ಜನರಲ್ ಬಿಪಿನ್ ರಾವತ್ ವೀರಮರಣ: ಮುಂದಿನ ಸಿಡಿಎಸ್‌ ಆಯ್ಕೆ ಹೇಗೆ?

ಈ ಬಗೆಗಿನ ಪ್ರಕ್ರಿಯೆಗಳ  ಬಗೆಗಿನ ನೋಟ ಇಲ್ಲಿದೆ.

Team Udayavani, Dec 10, 2021, 11:20 AM IST

ಮುಂದಿನ ಸಿಡಿಎಸ್‌ ಆಯ್ಕೆ ಹೇಗೆ?

ತಮಿಳುನಾಡು ಕೂನೂರ್‌ನಲ್ಲಿ ನಡೆದ ಕಾಪ್ಟರ್‌ ಅಪಘಾತದಲ್ಲಿ ರಕ್ಷಣ ಪಡೆಗಳ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಅಸುನೀಗಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರ ಶೀಘ್ರವೇ ಪ್ರಕ್ರಿಯೆ ಶುರು ಮಾಡಲಿದೆ. ಭೂಸೇನೆಯ ಹಾಲಿ ಮುಖ್ಯಸ್ಥ ಜ| ಮನೋಜ್‌ ಮುಕುಂದ್‌ ನರವಾಣೆ ಅವರನ್ನೇ ಮುಂದಿನ ರಕ್ಷಣ ಪಡೆಗಳ ಮುಖ್ಯಸ್ಥರನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗೆಗಿನ ಪ್ರಕ್ರಿಯೆಗಳ  ಬಗೆಗಿನ ನೋಟ ಇಲ್ಲಿದೆ.

ಸಮಿತಿ ರಚಿಸಲಿದೆ ಸರಕಾರ:

ಜ| ಬಿಪಿನ್‌ ರಾವತ್‌ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಲು ಭೂಸೇನೆ, ನೌಕಾಪಡೆ, ಐಎಎಫ್ನ ಹಿರಿಯ ಕಮಾಂಡರ್‌ಗಳನ್ನು ಒಳಗೊಂಡ ಸಮಿತಿ ರಚಿಸಲಿದೆ.

ಏನು ಮಾಡಲಿದೆ ಸಮಿತಿ? :

ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಸೇನೆಯ ಮೂರು ವಿಭಾಗಗಳ ಅಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿ ತೆರವಾಗಿರುವ ಸ್ಥಾನಕ್ಕೆ ಸಂಭಾವ್ಯರ ಹೆಸರುಗಳ ಬಗ್ಗೆ ವರದಿ ಸಿದ್ಧಪಡಿಸಲಿದೆ. ಅದನ್ನು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಅವರ ಅನುಮೋದನೆಗಾಗಿ ಸಲ್ಲಿಸುತ್ತದೆ. ಏಕೀಕೃತ ರಕ್ಷಣ ಸಿಬಂದಿ ಸಮಿತಿಯ ಅಧ್ಯಕ್ಷರು ಕೂಡ ನೂತನ ಮುಖ್ಯಸ್ಥರ ಆಯ್ಕೆ ಪ್ರಕ್ರಿಯಗೆ ನೆರವು ನೀಡಲಿದ್ದಾರೆ.

ಮುಂದಿನ ಹಂತವೇನು? :

ರಕ್ಷಣ ಸಚಿವರಿಂದ ಅನುಮೋದನೆ ಪಡೆದ ಬಳಿಕ ಸಂಭಾವ್ಯರ ಹೆಸರುಗಳು ಮತ್ತು ಅದಕ್ಕೆ ಸಂಬಂಧಿಸಿದ ವರದಿಯು ನೇಮಕಕ್ಕಾಗಿ ಇರುವ ಕೇಂದ್ರ ಸಂಪುಟ ಸಮಿತಿಗೆ ಕಳುಹಿಸ­ ಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿನ ಈ ಸಮಿತಿ ಆ ಹೆಸರುಗಳನ್ನು ಪರಿಶೀಲಿಸಿ ರಕ್ಷಣ ಪಡೆಗಳ ಮುಖ್ಯಸ್ಥರ ಹೆಸರು ಅಂತಿಮಪಡಿಸಲಿದೆ.

ಜ| ಎಂ.ಎಂ.ನರವಾಣೆಯೇ ಆಯ್ಕೆ? :

ಪಾಕಿಸ್ಥಾನ ಮತ್ತು ಚೀನಗಳಿಂದಲೇ ದೇಶಕ್ಕೆ ಪ್ರಧಾನವಾಗಿ ಬೆದರಿಕೆ ಇದೆ. ಲಡಾಖ್‌ನ ಪೂರ್ವ ಭಾಗದಲ್ಲಿ ಚೀನ ದಾಳಿ ನಡೆಸಿದ್ದ ಸಂದರ್ಭದಲ್ಲಿ ಉಂಟಾಗಿದ್ದ ಬಿಕ್ಕಟ್ಟಿನ ಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಇದರ ಜತೆಗೆ ಭೂಸೇನೆ, ನೌಕಾಪಡೆ, ವಾಯುಪಡೆಯ ಮುಖ್ಯಸ್ಥರ ಪೈಕಿ ಜ| ನರವಾಣೆ ಹಿರಿಯ ಅಧಿಕಾರಿಯಾಗಿದ್ದಾರೆ. ಅವರು ಮುಂದಿನ ಎಪ್ರಿಲ್‌ನಲ್ಲಿ ನಿವೃತ್ತಿಯಾಗಲಿದ್ದಾರೆ.  ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಆರ್‌.ಹರಿಕುಮಾರ್‌ ನ.30, ಐಎಎಫ್ ಮುಖ್ಯಸ್ಥರಾಗಿ ಏರ್‌ಚೀಫ್ ಮಾರ್ಷಲ್‌ ವಿ.ಆರ್‌.ಚೌಧರಿ ಸೆ.30ರಂದು ಅಧಿಕಾರ ಸ್ವೀಕರಿಸಿದ್ದರು.

ಯಾರಾಗಬಹುದು ಭೂಸೇನೆಗೆ ಮುಖ್ಯಸ್ಥ? :

ಜ| ನರವಾಣೆ ರಕ್ಷಣ ಪಡೆಗಳ ಮುಖ್ಯಸ್ಥರಾದರೆ ಭೂಸೇನೆಗೆ ಮುಖ್ಯಸ್ಥರಾಗಿ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆಯೂ ಚರ್ಚೆಗಳು ನಡೆದಿವೆ. ಭೂಸೇನೆಯ ಉಪ ಮುಖ್ಯಸ್ಥ ಲೆ| ಜ| ಸಿ.ಪಿ. ಮೊಹಾಂತಿ, ನಾರ್ದರ್ನ್ ಆರ್ಮಿ ಕಮಾಂಡರ್‌ ಲೆ|ಜ| ವೈ.ಕೆ. ಜೋಶಿ ಅವರನ್ನು ಪರಿಗಣಿಸುವ ಸಾಧ್ಯತೆಗಳು ಇವೆ. ಲೆ|ಜ| ಮೊಹಾಂತಿ ಅವರಿಗೆ ಚೀನಕ್ಕೆ ಹೊಂದಿಕೊಂಡಿರುವ ಎಲ್‌ಎಸಿಯಲ್ಲಿ ಪರಿಸ್ಥಿತಿ ನಿಭಾಯಿಸಿದ ಅನುಭವ ಹೆಚ್ಚಿದೆ. ಇದು ಅವರಿಗೆ ಅನುಕೂಲವಾಗ­ಬಹುದು ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.