![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 4, 2021, 3:12 PM IST
ಕುರುಗೋಡು: ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದ ಬೆಳೆ ನಾಶಗೊಂಡ ಹಿನ್ನಲೆ ಸಾಲಬಾಧೆ ತಾಳಲಾರದೆ ಶುಕ್ರವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಚಾನಾಳು ಗ್ರಾಮದ ರೈತ ನರಸಿಂಹ ರೆಡ್ಡಿ (50) ಆತ್ಮಹತ್ಯೆ ಮಾಡಿಕೊಂಡ ರೈತ.
ವಿಷ ಸೇವಿಸಿದ ಬಳಿಕ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆ ಕರೆದೊಯ್ಯಲಾಗಿತ್ತು.
ಮೃತ ರೈತನಿಗೆ ಸ್ವಂತ 8 ಎಕರೆ ಭೂಮಿ ಇದ್ದು, 22 ಎಕರೆ ಸಾಗುವಳಿ ಮಾಡಿದ್ದಾನೆ ಇದರಲ್ಲಿ 10 ಎಕರೆ ಭತ್ತ ಹಾಗೂ 20 ಎಕರೆ ಮೆಣಸಿನಕಾಯಿ ಬೆಳೆ ಬೆಳೆದಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಳೆಯಿಂದ ಬೆಳೆ ನಷ್ಟವಾಗಿದ್ದರಿಂದ, ಬೆಳೆಗಾಗಿ ಬ್ಯಾಂಕ್ ಸೇರಿದಂತೆ ಹೊರಗಡೆ ಒಟ್ಟು 15 ಲಕ್ಷ ಸಾಲ ಮಾಡಿದ್ದಾನೆ. ಹಾಗಾಗಿ ಬೆಳೆಗೆ ಸಾಲ ಮಾಡಿದ್ದನ್ನು ಹೇಗೆ ತೀರಿಸೋದು ಎಂದು ಚಿಂತಿಸಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತನ ಅಂತ್ಯ ಕ್ರಿಯೆ ಸ್ವ ಗ್ರಾಮದಲ್ಲಿ ಶನಿವಾರ ನೆರೆವೇರಲಿದೆ. ಮೃತನಿಗೆ ಪತ್ನಿ ಹಾಗೂ 1 ಗಂಡು ಮಗ ಇದ್ದಾನೆ.
ಈ ಕುರಿತು ಮೋಕಾ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಅಕಾಲಿಕ ಮಳೆಯಿಂದ ಬೆಳೆ ನಾಶಗೊಂಡ ಹಿನ್ನಲೆ ಮದಿರೆ ಗ್ರಾಮದ ರೈತ ಎಂ. ಮೋಹನ್ (34) ಸಾಲಭಾದೆ ತಾಳಲಾರದೆ ಗುರುವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪಿದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.