ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಜನೆವರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಗೆ ಹಾಜರಾಗಿ ಪ್ರಸ್ತುತ ಪಡಿಸಬೇಕು

Team Udayavani, Dec 1, 2021, 3:18 PM IST

ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಕಾರವಾರ: ಜಿಲ್ಲೆಯಲ್ಲಿ ನರೇಗಾ, ಸ್ವತ್ಛ ಭಾರತ ಮಿಷನ್‌, ಶೌಚಮುಕ್ತ ಗ್ರಾಮ, ಅಮೃತ ಗ್ರಾಮ ಸೇರಿದಂತೆ ವಿವಿಧ ಯೋಜನೆಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳು ನಿರಂತರ ಮಳೆಯ ಕಾರಣದಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ ಮಳೆ ಇಲ್ಲದ ಕಾರಣ ಎಲ್ಲ ತಾಲೂಕಿನ ಸಹಾಯಕ ನಿರ್ದೇಶಕರು, ತಾಂತ್ರಿಕ ಸಂಯೋಜಕರು ಹಾಗೂ ಸಹಾಯಕರು ಒಗ್ಗೂಡಿಕೊಂಡು ಡಿಸೆಂಬರ್‌ ಅಂತ್ಯದೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ, ನೀಡಲಾಗಿರುವ ಗುರಿ ಸಾಧಿಸಬೇಕು ಎಂದು ಜಿಪಂ ಸಿಇಒ ಪ್ರಿಯಾಂಕಾ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಸಹಾಯಕ ನಿರ್ದೇಶಕರು, ತಾಂತ್ರಿಕ ಸಂಯೋಜಕರು ಹಾಗೂ ತಾಂತ್ರಿಕ ಸಹಾಯಕರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಮಳೆಯಾದ ಪರಿಣಾಮ ವಿವಿಧ ಯೋಜನೆಯಡಿ ಕೈಗೊಳ್ಳಲಾದ ಅಂಗನವಾಡಿ ಕಟ್ಟಡ, ಬಚ್ಚಲು ಗುಂಡಿ, ಶಾಲಾ ಶೌಚಾಲಯ, ಘನತ್ಯಾಜ್ಯ ವಿಲೇವಾರಿ ಘಟಕ, ಆಟದ ಮೈದಾನ, ಇಕೋ ಪಾರ್ಕ್‌ ನಿರ್ಮಾಣದಂತ ಕಾಮಗಾರಿಗಳ ಪ್ರಗತಿ ಸಾಧನೆಗೆ ಹಿನ್ನಡೆಯಾಗಿದೆ.ಸಧ್ಯ ಜಿಲ್ಲೆಯಲ್ಲಿ ಮಳೆ ಆಗದಿರುವ ಕಾರಣ ಈ ಎಲ್ಲ ಕಾಮಗಾರಿಗಳನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಹಾಗೂ ಜಿಲ್ಲೆಗೆ ನೀಡಿದ ಗುರಿ ತಲುಪಲು ಇದು ಸೂಕ್ತ ಸಮಯವಾಗಿದೆ.

ಆದ್ದರಿಂದ ಎಲ್ಲ ತಾಲೂಕಿನ ಸಹಾಯಕ ನಿರ್ದೇಶಕರು, ತಾಂತ್ರಿಕ ಸಂಯೋಜಕರು ಹಾಗೂ ಸಹಾಯಕ ಅಭಿಯಂತರರು ಜವಾಬ್ದಾರಿ ಅರಿತು ತಮ್ಮ ವ್ಯಾಪ್ತಿಯ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ಪೂರ್ಣಗೊಳಿಸಿದ ವರದಿಯನ್ನು ಕಾಮಗಾರಿಗಳ ಕ್ರಮಾನುಸಾರ ಛಾಯಾಚಿತ್ರ ಸಮೇತವಾಗಿ ಜನೆವರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಗೆ ಹಾಜರಾಗಿ ಪ್ರಸ್ತುತ ಪಡಿಸಬೇಕು ಎಂದರು.

ಆಯಾ ತಾಲೂಕಿನ ಶಾಲಾ ಆವರಣದಲ್ಲಿ ಜಾಗದ ಲಭ್ಯತೆಯಿದ್ದರೆ ಅಗತ್ಯಕ್ಕೆ ಅನುಗುಣವಾಗಿ ದೊಡ್ಡ ಪ್ರಮಾಣದ ಆಟದ ಮೈದಾನ ನಿರ್ಮಿಸಲು ಕ್ರಮ ವಹಿಸಬೇಕು. ತಾಲೂಕಿಗೆ ಒಂದರಂತೆ ಪ್ರೌಢಶಾಲೆಗಳಲ್ಲಿ ಪಿಂಕ್‌ ಶೌಚಾಲಯ ನಿರ್ಮಿಸಬೇಕು. ಜೊತೆಗೆ ನರೇಗಾದಡಿ ತಾಲೂಕುವಾರು ನೀಡಲಾದ ಮಾನವ ದಿನಗಳ ಸೃಜನೆಯ ಗುರಿ ಸಾಧಿಸಬೇಕು. ಕಾಮಗಾರಿ ಪ್ರಾರಂಭ ಹಾಗೂ ಪೂರ್ಣಗೊಳಿಸಲು ಗ್ರಾಪಂ ಮಟ್ಟದಲ್ಲಿ ಏನಾದರೂ ತೊಂದರೆಯಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು.

ಯಾವುದೇ ಸಂದರ್ಭದಲ್ಲಿಯೂ ಸಣ್ಣಪುಟ್ಟ ಕಾರಣಗಳನ್ನು ನೀಡಿ ಕಾಮಗಾರಿ ಪ್ರಗತಿಗೆ ಅಡ್ಡಿಯಾಗುವುದನ್ನು ಸಹಿಸಲಾಗದು. ಸರಿಯಾಗಿ ಕಾರ್ಯ ನಿರ್ವಹಿಸದ ತಾಂತ್ರಿಕ ಸಂಯೋಜಕರು ಹಾಗೂ ಸಹಾಯಕರಿಗೆ ನೋಟೀಸ್‌ ನೀಡಲಾಗುವುದು. ಹೀಗಾಗಿ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಪಂ ಅಭಿವೃದ್ಧಿ ವಿಭಾಗದ ಉಪ ಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ, ಎಲ್ಲ ತಾಲೂಕಿನ ಸಹಾಯಕ ನಿರ್ದೇಶಕರು, ಸಿಇಒ ಆಪ್ತ ಸಹಾಯಕ ಮೈಲಾರಿ, ಬೆಣ್ಣಿ, ಎಡಿಪಿಸಿ ನಾಗರಾಜ್‌, ಡಿಐಎಂಎಸ್‌ ಶಿವಾಜಿ, ಡಿಐಇಸಿ ಸಚಿನ್‌ ಬಂಟ್‌, ತಾಲೂಕು ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.