದರೆ ನಮ್ಮ ಸಂಘಟನೆಯೇ ಆ ಕೆಲಸ ಮಾಡಲಿದೆ ಎಂದರು.

ಸರ್ಕಾರ ತ್ವರಿತವಾಗಿ ಮತಾಂತರ ಕಾಯ್ದೆ ಜಾರಿಯ ಬಳಿಕ ನೈಜ ಅನುಷ್ಠಾನ ಮಾಡಬೇಕು. ಸರ್ಕಾರ ಕಾನೂನು ಜಾರಿಗೆ ತರಲು ಎಲ್ಲರೂ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು

ಸರ್ಕಾರ ಕಾನೂನು ಜಾರಿಗೆ ತರುವಲ್ಲಿ ವಿಳಂಬ ಮಾಡಿದಲ್ಲಿ, ಮತಾಂತರಿ‌ ಕಾರ್ಯದಲ್ಲಿ ತೊಡಗಿವರು ತಕ್ಷಣ ತಮ್ಮ ಕೃತ್ಯ ನಿಲ್ಲಿಸಬೇಕು. ಇಲ್ಲವಾದಲ್ಲಿ ಹಳ್ಳಿಗಳಿಗೆ ತೆರಳಿ ಮತಾಂತರ ಮಾಡುವರನ್ನು ನಮ್ಮ ಸಂಘಟನೆಯ ಕಾರ್ಯಕರ್ತರು ಸಿಕ್ಕಲ್ಲಿ ಒದೆಯುತ್ತೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ:ಅಧಿಕಾರಕ್ಕೇರಿದ ಕೆಲವೇ ಗಂಟೆಗಳಲ್ಲಿ ಸ್ವೀಡನ್ ನ ಮೊದಲ ಮಹಿಳಾ ಪ್ರಧಾನಿ ರಾಜೀನಾಮೆ!

ಹೊಸದುರ್ಗ ಶಾಸಕ ಗೂಳೊಹಟ್ಟಿ ಶೇಖರ ಮನೆಗೆ ಮತಾಂತರಿಗಳು ಪ್ರವೇಶಿಸಿದ್ದು, ಶಾಸಕರ ತಾಯಿಯನ್ನೇ ಮತಾಂತರ ಮಾಡುವಷ್ಟು ನಿರ್ಭೀತಿಯ ವರ್ತನೆ ನಡೆದಿದೆ. ಈ ಬಗ್ಗೆ ಸ್ವತಃ ಶಾಸಕ ಗೂಳಿಹಟ್ಟಿ ಶೇಖರ ಸದನದಲ್ಲೇ ತಮ್ಮ ಕುಟುಂಬದ ಸದಸ್ಯರನ್ನು ಮತಾಂತರ ಮಾಡಿದ ಬಗ್ಗೆ ಧ್ವನಿ ಎತ್ತಿದ್ದಾರೆ. ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಸಂಘಟನೆಯ ನಾಯಕರಿಗೆ ಪತ್ರ ಬರೆದು ಮತಾಂತರಗೊಂಡಿರುವ ಲಿಂಗಾಯತರನ್ನು ಮಾತೃ ಧರ್ಮಕ್ಕೆ ಕರೆ ತರುವ ಬಗ್ಗೆ ಪತ್ರ ಬರೆದು, ಮತಾಂತರದ ವಿರುದ್ಧ ಧ್ವನಿ ಎತ್ತಿರುವುದು ಮತಾಂತರದ ಜಾಲ ವ್ಯಾಪಕವಾಗಿರುವ ಅಪಾಯವನ್ನು ಮನವರಿಕೆ ಮಾಡಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೀಗಾಗಿ ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಎಲ್ಲರೂ ಒಗ್ಗೂಡಿ ಧ್ವನಿ ಎತ್ತಬೇಕು,‌ ಹೋರಾಟಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಪ್ರಾಮಾಣಿಕತೆ, ಹಿಂದೂ ಪ್ರಖರ ಹೋರಾಟಗಾರರಿಗೆ ರಾಜಕೀಯದಲ್ಲಿ ಅವಕಾಶವಿಲ್ಲ. ಹೀಗಾಗಿ ರಾಜಕೀಯ ಆಸಕ್ತಿ ಕಳೆದುಕೊಂಡಿರುವ ನಾನು ಹಿಂದೂ ದರ್ಮ ಸಂರಕ್ಷಣೆಗಾಗಿ ನನ್ನನ್ನು ಸಂಪೂರ್ಣ ಸಮರ್ಪಿಸಿ ಕೊಂಡಿದ್ದೇನೆ ಎಂದರು.

ಜಿಲ್ಲಾಧ್ಯಕ್ಷ ರಾಕೇಶ ಮಠ, ರಾಜ್ಯ ಕಾರ್ಯದರ್ಶಿ ನೀಲಕಂಠ ಕಂದಗಲ್ಲ, ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಆನಂದ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.