![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 8, 2021, 1:21 PM IST
ನವದೆಹಲಿ: ಕೇಂದ್ರ ಸರ್ಕಾರ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ರೈತ ಮುಖಂಡರು ಬುಧವಾರ(ಡಿಸೆಂಬರ್ 08) ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆ ವಿರೋಧಿಸಿ ಒಂದು ವರ್ಷ ಕಾಲ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಏತನ್ಮಧ್ಯೆ ಕೇಂದ್ರ ಸರ್ಕಾರ ಮೂರು ಕಾಯ್ದೆಯನ್ನು ರದ್ದುಗೊಳಿಸಿತ್ತು.
ಇದನ್ನೂ ಓದಿ:ಸತತ 9ನೇ ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ: ಆರ್ ಬಿಐ ಗವರ್ನರ್ ದಾಸ್
ಆದರೆ ಕಾಯ್ದೆ ರದ್ದಾದರೂ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ರೈತರ ಮೇಲಿನ ಕೇಸ್ ವಾಪಸ್ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿರುವುದಾಗಿ ರೈತ ಸಂಘಟನೆಗಳು ತಿಳಿಸಿವೆ.
ಪ್ರತಿಭಟನಾಕಾರರ ಬಹುತೇಕ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆ ಒಕ್ಕೂಟಗಳು ಪ್ರತಿಭಟನೆಯನ್ನು ಕೈಬಿಡುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿತ್ತು. ಆದರೆ ತಮ್ಮ ಪ್ರತಿಭಟನೆ ಕುರಿತು ಇಂದು ಚಿಂತನೆ ನಡೆಸಿದ ರೈತ ಸಂಘಟನೆಗಳು ಹೋರಾಟ ಮುಂದುವರಿಸಲು ನಿರ್ಧರಿಸಿರುವುದಾಗಿ ಎಂದು ಘೋಷಿಸಿವೆ.
ಇತ್ತೀಚೆಗಷ್ಟೇ ಸರ್ಕಾರದ ಜತೆಗೆ ಮಾತುಕತೆಗೆ ರೈತ ಒಕ್ಕೂಟವು ಐವರು ಸದಸ್ಯರ ಸಮಿತಿ ರಚಿಸಿತ್ತು. ಮಾತುಕತೆ ಯಶಸ್ವಿಯಾಗಿದ್ದು, ಎಂಎಸ್ ಪಿಗೆ ಕಾನೂನು ಮಾನ್ಯತೆ, ರೈತರ ವಿರುದ್ಧದ ಎಫ್ ಐಆರ್ ರದ್ದು, ಮೃತ ರೈತರಿಗೆ ಪರಿಹಾರ ಮತ್ತಿತರ ರೈತರ ಬಹುಕೇತ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿತ್ತು ಎನ್ನಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.