![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 6, 2021, 1:14 PM IST
ವಿಜಯಪುರ: ಹಿಂದುಳಿದ ಶಾಶ್ವತ ಆಯೋಗ ಇರುವಾಗ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲು ಕಲ್ಪಿಸುವ ವಿಷಯವಾಗಿ ನ್ಯಾ.ಸುಭಾಷ್ ಆಡಿ ನೇತೃತ್ವದ ಸಮಿತಿ ರಚಿಸಿದೆ. ಇದು ಸಮಯ ವ್ಯರ್ಥ ಮಾಡುವ ಹುನ್ನಾರ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಆಕ್ಷೇಪಿಸಿದ್ದಾರೆ.
ಸೋಮವಾರ ನಗರದ ಅಕ್ಟೋಬರ್ 1 ನೀಡಿದ್ದ ಗಡುವಿನ ಸಂದರ್ಭದಲ್ಲಿ ಸರ್ಕಾರ ಕಾಲಾವಕಾಶ ಕೋರಿತ್ತು. ಇದೀಗ ಮತ್ತೆ ಆಡಿ ನೇತೃತ್ವದಲ್ಲಿ ಸಮಿತಿ ರಚಿಸಿರುವುದು ಕಾಲಹರಣದ ಕ್ರಮ ಎಂದರು.
ನ್ಯಾ.ಸುಭಾಷ್ ಆಡಿ ನೇತೃತ್ವದ ಸಮಿತಿ ಶಾಸನ ಬದ್ದವಲ್ಲ. ಶಾಸನ ಬದ್ಧವಾದ ಹಿಂದುಳಿದ ವರ್ಗಗಳ ಶಾಸ್ವತ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.
ಮೀಸಲು ವಿಷಯವಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಬೆಳಗಾವಿ, ಬಾಗಲಕೋಟೆ ಅಥವಾ ವಿಜಯಪುರ ನಗರದಲ್ಲಿ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗುತ್ತದೆ. ಶೀಘ್ರವೇ ಸದರಿ ಕಾರ್ಯಕಾರಿ ಸಭೆ ಕರೆದು ಮುಂದಿನ ಹೋರಾಟದ ಕುರಿತು ನಿರ್ಧರಿಸಲಾಗುತ್ತದೆ ಎಂದರು.
ಇದನ್ನೂ ಓದಿ:ಅಗತ್ಯ ಬಿದ್ದರೆ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ : ಸಚಿವ ನಾಗೇಶ್
ಕಿತ್ತೂರು ಚೆನ್ನಮ್ಮನ ಕಾಲದಿಂದಲೂ ಸಮಾಜ ಒಡೆಯುವ ಹುನ್ನಾರ ನಡೆಯುತ್ತಿದೆ. ಈಗಲೂ ಮುಂದುವರೆದಿದೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಸಮಾಜದ ಸಂಘಟನೆ ಹಾಗೂ 2ಎ ಮೀಸಲು ಸೌಲಭ್ಯ ಕಲ್ಪಿಸುವ ಕುರಿತು ನಿರ್ಧರಿಸಲಾಗುತ್ತದೆ ಎಂದರು.
ಪಂಚಮಸಾಲಿ ಸಮಾಜದ ಎಂ.ಎಸ್.ರುದ್ರಗೌಡರ, ಡಾ.ಬಸನಗೌಡ ಪಾಟೀಲ ನಾಗರಾಳಹುಲಿ, ಶಂಕರಗೌಡ ಬಿರಾದಾರ, ನಿಂಗನಗೌಡ ಸೊಲ್ಲಾಪುರ ಇತರರು ಉಪಸ್ಥಿತರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.