ಇಬ್ಬರು ಭ್ರಷ್ಟರ ಬಂಧನ: ಎಸಿಬಿ ವಶದಲ್ಲಿ ಎಸ್‌.ಎಂ.ಬಿರಾದಾರ್‌, ರುದ್ರೇಶಪ್ಪ 


Team Udayavani, Nov 26, 2021, 7:50 AM IST

ಇಬ್ಬರು ಭ್ರಷ್ಟರ ಬಂಧನ: ಎಸಿಬಿ ವಶದಲ್ಲಿ ಎಸ್‌.ಎಂ. ಬಿರಾದಾರ್‌, ರುದ್ರೇಶಪ್ಪ 

ಬೆಂಗಳೂರು: ಎರಡು ದಿನಗಳ ಕಾಲ ರಾಜ್ಯದ 15 ಭ್ರಷ್ಟ ಅಧಿಕಾರಿಗಳನ್ನು ಬೇಟೆಯಾಡಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಗುರುವಾರ ಕಲಬುರಗಿ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್‌ ಎಸ್‌.ಎಂ. ಬಿರಾದಾರ ಮತ್ತು ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ ಅವರನ್ನು ಬಂಧಿಸಿದ್ದಾರೆ.

ಎಲ್ಲ 15 ಆರೋಪಿಗಳು ಆದಾಯಕ್ಕಿಂತ ನೂರಾರು ಪಟ್ಟು ಅಧಿಕ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಬುಧವಾರ ಮತ್ತು ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕಲಬುರಗಿ, ಮಂಡ್ಯ, ಬಳ್ಳಾರಿ, ಬೆಳಗಾವಿ ಸಹಿತ 68 ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು. ಆರೋಪಿತ ಎಲ್ಲ ಅಧಿಕಾರಿಗಳ ಬ್ಯಾಂಕ್‌ ಲಾಕರ್‌ಗಳನ್ನೂ ಪರಿಶೀಲಿಸಲಾಗಿದೆ. ಆದರೆ ಯಾವುದೇ ದಾಖಲೆಗಳು, ಇತರ ವಸ್ತುಗಳು ಪತ್ತೆಯಾಗಿಲ್ಲ ಎಂದು ಎಸಿಬಿ ಮೂಲಗಳು ತಿಳಿಸಿವೆ.

ನೋಟಿಸ್ ಜಾರಿ:

ಆರೋಪಿತ 15 ಮಂದಿ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ಸೋಮವಾರದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ವಿಚಾರಣೆಗೆ ಬರುವಾಗ ವೃತ್ತಿ ಆರಂಭಿಸಿದ ದಿನಗಳಿಂದ ಇದುವರೆಗೆ ಪಡೆದಿರುವ ವೇತನದ ರಸೀದಿ, ಖರ್ಚು ವೆಚ್ಚದ ರಸೀದಿಗಳ ಸಹಿತ ಎಲ್ಲ ದಾಖಲೆಗಳನ್ನು ತರಬೇಕು, ಯಾವ ಮೂಲಗಳಿಂದ ಈ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಲಾಗಿದೆ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಲಾಕರ್ ಖಾಲಿ ಮಾಡಿದ ಭ್ರಷ್ಟರು : ಬುಧವಾರ ಎಲ್ಲ ಭ್ರಷ್ಟ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳನ್ನು ಶೋಧಿಸಿದ್ದ ಎಸಿಬಿ ಅಧಿಕಾರಿಗಳು ಗುರುವಾರ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಠೇವಣಿಗಳು ಮತ್ತು ಲಾಕರ್‌ಗಳನ್ನು ಜಾಲಾಡಿದ್ದಾರೆ. ಆದರೆ ಯಾವುದೇ ವಸ್ತುಗಳು ಮತ್ತು ದಾಖಲೆಗಳು ಸಿಕ್ಕಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಇತ್ತೀಚೆಗೆ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಆರೋಪಿತ ಅಧಿಕಾರಿಗಳು ತಮ್ಮ ಲಾಕರ್‌ಗಳನ್ನು ಖಾಲಿ ಮಾಡಿರುವ ಮಾಹಿತಿ ಸಿಕ್ಕಿದೆ. ಅದಕ್ಕೆ ಪೂರಕವಾದ ದಾಖಲೆಗಳನ್ನು ಬ್ಯಾಂಕ್‌ಗಳಿಂದ ಪಡೆಯಲಾಗುತ್ತದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.