ತಳ್ಳು ಗಾಡಿ ವ್ಯಾಪಾರಿಗಳಲ್ಲಿ ಆತಂಕದ ಕಾರ್ಮೋಡ


Team Udayavani, Nov 26, 2021, 10:48 AM IST

ತಳ್ಳುಗಾಡಿ

ಬೆಂಗಳೂರು: ಟೊಮ್ಯಾಟೋ ಸೇರಿದಂತೆ ಇನ್ನಿತರ ತರಕಾರಿ ಬೆಲೆ ಏರಿಕೆಯ ಎಫೆಕ್ಟ್ ಕೇವಲ ಗ್ರಾಹಕರ ಮೇಲೆ ಅಷ್ಟೇ ಅಲ್ಲದೆ ತಳ್ಳುಗಾಡಿ ಮೂಲಕ ತರಕಾರಿ, ಹೂವು, ಹಣ್ಣುಗಳನ್ನು ಮಾರಾಟ ಮಾಡಿ ಬದುಕು ಕಟ್ಟಿಕೊಂಡಿರುವ ನೂರಾರು ಬಡ ವ್ಯಾಪಾರಿಗಳ ಬದುಕಿನ ಮೇಲೂ ಆತಂಕದ ಕಾರ್ಮೋಡ ಕವಿಯುವಂತೆ ಮಾಡಿದೆ.

ಒಂದೆಡೆ ಸಾಲಗಾರರ ಕಾಟ ಮತ್ತೂಂದೆಡೆ ತುತ್ತಿನ ಚೀಲ ತುಂಬಿಸಿಕೊಳ್ಳಲು ಹೋರಾಟ ಪರಿಸ್ಥಿತಿ ಹೀಗೆ ಮುಂದುವರಿದರೆ ಹೇಗಪ್ಪಾ ಎಂದು ಆತಂಕ ಅವರನ್ನು ಕಾಡುತ್ತಿದೆ. ಕಳೆದ ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ಟೊಮ್ಯಾಟೋ, ಬೀನ್ಸ್‌ ಸೇರಿದಂತೆ ಇನ್ನಿತರ ತರಕಾರಿಗಳ ಬೆಲೆ ಶತಕದ ಗಡಿದಾಟಿದ್ದು ಅಧಿಕ ಬೆಲೆಕೊಟ್ಟು ಖರೀದಿಸಿ ಅವುಗಳನ್ನು ತಳ್ಳುವ ಗಾಡಿಯಲ್ಲಿಟ್ಟುಕೊಂಡು ಮಾರಾಟ ಮಾಡುವ ಮನಸ್ಥಿತಿ ವ್ಯಾಪಾರಿಗಳಲಿಲ್ಲ.

ಬಿಬಿಎಂಪಿಯಲ್ಲಿ ಸುಮಾರು 60 ಸಾವಿರ ಜನ ಬೀದಿ ಬದಿ ವ್ಯಾಪಾರಿಗಳು ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದಾರೆ. ಅದರಲ್ಲಿ ಸುಮಾರು 22 ಸಾವಿರ ಮಂದಿ ಬೀದಿ ವ್ಯಾಪಾರಿಗಳಿಗೆ ಮಾತ್ರ ಪಾಲಿಕೆ ವತಿಯಿಂದ ಗುರುತಿನ ಚೀಟಿ ನೀಡಲಾಗಿದೆ. ಅದರಲ್ಲಿ ಶೇ.70ರಷ್ಟು ಮಂದಿ ತಳ್ಳುವ ಗಾಡಿಯಲ್ಲಿ ಬೀದಿ ಬದಿಗಳಲ್ಲಿ ತರಕಾರಿ, ಹಣ್ಣು ಹಂಪಲುಗಳನ್ನು ಮಾರಾಟ ಮಾಡುವವರು ಇದ್ದಾರೆ.

ಇದನ್ನೂ ಓದಿ:- ಹಾಜರಿ ಹಾಕಿ ಶಾಲೆಗೆ ಚಕ್ಕರ್‌ ಹೊಡೆದ ಶಿಕ್ಷಕರು

ಆದರೆ ಈಗ ಟೊಮ್ಯಾಟೋ ಸೇರಿದಂತೆ ಇನ್ನಿತರ ತರಕಾರಿ ದರಗಳು ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಶೇ.80ರಷ್ಟು ತಳ್ಳುಗಾಡಿ ವ್ಯಾಪಾರಿಗಳು ಸದಸ್ಯ ಪರಿಸ್ಥಿತಿಯಲ್ಲಿ ಮಾರಾಟವನ್ನು ನಿಲ್ಲಿಸಿ ಬಿಟ್ಟಿದ್ದಾರೆ. ಬೆಲೆ ಇಳಿಕೆ ಆಗುವ ವರೆಗೂ ತಳ್ಳುವಬಂಡಿಗಳಲ್ಲಿ ವ್ಯಾಪಾರ ಅಸಾಧ್ಯ ಎಂಬುವುದು ವ್ಯಾಪಾರಿಗಳ ಮಾತಾಗಿದೆ. ಸಾಲಗಾರರು ಸುಮ್ಮನೆ ಬಿಡುವುದಿಲ್ಲ: ಬಡ್ಡಿ ರೂಪದಲ್ಲಿ ಪ್ರತಿ ನಿತ್ಯ 2 ಸಾವಿರ ರೂ. ಸಾಲ ತಂದು ತಳ್ಳುಗಾಡಿಗಳ ಮೂಲಕ ಬೀದಿ, ಬೀದಿ ತಿರುಗಿ ಟೊಮ್ಯಾಟೋ ಸೇರಿದಂತೆ ಇನ್ನಿತರ ತರಕಾರಿಗಳನ್ನು ಮಾರಾಟ ಮಾಡಿ ದಿನಕ್ಕೆ 500 ರೂ. ಸಂಪಾದಿಸುತ್ತಿದ್ದೆ.

ಆದರೆ ಈಗ ತಳ್ಳುಗಾಡಿಗಳ ವ್ಯಾಪಾರಕ್ಕೆ ತೆರಳಿದರೆ ಅಸಲು ಕೂಡ ಬರುವುದು ಕಷ್ಟ ಎಂದು ಪೀಣ್ಯದ 2ನೇ ಹಂತದ ತರಕಾರಿ ವ್ಯಾಪಾರಿ ಜಗದೀಶ್‌ ಅಳಲು ತೋಡಿಕೊಳ್ಳುತ್ತಾರೆ. ಜತೆಗೆ ಸಾಲ ಕೊಟ್ಟವರಿಗೆ ಅವತ್ತೆ ಬಡ್ಡಿ ಸಮೇತ ಹಣ ನೀಡದೆ ಹೋದರೆ ಅವರು ಕೂಡ ಸುಮ್ಮನಿರುವುದಿಲ್ಲ. ವ್ಯಾಪಾರ ಆಗದೆ ಹೋದರೆ ಸಾಲಗಾರರಿಗೆ ಹಣ ಮರಳಿಸುವುದು ಕಷ್ಟ ವಾಗಲಿದೆ. ಹಾಗಾಗಿ ಇನ್ನೂ ಕೆಲವು ದಿನಗಳವರೆಗೆ ವ್ಯಾಪಾರ ಮಾಡುವುದನ್ನು ನಿಲ್ಲಿಸಿಬಿಡುವ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳುತ್ತಾರೆ.

ಹೆಂಡತಿ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ. ತರಕಾರಿ ಮಾರಾಟ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇನೆ. ಆದರೆ ಬೆಲೆ ಹೆಚ್ಚಳದಿಂದಾಗಿ ತರಕಾರಿ ವ್ಯಾಪಾರ ನಿಲ್ಲಿಸಿದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ವ್ಯಾಪಾರ ಮಾಡುವುದನ್ನು ನಿಲ್ಲಿಸಿದ್ದೇನೆ. ಹೀಗಾಗಿ ಮನೆ ಬಾಡಿಗೆ ಹೇಗಪ್ಪ ಕಟ್ಟುವುದು ಎಂಬ ಚಿಂತೆ ಶುರುವಾಗಿದೆ ಎಂದು ಹೆಗ್ಗನಹಳ್ಳಿಯ ವ್ಯಾಪಾರಿ ಪುಟ್ಟಸ್ವಾಮಿ ಹೇಳುತ್ತಾರೆ.

 ಟೊಮ್ಯಾಟೋ ಸೇರಿದಂತೆ ಇನ್ನಿತರ ತರಕಾರಿಗಳ ದರಗಳು ಕೈ ಸುಡುತ್ತಿರುವ ಹಿನ್ನೆಲೆಯಲ್ಲಿ ಅದು ಗ್ರಾಹಕರಿಗೆ ಅಷ್ಟೇ ಅಲ್ಲ ತಳ್ಳುಗಾಡಿಯಲ್ಲಿ ಮಾರಾಟ ಮಾಡಿ ಜೀವನ ನಡೆಸುತ್ತಿರುವ ಮಾರಾಟಗಾರರ ಮೇಲೆ ಪ್ರಭಾವ ಬೀರಿದೆ. ಸಾಲ ಮಾಡಿ ವ್ಯಾಪಾರ ಮಾಡುತ್ತಿದ್ದವರು ಸದ್ಯದ ಮಟ್ಟಿಗೆ ತಳ್ಳುಗಾಡಿಯಲ್ಲಿನ ವ್ಯಾಪಾರ ನಿಲ್ಲಿಸಿದ್ದಾರೆ. – ಸಿ.ಇ. ರಂಗಸ್ವಾಮಿ, ಕರ್ನಾಟಕ ಬೀದಿ ಬದಿ, ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯರು

 “ಕಳೆದೆಡು ದಿನಗಳಿಂದ ಮಹಾರಾಷ್ಟ್ರದ ನಾಸಿಕ್‌ ಭಾಗದಿಂದ ಟೊಮ್ಯಾಟೋ ಬೆಂಗಳೂರು ಮಾರುಕಟ್ಟೆಗೆ ಪೂರೈಕೆ ಆಗುತ್ತಿದೆ. ಐದು ಲಾರಿಗಳಲ್ಲಿ ಟೊಮ್ಯಾಟೊ ಪೂರೈಕೆ ಆಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಟೊಮ್ಯಾಟೋ ಬೆಲೆ ನಿಯಂತ್ರಣಕ್ಕೆ ಬರುವ ನಿರೀಕ್ಷೆಯಿದೆ.” – ಆರ್‌.ವಿ.ಗೋಪಿ, ಕೆ.ಆರ್‌.ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.