ಗೌರವಧನಕ್ಕೆ ಆಗ್ರಹಿಸಿ ಪ್ರವಾಸಿ ಗೈಡ್‌ಗಳಿಂದ ಪತ್ರ ಚಳವಳಿ


Team Udayavani, Dec 7, 2021, 12:55 PM IST

17tourist

ವಿಜಯಪುರ: ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಮಾಸಿಕ ಗೌರವಧನ ನೀಡುವಂತೆ ಆಗ್ರಹಿಸಿ ನಗರದಲ್ಲಿರುವ ಪ್ರವಾಸಿ ಮಾರ್ಗದರ್ಶಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ನಡೆಸಿದರು.

ಸೋಮವಾರ ನರಗದಲ್ಲಿರುವ ಐತಿಹಾಸಿಕ ವಿಶ್ವವಿಖ್ಯಾತ ಗೋಲಗುಮ್ಮಟ ಆವರಣದಲ್ಲಿ ಕರ್ನಾಕ ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘದ ರಾಜ್ಯ ಉಪಾಧ್ಯಕ್ಷ ರಾಜಶೇಖರ ಕಲ್ಯಾಣಮಠ ನೇತೃತ್ವದಲ್ಲಿ ಪತ್ರ ಚಳವಳಿ ಆರಂಭಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜಶೇಖರ, ಪ್ರವಾಸಿ ಮಾರ್ಗದರ್ಶಕರನ್ನು ಆಯಾ ದೇಶಗಳ ಸಾಂಸ್ಕೃತಿಕ-ಪರಂಪರೆಯ ರಾಯಭಾರಿಗಳು ಎಂದು ಕರೆಯುತ್ತಾರೆ. ಆದರೆ ಕರ್ನಾಟಕದ ಮಟ್ಟಿಗೆ ಪ್ರವಾಸಿ ಮಾರ್ಗದರ್ಶಕರ ಸ್ಥಿತಿ ಅತ್ಯಂತ ದಯನೀಯವಾಗಿದೆ. ಪ್ರವಾಸಿಗರನ್ನು ನಂಬಿಕೊಂಡು ಮಾರ್ಗದರ್ಶಿ ಕೆಲಸ ಮಾಡುವ ಸ್ಥಿತಿ ಈಗಂತೂ ಸಂಪೂರ್ಣ ಇಲ್ಲವಾಗಿದೆ. ಪರಿಣಾಮ ಪ್ರವಾಸಿ ಮಾರ್ಗದರ್ಶಿಗಳ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ನಮವೂ ಮಾಸಿಕ ಗೌರವಧನ ನೀಡಬೇಕು ಎಂದು ಆಗ್ರಹಿಸಿದರು.

ಕಳೆದ ಹಲವು ದಶಕಗಳಿಂದ ಜಿಲ್ಲೆಯಲ್ಲಿ ಪ್ರವಾಸಿ ಮಾರ್ಗದರ್ಶಿ ತರಬೇತಿ ಪಡೆದು, ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ಪಡೆದು ಐತಿಹಾಸಿಕ ಗೋಲಗುಮ್ಮಟ ಆವರಣದಲ್ಲಿ ಪ್ರವಾಸಿ ಮಾರ್ಗದರ್ಶನ ಮಾಡುತ್ತಿದ್ದೇವೆ. ಆದರೆ ಕಳೆದ ಹಲವು ವರ್ಷಗಳಿಂದ ಪ್ರವಾಸಿಗರ ಸಂಖ್ಯೆಯೂ ಕ್ಷೀಣಿಸಿದ್ದು, ಕೋವಿಡ್‌ ಲಾಕ್‌ಡೌನ್‌ ಬಳಿಕ ಪ್ರವಾಸಿಗರನ್ನು ನಂಬಿಕೊಂಡು ಬದುಕುತಿದ್ದ ಮಾರ್ಗದರ್ಶಿಗಳ ಬದುಕೂ ಬೀದಿಗೆ ಬಿದ್ದಿದೆ ಎಂದು ಅಳಲು ತೋಡಿಕೊಂಡರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಾಸಿಕ ಗೌರವಧನ ನೀಡುವ ವ್ಯವಸ್ಥೆ ಇದೆ. ಇದೇ ರೀತಿ ಪ್ರವಾಸೋದ್ಯಮ ಇಲಾಖೆಯಿಂದ ಸರ್ಕಾರ ಪ್ರವಾಸಿ ಮಾರ್ಗದರ್ಶಿಗಳಿಗೆ ಮಾಸಿಕ ಗೌರವ ಧನ ನೀಡುವ ಯೋಜನೆ ಅನುಷ್ಠಾನಗೊಳಿಸಬೇಕು. ಈ ಬಗ್ಗೆ ಈ ಹಿಂದೆ ನಡೆಸಿದ ಹಲವು ಹೋರಾಟಗಳು, ಸಲ್ಲಿಸಿದ ಮನವಿಗಳು ಫಲ ನೀಡಿಲ್ಲ. ಹೀಗಾಗಿ ನಿಮ್ಮ ಅವಧಿಯಲ್ಲಾದರೂ ನಮ್ಮ ಮನವಿಗೆ ಸ್ಪಂದನೆ ಸಿಕ್ಕರೆ ನೀವು ಪ್ರವಾಸಿ ಮಾರ್ಗದರ್ಶಿಗಳ ಕುಟುಂಬಗಳ ಮನದಲ್ಲಿ ಶಾಶ್ವತವಾಗಿ ನೆಲೆ ನಿಲ್ಲುತ್ತೀರಿ ಎಂದು ಕಳಕಳಿಯ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪ್ರವಾಸಿ ಮಾರ್ಗದರ್ಶಿಗಳಾದ ಶ್ರೀಮಂತ ಕಟ್ಟಿ, ಸರ್ದಾರ ಜಾಧವ, ವಿಜಯಕುಮಾರ ಬಂಡಿ, ಶ್ರೀಧರ ಇರಸೂರು, ಅಬ್ದುಲ್‌ ರಜಾಕ್‌ ಶೇಖ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.