ವಾರಬಂದಿ ಪದ್ದತಿ ತಿದ್ದುಪಡಿಗಾಗಿ ರಸ್ತೆ ತಡೆ-ಪ್ರತಿಭಟನೆ


Team Udayavani, Dec 6, 2021, 3:44 PM IST

25protest

ದೇವದುರ್ಗ: ನಾರಾಯಣಪುರ ಬಲದಂಡೆ ನಾಲೆಗೆ ವಾರಬಂದಿ ಪದ್ಧತಿ ತಿದ್ದುಪಡಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಪದಾಧಿಕಾರಿಗಳು ರವಿವಾರ ಸಿರವಾರ ಕ್ರಾಸ್‌ ಹತ್ತಿರ ರಸ್ತತಡೆ ಪ್ರತಿಭಟನೆ ನಡೆಸಿ ನೀರಾವರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ರಾಜ್ಯ ಉಪಾಧ್ಯಕ್ಷ ಅಮರಣ್ಣ ಗುಡಿಹಾಳ ಮಾತನಾಡಿ, ಡಿ.8ರಿಂದ 17ವರೆಗೆ ನೀರು ಬಿಡುವುದಾಗಿ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಇಂತಹ ಅವೈಜ್ಞಾನಿಕ ಪದ್ಧತಿಯಿಂದ ಮೆಣಸಿನಕಾಯಿ, ಶೇಂಗಾ, ಜೋಳ, ಹತ್ತಿ ಬೆಳೆಗಾರರಿಗೆ ನೀರಿನ ಅಭಾವ ಎದುರಾಗಲಿದೆ ಎಂದು ದೂರಿದರು.

ಕೊನೆ ಭಾಗದ ರೈತರ ಬೆಳೆಗಳಿಗೆ ನೀರು ಮುಟ್ಟುವುದೇ ಡೌಟ್‌. ಹೀಗಾಗಿ ಅಧಿಕಾರಿಗಳು ವೈಜ್ಞಾನಿಕ ಪದ್ಧತಿ ಮೂಲಕವೇ ನೀರು ಹರಿಸಬೇಕು ಎಂದು ಹೇಳಿದರು.

ಈಗಾಗಲೇ 300 ಕ್ಯೂಸೆಕ್‌ ನೀರು ನಾಲೆಗೆ ಬಿಡಲಾಗಿದೆ. ಕೊನೆ ಭಾಗದ ರೈತರ ಜಮೀನಿಗೆ ಮುಟ್ಟಲು ಎರಡ್ಮೂರು ದಿನ ಬೇಕಾಗುತ್ತದೆ. ಮೆಣಸಿನಕಾಯಿ ಬೆಳೆ ಬಾಡಿ ನಿಂತಿವೇ. ಇಂತಹ ಸಮಸ್ಯೆ ಕುರಿತು ಅಧಿಕಾರಿಗಳು ಎಚ್ಚರವಹಿಸಬೇಕು. ನಾರಾಯಣಪುರ ಬಲದಂಡೆ ಕಾಲುವೆಗಳ ನವೀಕರಣ ಕಾಮಗಾರಿ ಕೊಡಲೇ ನಿಲ್ಲಿಸಬೇಕು. ಒಂದೇ ವೇಳೆ ಅಧಿಕಾರಿಗಳು ರೈತರ ಸಮಸ್ಯೆ ಆಲಿಸಲು ಹಿಂದೇಟು ಹಾಕಿದ್ದಲ್ಲಿ ರೈತರೇ ಕಾಮಗಾರಿ ಸ್ಥಳಕ್ಕೆ ಹೋಗಿ ನಿಲ್ಲಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ತಾಲೂಕಿನಾದ್ಯಂತ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಮೆಣಸಿನಕಾಯಿ ಬಿತ್ತನೆ ಮಾಡಲಾಗಿದೆ. ರೈತರ ಹಿತ ದೃಷ್ಟಿಯಿಂದ ಎಲ್ಲ ಬೆಳೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಐಸಿಸಿ ಸಭೆಯನ್ನು ಮೊತ್ತೂಮ್ಮೆ ಕರೆಯಬೇಕು ಎಂದು ಮನವಿ ಮಾಡಿದರು.

ನಾರಾಯಣಪುರ ಬಲದಂಡೆ ನಾಲೆಗೆ ವಾರಬಂದಿ ಪದ್ಧತಿ ತಿದ್ದುಪಡಿ ಮಾಡಬೇಕು ಎಂದು ರೈತ ಸಂಘಟನೆ ಮುಖಂಡರು ಸಿರವಾರ ಕ್ರಾಸ್‌ ಹತ್ತಿರದಲ್ಲಿ ನಡೆಸಿದ ರಸ್ತೆತಡೆ ಪ್ರತಿಭಟನೆಯಿಂದ ತಾಸುಗಟ್ಟಲೇ ಪ್ರಯಾಣಿಕರು ಪರದಾಡುವಂತ ಸ್ಥಿತಿ ಎದುರಾಯಿತು. ದೇವದುರ್ಗದಿಂದ ರಾಯಚೂರಿಗೆ, ಸಿರವಾರ, ಮಾನ್ವಿ, ಅರಕೇರಾ, ರಾಯಚೂರಿನಿಂದ ಪಟ್ಟಣಕ್ಕೆ ಬರುವಂತ ಬಸ್‌ ಗಳು ಎಲ್ಲೆಂದರಲ್ಲಿ ಸ್ಥಗಿತವಾಗಿದ್ದರಿಂದ ದೂರ ಊರುಗಳಿಗೆ ಹೋಗುವ ಪ್ರಯಾಣಿಕರು ತಾಸುಗಟ್ಟಲೇ ಪರಿತಾಪಿಸುವಂತಾಯಿತು. ಇನ್ನು ಬೈಕ್‌ ಸವಾರರು, ಟಂಟಂ ವಾಹನಗಳು ಲಾರಿಗಳ ಚಾಲಕರು ಸಮಸ್ಯೆ ಎದುರಿಸಿದ ಘಟನೆ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್‌, ವಿ.ಭೀಮೇಶ್ವರರಾವ್‌, ಮಲ್ಲಪ್ಪಗೌಡ, ಮಲ್ಲಪ್ಪ ಪೂಜಾರಿ, ರಮೇಶ ಅಬಕಾರಿ, ಶರಣಪ್ಪ ಹುಸೇನ್‌ಪುರ, ಸಾಬಣ್ಣ, ಜೆಡಿಎಸ್‌ ತಾಲೂಕಾಧ್ಯಕ್ಷ ಬುಡ್ಡನಗೌಡ ಪಾಟೀಲ್‌, ಜಿಪಂ ಮಾಜಿ ಸದಸ್ಯ ಶರಬಣ್ಣಸಾಹು, ಬನ್ನಯ್ಯ, ಚೆನ್ನಪ್ಪಗೌಡ, ಬೂದೆಪ್ಪ ಪೂಜಾರಿ, ಬಷಿರ್‌ ಮಹ್ಮದ್‌ ಸೇರಿ ಇತರರು ಇದ್ದರು.

ಟಾಪ್ ನ್ಯೂಸ್

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.