![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 29, 2021, 9:45 PM IST
ಮುಂಬೈ:ಮುಂಬೈನ ನಿವೃತ್ತ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವ ಇರಾದೆಯಲ್ಲಿದೆ.
ಜೂನ್ನಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇಬಾಶಿಶ್ ಚಕ್ರವರ್ತಿ ನೇತೃತ್ವದಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ ನೀಡಿತ್ತು. ಚಕ್ರವರ್ತಿ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದನ್ನು ಸ್ವೀಕರಿಸಿದೆ.
ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೇ, ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದು, ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ವಿರುದ್ಧ ಆರೋಪ ಮಾಡಿದ್ದ ಆರೋಪ ಹೊರಿಸಲಾಗಿದೆ.
ಇದನ್ನೂ ಓದಿ:ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್ : ಉಡುಪಿ ಜಿಲ್ಲಾಧಿಕಾರಿ
ವಾರಂಟ್ ರದ್ದು:
ಮತ್ತೊಂದೆಡೆ, ಮಾಜಿ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಆರೋಪಗಳ ವಿರುದ್ಧ ತನಿಖೆ ನಡೆಸಲು ರಚಿಸಲಾಗಿರುವ ನ್ಯಾ.ಕೈಲಾಶ್ ಚಂಡೀವಾಲ್ ನೇತೃತ್ವದ ಸಮಿತಿ ಮುಂದೆ ಪರಂಬೀರ್ ಸಿಂಗ್ ಮಾಡಿದ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟ್ ಅನ್ನು ರದ್ದುಗೊಳಿಸಿದೆ ಸಮಿತಿ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 15 ಸಾವಿರ ರೂ. ನೀಡಿದ್ದಕ್ಕೆ, ಸೂಕ್ತ ದಾಖಲೆಗಳನ್ನು ವಕೀಲರ ಮೂಲಕ ನೀಡಿದ್ದಾರೆ. ಆಯೋಗದ ಮುಂದೆ ಮಾಜಿ ಸಚಿವ ದೇಶ್ಮುಖ್ ಮಂಗಳವಾರ ಹಾಜರಾಗಲಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.