![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 28, 2021, 7:33 PM IST
ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿದೆ. ಭಾರತದಲ್ಲಿ ಚಲನಚಿತ್ರ ಚಿತ್ರ ಚಿತ್ರೀಕರಣ ಮಾಡಲು ಜಗತ್ತಿನಾದ್ಯಂತದ ಚಲನಚಿತ್ರ ನಿರ್ಮಾಪಕರನ್ನು ಭಾರತ ಸ್ವಾಗತಿಸುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಮಂತ್ರಿ ಅನುರಾಗ್ ಠಾಕೂರ್ ನುಡಿದರು.
ಗೋವಾದ ಪಣಜಿ ಸಮೀಪದ ಶಾಮಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದು ಅವರು ಮಾತನಾಡಿದರು.
ಪ್ರಸಕ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೇಶ-ವಿದೇಶಗಳ 10,000 ಪ್ರತಿನಿಧಿಗಳು ಭಾಗವಹಿಸಿದ್ದರು. 75 ಭಾರತೀಯ ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು ಎಂದ ಕೇಂದ್ರ ಸಚಿವ ಅನುರಾಗ್ ಠಾಕೂರ್-ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾದ ದೇಶ-ವಿದೇಶಿಯ ಚಲನಚಿತ್ರ ಕಲಾವಿದರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾತನಾಡಿ, ಕಳೆದ 9 ದಿನಗಳಲ್ಲಿ ನೀವೆಲ್ಲರೂ ಹೊಸ ಚಲನಚಿತ್ರಗಳನ್ನು ವೀಕ್ಷಿಸಿದ್ದೀರಿ ಮತ್ತು ಇಲ್ಲಿ ಹೊಸ ಕನಸನ್ನು ಕಟ್ಟಿಕೊಂಡು ಹೋಗುತ್ತಿದ್ದೀರಿ. ಗೋವಾ ರಾಜ್ಯವು ಸುಂದರ ತಾಣವಾಗಿದೆ. ಚಲನಚಿತ್ರ ನಿರ್ಮಾಣಕ್ಕೆ ಗೋವಾ ಆಕರ್ಷಣೆಯ ಕೇಂದ್ರವಾಗಿದೆ. ಗೋವಾದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಲಿದೆ ಎಂಬ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಬಾಲಿವುಡ್ ನಟರಾದ ರಣಬೀರ್ ಕಪೂರ್, ಮನೋಜ್ ವಾಜಪೇಯಿ, ಮಾಧುರಿ ದೀಕ್ಷಿತ್ ರವರನ್ನು ಸನ್ಮಾನಿಸಲಾಯಿತು.
ಬ್ರಿಕ್ಸ್ ಫಿಲ್ಮ್- ಬರಾಕಾತ್ (ಸೌತ್ ಆಫ್ರಿಕಾ), ಸನ್ ಓವರ್ ಮಿ ನೆವರ್ ಸೆಟ್ಸ್ (ರಷ್ಯಾ) ಚಲನಚಿತ್ರಗಳು ಆಯ್ಕೆಯಾದವು. ರಿಂಗ್ ವಾಂಡರಿಂಗ್ ರವರಿ ಗೋಲ್ಡನ್ ಪಿಕೋಕ್ (40 ಲಕ್ಷ ರೂ ಮತ್ತು ಪ್ರಶಸ್ತಿ), ಸೈಮನ್ ಪೇರಿಯೇಲಾ ರವರಿ ಜ್ಯೂರಿ ಸ್ಪೇಶಲ್ ಮೆನ್ಶನ್ ಅವಾರ್ಡ್, ವಾಕ್ಲಾ ಕಡ್ರಾನ್ಕಾ ರವರಿಗೆ ಉತ್ತಮ ನಿರ್ದೇಶಕ ಪ್ರಶಸ್ತಿ, ಜಿತೇಂದ್ರ ಜೋಶಿ ಉತ್ತಮ ನಟ, ರಿಂಗ್ ವಾಂಡೆರಿಂಗ್(ಜಪಾನ್) ಚಲನಚಿತ್ರಕ್ಕೆ ಗೋಲ್ಡನ್ ಪಿಕೋಕ್ ಅವಾರ್ಡ್, ದಿ ಫಸ್ಟ್ ಫಾಲನ್ ಚಲನಚಿತ್ರಕ್ಕೆ ಸ್ಪೆಶಲ್ ಜ್ಯೂರಿ ಅವಾರ್ಡ್ ನೀಡಿ ಗೌರವಿಸಲಾಯಿತು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.