ರೈತನ ಮನೆಗೆ ಅಧಿಕಾರಿಗಳನ್ನು ಕಳುಹಿಸಿ ದಬ್ಬಾಳಿಕೆ: ತಹಶೀಲ್ದಾರ್ ಮೇಲೆ ಆರೋಪ ಮಾಡಿದ ರೈತ


Team Udayavani, Dec 7, 2021, 3:57 PM IST

ರೈತನ ಮನೆಗೆ ಅಧಿಕಾರಿಗಳನ್ನು ಕಳುಹಿಸಿ ದಬ್ಬಾಳಿಕೆ: ತಹಶೀಲ್ದಾರ್ ಮೇಲೆ ಆರೋಪ ಮಾಡಿದ ರೈತ

ಆಲೂರು ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ಹೊತ್ನಹಳ್ಳಿಪುರ ಗ್ರಾಮದ ದೇವರಾಜೇಗೌಡ ಮನೆ ಹತ್ತಿರ ಅಧಿಕಾರಿಗಳ ದಂಡು

ಆಲೂರು : ತಹಶೀಲ್ದಾರ್ ಶಿರೀನ್ ತಾಜ್ ಅಧಿಕಾರಿಗಳ ಮೂಲಕ ರೈತನ ಮೇಲೆ ವಿನಾಕಾರಣ ದಬ್ಬಾಳಿಕೆ ನಡೆಸಿ ಕಿರುಕುಳ ನೀಡುತ್ತಿರುವ ಘಟನೆ ಆಲೂರು ತಾಲ್ಲೂಕಿನಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊತನಹಳ್ಳಿಪುರ ಗ್ರಾಮದ ಜವರೇಗೌಡರ ಮಗ ದೇವರಾಜೇಗೌಡ  ಎಂಬುವವರು ಗ್ರಾಮದ ಸ.ನಂ 54 ರಲ್ಲಿ 9 ಎಕರೆ 5 ಗುಂಟೆ ಪೈಕಿ 50-15 ಅಡಿ ಜಾಗದಲ್ಲಿ 1982 ರಲ್ಲಿ ಸರ್ಕಾರದಿಂದ ನೀಡಿದ ಜನತಾ ಮನೆ ಮಾಡಿ ಅದಕ್ಕೆ ಬೈರಾಪುರ ಗ್ರಾಮ ಪಂಚಾಯಿತಿಯಲ್ಲಿ ಅದಕ್ಕೆ ತಗಲುವ ಕಂದಾಯ ವಗೈರೆಗಳನ್ನು ಕಟ್ಟಿಕೊಂಡು ಬಂದಿರುತ್ತಾರೆ ಅದರೆ ಇತ್ತೀಚಿಗೆ ವ್ಯಕ್ತಿಯೊಬ್ಬ ಮೌಖಿಕವಾಗಿ ದೂರು ನೀಡಿದ್ದಾರೆ ಎನ್ನುವ ಕಾರಣ ನೀಡಿ ತಹಶೀಲ್ದಾರ್ ಶಿರೀನ್ ತಾಜ್ ಅವರು ಕಂದಾಯ ಇಲಾಖೆ  ಅಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳನ್ನು ರೈತ ದೇವರಾಜೇಗೌಡ ಮನೆ ಹತ್ತಿರ ಕಳುಹಿಸಿ ಕಿರುಕುಳ  ನೀಡುತ್ತಿದ್ದಾರೆ ಎಂದು ರೈತ ದೇವರಾಜೇಗೌಡ ಎಂದು ತನ್ನ ಅಳಲು ತೋಡಿಕೊಂಡರು.

ರೈತ ದೇವರಾಜೇಗೌಡ ಮಾತನಾಡಿ ಗ್ರಾಮದ ಸ.ನಂ 54 ರ 9 ಎಕರೆ 5 ಗುಂಟೆ ಜಮೀನಿನಲ್ಲಿ ಗ್ರಾಮಸ್ಥರೆಲ್ಲರೂ ಅವರಿಗೆ ಬೇಕಾದಷ್ಟು ಹಂಚಿಕೊಂಡು ಜೀವನ ನಡೆಸುತ್ತಿದ್ದಾರೆ ಅವರಂತೆ ನನಗೂ ಕೂಡ 1982 ರಲ್ಲಿ ಗ್ರಾಮಸ್ಥರು ಜಮೀನು ಹಂಚಿಕೊಟ್ಟಿದ್ದರು ಅದರಲ್ಲಿ ಸರ್ಕಾರದಿಂದ ನೀಡಿರುವ ಜನತಾಮನೆ ಮಾಡಿಕೊಂಡು ಜೀವನ ನಡೆಸುತ್ತಿದ್ದೆವು ಅದರೆ ಇತ್ತೀಚಿನ ಮಳೆಯಿಂದ ಮನೆ ಶಿಥಿಲಗೊಂಡ ಹಿನ್ನೆಲೆಯಲ್ಲಿ ಮನೆಯನ್ನು ದುರಸ್ತಿ ಮಾಡಲಾಗುತ್ತಿದೆ ತಾಲ್ಲೂಕು ತಹಶೀಲ್ದಾರ್ ಅವರು ಅಧಿಕಾರಿಗಳನ್ನು ರಾತ್ರೋರಾತ್ರಿ ಮನೆ ಹತ್ತಿರ ಕಳುಹಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ತಾಲ್ಲೂಕಿನಲ್ಲಿ ಕೆರೆಕಟ್ಟೆಗಳು ಒತ್ತುವರಿಯಾಗಿವೆ,ಕಾಡಾನೆ ಸಮಸ್ಯೆಯಿದೆ,ಅಕಾಲಿಕ ಮಳೆಯಿಂದ ಮನೆಯನ್ನು ಕಳೆದುಕೊಂಡಿದ್ದಾರೆ,ಕಛೇರಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ತಹಶೀಲ್ದಾರ್ ಶಿರೀನ್ ತಾಜ್ ಅವರು  ಅವುಗಳನ್ನು ಸರಿಪಡಿಸುವುದನ್ನು ಬಿಟ್ಟು ಗ್ರಾಮಗಳಲ್ಲಿ ಸಹಬಾಳ್ವೆ ನೆಮ್ಮದಿಯಿಂದ ಜೀವನ ನಡೆಸುತ್ತಿರುವ ರೈತರನ್ನು ಒಬ್ಬರ ಮೇಲೆ ಇನ್ನೊಬ್ಬರನ್ನು ಎತ್ತಿಕಟ್ಟುತ್ತಿದ್ದಾರೆ ಹೇಮಾವತಿ ಪುನರ್ವಸತಿಯಿಂದ ಜಮೀನು ಕಳೆದು ಕೊಂಡ ರೈತರಿಗೆ ಬ್ಯಾಬ ಪಾರೆಷ್ಟ್ ನಲ್ಲಿ ಜಮೀನು ನೀಡಿ ನಾಲ್ಕು ದಶಕಗಳೇ ಕಳೆದಿವೆ ಅವರಿಗೆ ಸರಿಯಾದ ರಸ್ತೆ ಇಲ್ಲದೇ ಅವರು ನರಕಯಾತನೆ ಅನುಭವಿಸುತ್ತಿದ್ದಾರೆ ಅವರಿಗೆ ಮೊದಲು ರಸ್ತೆ ಶಾಶ್ವತ ಪರಿಹಾರ  ಕಂಡುಹಿಡಿಯಲಿ ಅದು ಬಿಟ್ಟು ರೈತರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆ ಇವರ ವರ್ತನೆ ಇದೇರೀತಿ ಮುಂದುವರಿದರೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಸಂಸದರಿಗೆ ದೂರು ನೀಡಬೇಕಾಗುತ್ತೆ ಗ್ರಾಮದ ಮುಖಂಡ ಮಂಜೇಗೌಡ ಎಚ್ಚರಿಸಿದರು.

ಈ ಬಗ್ಗೆ ತಹಶಿಲ್ದಾರರ್ ಶಿರೀನ್ ತಾಜ್ ಮಾತನಾಡಿ ಯಾರೋ ಒಬ್ಬರು ಲಿಖಿತ ರೂಪದಲ್ಲಿ ದೂರು ನೀಡಿಲ್ಲ ಮೌಖಿಕವಾಗಿ ದೂರು ನೀಡಿದ್ದಾರೆ ಅದರಂತೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಪಡೆಯಲಾಗಿದೆ ಎಂದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.