ಹೊಸ ವರ್ಷಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ವಿಕ್ಕಿ-ಕತ್ರಿನಾ ಮದುವೆ ವಿಡಿಯೋ?
Team Udayavani, Dec 10, 2021, 11:26 AM IST
ಬಾಲಿವುಡ್ ಸ್ಟಾರ್ ಗಳಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವಿವಾಹ ಸಮಾರಂಭವು ಗುರುವಾರ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಸಿಕ್ಸ್ ಸೆನ್ಸಸ್ ಕೋಟೆಯಲ್ಲಿ ಅದ್ಧೂರಿ ಮದುವೆ ಕಾರ್ಯಕ್ರಮ ಜರುಗಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ನೆರವೇರಿದೆ. ಸಂಗೀತ ಕಾರ್ಯಕ್ರಮ, ಮೆಹಂದಿ ಕಾರ್ಯಕ್ರಮ ಎಲ್ಲ ಸೇರಿ ಒಟ್ಟು ಮೂರು ದಿನಗಳ ಕಾಲ ಕೋಟೆಯಲ್ಲಿ ವಿಜೃಂಭಣೆ ಯಾಗಿ ಮದುವೆಯನ್ನು ನೆರವೇರಿಸಲಾಗಿದೆ.
ಮದುವೆ ಮುಹೂರ್ತಕ್ಕೆ ಕತ್ರಿನಾ ಕೈಫ್ ಕಡು ಕೆಂಪು ಬಣ್ಣದ ಲೆಹಂಗಾ ಧರಿಸಿ ಕಂಗೊಳಿಸಿದ್ದರೆ, ವಿಕ್ಕಿ ಕೌಶಲ್ ಪಂಜಾಬಿ ಶೈಲಿಯ ಶೆರ್ವಾನಿ ತೊಟ್ಟಿದ್ದರು.
ಇದನ್ನೂ ಓದಿ:‘ಆತ ತಲೆಕೆಡಿಸಿಕೊಳ್ಳಲ್ಲ..’ ರೋಹಿತ್ ನಾಯಕತ್ವದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಶಾಸ್ತ್ರಿ
ಈ ಮದುವೆಯಲ್ಲಿ ಕುತೂಹಲಕ್ಕೆ ಕಾರಣವಾದ ಮತ್ತೊಂದು ಅಂಶವೆಂದರೆ ಮದುವೆ ವಿಡಿಯೋ ಒಟಿಟಿ ವೇದಿಕೆಯಾದ ಅಮೇಜಾನ್ ಪ್ರೈಮ್ ಗೆ ಮಾರಾಟವಾಗಿದೆ ಎಂಬ ಸುದ್ದಿ. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವಿವಾಹ ಸಮಾರಂಭದ ವಿಡಿಯೋವನ್ನು ಅಮೇಜಾನ್ ಪ್ರೈಮ್ ಸುಮಾರು 80 ಕೋಟಿ ರೂ. ಬೆಲೆಗೆ ಖರೀದಿಸಿದೆ ಎಂದು ವರದಿಯಾಗಿದೆ. ಅಂದಹಾಗೆ ಹೊಸ ವರ್ಷದ ಸಮಯದಲ್ಲಿ ಈ ವಿಡಿಯೋ ಅಮೇಜಾನ್ ಪ್ರೈಮ್ ನಲ್ಲಿ ಪ್ರಸಾರವಾಗುತ್ತದೆ ಎನ್ನಲಾಗಿದೆ.
OMAGGSGS AND JUST LIKE THAT, ALMOST 3 YEARS LATER, WE HAVE THEIR FIRST OFFICIAL PICTURE TOGETHER ❤♾?✨
#KatrinaVickyKiShaadi pic.twitter.com/9g7kQZHnlw
— ? (@Aesthet1callyFM) December 9, 2021
ದೊಡ್ಡ ಸ್ಟಾರ್ ಗಳ ವಿವಾದ ವಿಡಿಯೋಗಳು ಓಟಿಟಿಯಲ್ಲಿ ಪ್ರಸಾರವಾಗುವುದು ಭಾರತದಲ್ಲಿ ಇದೇ ಮೊದಲು. ಆದರೆ ಇದು ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಇಂತಹ ಸಂಸ್ಕೃತಿ ಬೆಳೆದಿದೆ.
ಕುತೂಹಲಕಾರಿ ವಿಚಾರವೆಂದರೆ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್ ಮತ್ತು ದೀಪಿಕಾ ಪಡುಕೋಣೆ – ರಣವೀರ್ ಸಿಂಗ್ ಅವರ ವಿವಾಹದ ವಿಡಿಯೋಗಳನ್ನು ಕೂಡಾ ಒಟಿಟಿ ಪ್ಲಾಟ್ಫಾರ್ಮ್ಗಳು ದೈತ್ಯ ಮೊತ್ತಕ್ಕೆ ಬಯಸಿದ್ದವು. ಆದರೆ ದೀಪಿಕಾ-ರಣವೀರ್ ಈ ಆಫರ್ ನ್ನು ನಿರಾಕರಿಸಿದ್ದರು. ಆದರೆ, ಪ್ರಿಯಾಂಕಾ-ನಿಕ್ ಒಪ್ಪಂದಕ್ಕೆ ಸಹಿ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.