![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 28, 2021, 6:50 AM IST
ಮುಂಬಯಿ: ದಕ್ಷಿಣ ಆಫ್ರಿಕ ಸೇರಿ ಅನೇಕ ರಾಷ್ಟ್ರಗಳಲ್ಲಿ ಕೊರೊನಾದ ಒಮಿಕ್ರಾನ್ ರೂಪಾಂತರಿ ಹೆಚ್ಚಲಾ ರಂಭಿಸಿರುವ ಬೆನ್ನಲ್ಲೇ ಭಾರತದಲ್ಲೂ ಕಠಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚಿಸಿದೆ.
ಆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರವು ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕಠಿನ ನಿಯಮ ಪಾಲನೆಗೆ ಮುಂದಾಗಿದೆ.
ರಾಜ್ಯಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಕೇಂದ್ರ ಸರಕಾರ ಸೂಚಿಸಿರುವ ಎಲ್ಲ ನಿಯಮಗಳಿಗೆ ಬದ್ಧರಾಗಿರಬೇಕು.
ದೇಶೀಯ ಪ್ರಯಾಣಿಕರು ಸಂಪೂರ್ಣ ಲಸಿಕೆ ಪಡೆದವರಾಗಿರಬೇಕು ಅಥವಾ 72 ಗಂಟೆಗಳೊಳಗೆ ಮಾಡಿಸಿರುವ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು.
ಇದನ್ನೂ ಓದಿ:ಹೊಸ ರೂಪಾಂತರಿಯಿಂದ ಆತಂಕ : ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ
ಕಾರು, ಬಸ್, ಕಚೇರಿ ಸೇರಿ ಯಾವುದೇ ಪ್ರದೇಶದಲ್ಲಿಯೂ ಕೊರೊನಾ ನಿಯಮ ಉಲ್ಲಂಘನೆ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ, 500 ರೂ.ನಿಂದ 50,000 ರೂ.ವರೆಗಿನ ದಂಡ ವಿಧಿಸಲಾಗುವುದು. ಹಾಗೆಯೇ ಸಾರ್ವಜನಿಕ ಸಾರಿಗೆಗಳನ್ನು ಬಳಸುವುದಕ್ಕೆ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ.
ಯಾವುದೇ ಕಾರ್ಯಕ್ರಮ, ಸಿನೆಮಾ ಮಂದಿರಗಳಲ್ಲಿ ಶೇ.50 ಆಸನ ಭರ್ತಿ ಮಾಡುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಸಂಪೂರ್ಣ ಲಸಿಕೆ ಪಡೆದಿರಬೇಕು ಎಂದೂ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.