ತಿಂಗಳು ಕಳೆದರೂ ಸಿಗದ ಸಮವಸ್ತ್ರ

ಕಾಯುತ್ತಿದ್ದಾರೆ ಕರಾವಳಿಯ 4.83 ಲಕ್ಷದಷ್ಟು ಶಾಲಾ ವಿದ್ಯಾರ್ಥಿಗಳು

Team Udayavani, Dec 1, 2021, 7:35 AM IST

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ಸಾಂದರ್ಭಿಕ ಚಿತ್ರ...

ಉಡುಪಿ: ಶಾಲೆಗಳಲ್ಲಿ ಭೌತಿಕ ತರಗತಿ ಆರಂಭವಾಗಿ ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪೂರೈಕೆ ಆಗಿಲ್ಲ.

ಸರಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಮತ್ತು ಕೇಂದ್ರ ಸರಕಾರದ ಸರ್ವಶಿಕ್ಷಾ ಅಭಿಯಾನ (ಸಮಗ್ರ ಶಿಕ್ಷಣ)ದಿಂದ ತಲಾ ಒಂದು ಜತೆ ಸಮವಸ್ತ್ರವನ್ನು ಪ್ರತೀ ವರ್ಷ ನೀಡಲಾಗುತ್ತದೆ.

ಪ್ರಸಕ್ತ ವರ್ಷ ಪೂರ್ವ ಪ್ರಾಥಮಿಕ ತರಗತಿಯಿಂದ ಪಿಯುಸಿ ಸಹಿತ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್‌ಗಳಿಗೂ ಭೌತಿಕ ತರಗತಿ ಆರಂಭವಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಹಿಂದಿನ ವರ್ಷದ ಸಮವಸ್ತ್ರ ಧರಿಸಿ, ಅದಿಲ್ಲದಿದ್ದರೆ ಸಾದಾ ದಿರಿಸಿನಲ್ಲಿ ಶಾಲೆಗೆ ಹೋಗುತ್ತಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅರ್ಧಭಾಗ ಪೂರ್ಣ ವಾಗಿದೆ. ಉಳಿದ ಅರ್ಧಭಾಗ ವಾದರೂ ವಿದ್ಯಾರ್ಥಿಗಳು ಹೊಸ ಸಮವಸ್ತ್ರ ದಲ್ಲಿ ಶಾಲೆಗೆ ಹೋಗಲು ಸರಕಾರ ಅವಕಾಶ ಮಾಡಿಕೊಡಬೇಕು ಎಂಬುದು ಹೆತ್ತವರ ಆಗ್ರಹ.

ದಕ್ಷಿಣ ಕನ್ನಡದಲ್ಲಿ 1ರಿಂದ 10ನೇ ತರಗತಿಯಲ್ಲಿ 1,67,744 ಹುಡುಗರು, 1,54,920 ಹುಡುಗಿ ಯರು ಸೇರಿ 3,22,664 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಸರಕಾರಿ ಮತ್ತು ಅನುದಾನಿತ ಶಾಲೆಗಳ 1.20 ಲಕ್ಷ ವಿದ್ಯಾರ್ಥಿಗಳಿಗೆ ಸರಕಾರದಿಂದ ಸಮವಸ್ತ್ರ ನೀಡಲಾಗುತ್ತದೆ. ಉಡುಪಿ ಜಿಲ್ಲೆಯ 1ರಿಂದ 10ನೇ ತರಗತಿಯಲ್ಲಿ 83,391 ಹುಡುಗರು, 76,791 ಹುಡುಗಿಯರು ಸೇರಿ 1,60,182 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಸರಕಾರಿ, ಅನುದಾನಿತ ಶಾಲೆಯ ಸುಮಾರು 80 ಸಾವಿರ ಮಂದಿಗೆ ಸಮವಸ್ತ್ರ ನೀಡಲಾಗುತ್ತದೆ.

ಇದನ್ನೂ ಓದಿ:ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಮವಸ್ತ್ರಕ್ಕೆ ಸಂಬಂಧಿಸಿ ರಾಜ್ಯ ಮಟ್ಟದಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣ ಗೊಂಡಿರುವುದರಿಂದ ಶೀಘ್ರದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಿಗುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಕ್ಕೂ ಏಕಕಾಲದಲ್ಲಿ ಪೂರೈಕೆ ಆಗಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಶೂ, ಸಾಕ್ಸ್‌ ಅನುಮಾನ
ಪ್ರತೀ ವರ್ಷ ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರದ ಜತೆಗೆ ಶೂ, ಸಾಕ್ಸ್‌ ಕೂಡ ವಿತರಣೆ ಮಾಡ ಲಾಗುತ್ತಿತ್ತು. ಇವುಗಳ ಖರೀದಿ ಪ್ರಕ್ರಿಯೆ ಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಯ ಮೂಲಕ ಮಾಡ ಲಾಗುತ್ತದೆ. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ ಶಾಲೆಯ ಜಂಟಿ ಖಾತೆಗೆ ಅನುದಾನ ನೀಡಲಾಗುತ್ತದೆ. ಆದರೆ ಪ್ರಸಕ್ತ ಸಾಲಿನಲ್ಲಿ ಶೂ, ಸಾಕ್ಸ್‌ ಖರೀದಿಗೆ ಅನುದಾನ ಬಂದಿಲ್ಲ. ಶೂ ಬದಲಿಗೆ ಚಪ್ಪಲಿ ನೀಡಲಾಗುತ್ತಿತ್ತು. ಆದರೆ ಈ ವರ್ಷ ಯಾವುದೇ ಸೂಚನೆ ಬಂದಿಲ್ಲ ಎಂದು ಎಸ್‌ಡಿಎಂಸಿ ಸದಸ್ಯರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ ಶಾಲೆಯ ಸುಮಾರು 80 ಸಾವಿರ, ದ.ಕ. ಜಿಲ್ಲೆಯ ಸುಮಾರು 1.20 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸರಕಾರದಿಂದ ನೀಡಲಾಗುತ್ತದೆ. ಸಮವಸ್ತ್ರ ಪೂರೈಕೆಯಾದ ಕೂಡಲೇ ಶಾಲೆಗಳಲ್ಲಿ ಮಕ್ಕಳಿಗೆ ವಿತರಣೆ ಮಾಡಲಾಗುತ್ತದೆ.
-ಮಲ್ಲೇಸ್ವಾಮಿ, ಎನ್‌.ಎಚ್‌. ನಾಗೂರ
ಶಿಕ್ಷಣ ಇಲಾಖೆ ಉಪನಿರ್ದೇಶಕರು, ದ.ಕ., ಉಡುಪಿ ಜಿಲ್ಲೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.