ಜೋಳದ ಬೆಳೆಯಲ್ಲಿ ಫಾಲ್ ಸೈನಿಕ ಹುಳು ಬಾಧೆ
Team Udayavani, Dec 9, 2021, 11:58 AM IST
ಕಲಬುರಗಿ: ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಜೋಳದ ಬೆಳೆಗೆ ಫಾಲ್ ಸೈನಿಕ ಹುಳು ಬಾಧೆ ಕಂಡು ಬಂದಿರುವುದರಿಂದ ಕೃಷಿ ಇಲಾಖೆ ಕೆಲವು ಸಲಹೆ ನೀಡಿದೆ.
ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೋಳ ಬೆಳೆದ ಕ್ಷೇತ್ರಕ್ಕೆ ಭೇಟಿ ನೀಡಿ, ಈ ಫಾಲ್ ಸೈನಿಕ ಹುಳವು ಪ್ರಮುಖವಾಗಿ ಜೋಳ ಮತ್ತು ಮೆಕ್ಕೆಜೋಳ ಬೆಳೆಯಲ್ಲಿ ಕಂಡು ಬಂದಿದ್ದು, ತಡವಾದ ಬಿತ್ತನೆ ಪ್ರದೇಶದಲ್ಲಿ ಇದರ ಹಾವಳಿ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಈ ಕೀಡೆಯು ಮೊಟ್ಟೆಗಳನ್ನು ಗುಂಪಾಗಿ ಇಡಲಿದ್ದು, ಸುಮಾರು 100ರಿಂದ 200 ಮೊಟ್ಟೆಗಳನ್ನಿಡುತ್ತದೆ. ಮೊಟ್ಟೆಯಿಂದ ಹೊರಬಂದ ಕೀಡೆಯು ಸುರುಳಿಯಲ್ಲಿ ಅತಿ ಹೆಚ್ಚು ಹಾನಿ ಮಾಡುತ್ತದೆ. ಹಾನಿಗೊಳಗಾದ ಜೋಳದ ಬೆಳೆಯ ಮೇಲೆ ಪ್ರಾಸ್ ಕಂಡು ಬರುತ್ತದೆ. ಆದ್ದರಿಂದ ರೈತ ಬಾಂಧವರು ಫಾಲ್ ಸೈನಿಕ ಹುಳ ಬಾಧೆ ಲಕ್ಷಣ ಕಂಡು ಬಂದಲ್ಲಿ ಇಮಾಮೆಕ್ಟಿನ್ ಬೆಂಜೋಯೇಟ್ ಶೇ. 5 ಎಸ್ಜಿ 0.4 ಜಿಎಂ ಅಥವಾ ನೊವಾಲುರಾನ್ 0.75 ಎಂಎಲ್ ಅಥವಾ ಕ್ಲೋರಾಂಟ್ರಾನಿಲಿಪ್ರೋಲ್ 18.5 ಖಅ 0.3 ಟಟ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪಡಿಸಬೇಕು. ಸಿಂಪಡಣಾ ದ್ರಾವಣವು ನೇರವಾಗಿ ಸುಳಿಗೆ ಬೀಳುವಂತೆ ಸಿಂಪಡಿಸಬೇಕೆಂದು ರೈತರಲ್ಲಿ ಮನವಿ ಮಾಡಿದ್ದಾರೆ.
ತಾಲೂಕಿನ ಅವರಾದ ಹೋಬಳಿಯ ಸಣ್ಣೂರ ಗ್ರಾಮದಲ್ಲಿ ಜೋಳದ ಬೆಳೆಯಲ್ಲಿ ಫಾಲ್ ಸೈನಿಕ ಹುಳು ಬಾಧೆಯನ್ನು ತಜ್ಞರು ವೀಕ್ಷಿಸಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಕೃಷಿ ಅಧಿಕಾರಿ ನೀಲಕಂಠ, ಸಹಾಯಕ ಕೃಷಿ ಅಧಿಕಾರಿ ರಾಜೇಂದ್ರ ಕಲ್ಲಪ್ಪ ಹಾಗೂ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
MUST WATCH
ಹೊಸ ಸೇರ್ಪಡೆ
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.