![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 30, 2021, 10:07 AM IST
ಮುದ್ದೇಬಿಹಾಳ: ರವಿವಾರ ಮದ್ಯಾಹ್ನ 2 ಗಂಟೆಯಿಂದ ಕಾಣೆಯಾಗಿದ್ದ 11 ವರ್ಷದ ವಿಶೇಷ ಚೇತನ ಬಾಲಕ ಸಂತೋಷ ಮಾದರ ಗ್ರಾಮದ ಪಕ್ಕದ ಹಳ್ಳದಲ್ಲಿ ಕುಳಿತ ಸ್ಥಿತಿಯಲ್ಲಿ ಸೋಮವಾರ ಪತ್ತೇ ಆಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಬನೋಶಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮದ್ಯಾಹ್ನದಿಂದ ಕಾಣೆಯಾಗಿದ್ದ ಈತನಿಗಾಗಿ ಪಾಲಕರು ಎಲ್ಲಾ ಕಡೆ ಹುಡುಕಾಡಿದ್ದರು. ಈತನ ಎಲ್ಲಾದರೂ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಕರೆತರಲು ಅಥವಾ ಮಾಹಿತಿ ನೀಡಲು ಆತನ ಭಾವಚಿತ್ರ ಸಮೇತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿತ್ತು. ಸೋಮವಾರ ಮದ್ಯಾಹ್ನ ಗ್ರಾಮದ ಪಕ್ಕದ ಹಳ್ಳದ ಕಡೆ ಆಕಸ್ಮಿಕವಾಗಿ ಹೋಗಿದ್ದ ಯುವಕರಿಬ್ಬರ ಕಣ್ಣಿಗೆ ಬಾಲಕ ಬಿದ್ದಿದ್ದಾನೆ. ಕೂಡಲೇ ಪಾಲಕರನ್ನು ಸ್ಥಳಕ್ಕೆ ಕರೆಸಿ ಹಳ್ಳದ ನೀರಲ್ಲಿ ತಲೆ ಮಾತ್ರ ಕಾಣುವಂತೆ ಕುಳಿತಿದ್ದ ಆತನನ್ನು ಉಪಾಯದಿಂದ ಮೇಲೆ ಕರೆತಂದಿದ್ದಾರೆ.
ಬಾಲಕ ರಾತ್ರಿಯಿಡಿ ಹಳ್ಳದ ನೀರಲ್ಲಿ ಕುಳಿತು, ತನ್ನ ಸುತ್ತಲೂ ಇದ್ದ ಹಳ್ಳದ ಕೆಸರನ್ನು ದಂಡೆಯ ಮೇಲೆ ಎರಚಿ ತನ್ನ ಸುತ್ತಲೂ ಹೊಂಡವೊಂದನ್ನು ನಿರ್ಮಿಸಿಕೊಂಡಿದ್ದ. ಇನ್ನೂ ಸ್ವಲ್ಪ ಸಮಯ ಅಲ್ಲೇ ಬಿಟ್ಟಿದ್ದರೆ ಹಳ್ಳದ ನೀರಲ್ಲಿ ಮುಳುಗುವ ಸಂಭವವಿತ್ತು, ಸದ್ಯ ಬಾಲಕ ಆರೋಗ್ಯವಾಗಿದ್ದು ಪಾಲಕರ ಆಸರೆಯಲ್ಲಿದ್ದಾನೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.