24 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
Team Udayavani, Dec 10, 2021, 4:39 PM IST
ಭದ್ರಾವತಿ: ಹಳೇನಗರದ ಖಾಸಗಿ ಆಸ್ಪತ್ರೆಯ 24 ಮಂದಿನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕುದೃಢಪಟ್ಟಿರುವುದರಿಂದ ಆಸ್ಪತ್ರೆ ಮತ್ತು ನರ್ಸಿಂಗ್ಹಾಸ್ಟೆಲ್ ಅನ್ನು ಗುರುವಾರ ಬೆಳಗ್ಗೆ ಅ ಧಿಕಾರಿಗಳು ಸೀಲ್ಡೌನ್ ಮಾಡಿದ್ದಾರೆ. ಸೋಕಿತರನ್ನು ಆಸ್ಪತ್ರೆ ಒಳಬಾಗದಲ್ಲಿಐಸೋಲೇಶನ್ನಲ್ಲಿರಿಸಲಾಗಿದೆ.
ಆಸ್ಪತ್ರೆ ಹೊರ ಭಾಗದಲ್ಲಿಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಕಳೆದ ವಾರ ಶಿವಮೊಗ್ಗದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಲ್ಲಿಕೊರೊನಾ ಸೋಂಕು ದೃಢಪಟ್ಟಿದ್ದರ ಹಿನ್ನೆಲೆಯಲ್ಲಿ ಜಿಲ್ಲಾಡಳಿತಎಚ್ಚೆತ್ತುಕೊಂಡು ಖಾಸಗಿ ಲೈಫ್ ಕೇರ್ ಆಸ್ಪತ್ರೆಯಲ್ಲಿ ಪರೀಕ್ಷೆಬರೆದಿದ್ದ ಭದ್ರಾವತಿ ಖಾಸಗಿ ಆಸ್ಪತ್ರೆಯ ವಿದ್ಯಾರ್ಥಿಗಳನ್ನುಪರೀಕ್ಷೆಗೆ ಒಳಪಡಿಸಲಾಗಿದ್ದು ಓರ್ವ ವಿದ್ಯಾರ್ಥಿಗೆ ಸೋಂಕು ಕಾಣಿಸಿಕೊಂಡಿತ್ತು.
ನಂತರ 2 ನೇ ಹಂತದಲ್ಲಿ ಕೊರೊನಾ ಸೋಂಕು ಪರೀಕ್ಷೆಮಾಡಿದಾಗ 24 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಆದೇಶದಂತೆ ಹಾಗೂ ಡಿಎಚ್ಒ ಮಾರ್ಗದರ್ಶನದಲ್ಲಿಗುರುವಾರ ಬೆಳಗ್ಗೆ 9 ಗಂಟೆಗೆ ತಹಶೀಲ್ದಾರ್ ಆರ್. ಪ್ರದೀಪ್,ತಾಲೂಕು ಆರೋಗ್ಯಾ ಧಿಕಾರಿ ಡಾ| ಅಶೋಕ್, ನಗರಸಭಾಪೌರಾಯುಕ್ತ ಪರಮೇಶ್ ಮತ್ತು ಸಿಬ್ಬಂದಿ ಪೊಲೀಸ್ಬಂದೋಬಸ್ತ್ನೊಂದಿಗೆ ತೆರಳಿ ಆಸ್ಪತ್ರೆಯನ್ನು ಸೀಲ್ಡೌನ್ಮಾಡಿದ್ದಾರೆ.ಸೋಕಿತರೆಲ್ಲರನ್ನು ಆಸ್ಪತ್ರೆಯಲ್ಲಿ ಐಸೋಲೇಶನ್ಮಾಡಲಾಗಿದೆ.
ಆಸ್ಪತ್ರೆಯನ್ನು ಯಾರೂ ಒಳ ಪ್ರವೇಶಿಸದಂತೆಬಂದ್ ಮಾಡಲಾಗಿ ಸ್ಯಾನಿಟೈಸ್ ಮಾಡಲಾಗಿದೆ. ಆಸ್ಪತ್ರೆಯವೈದ್ಯರು ಮತ್ತು ಸಿಬ್ಬಂದಿಗಳನ್ನು ಪರೀಕ್ಷಿಸಲಾಗುತ್ತಿದೆ.ಒಳ ರೋಗಿಗಳ ಬಗ್ಗೆ ಎಚ್ಚರ ವಹಿಸಲಾಗಿದೆ. ಒಮಿಕ್ರಾನ್ಸೋಂಕಿನ ಪರೀಕ್ಷೆಗೂ ಕಳುಹಿಸಿಕೊಡಲಾಗಿದೆ ಎಂದುತಾಲೂಕು ಆರೋಗ್ಯಾ ಧಿಕಾರಿ ಡಾ|ಅಶೋಕ್ ತಿಳಿಸಿದರು.
ಉಪವಿಭಾಗಾ ಧಿಕಾರಿ ಡಾ| ಟಿ.ವಿ.ಪ್ರಕಾಶ್ ಸ್ಪಷ್ಟನೆ:ಶಿವಮೊಗ್ಗದ ಖಾಸಗಿ ಲೈಫ್ಕೇರ್ ಆಸ್ಪತ್ರೆಯಲ್ಲಿ 172ಮಂದಿ ನರ್ಸಿಂಗ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಅವರೆಲ್ಲರನ್ನೂ ಪರೀಕ್ಷಿಸಲಾಗಿದ್ದು ಓರ್ವ ವಿದ್ಯಾರ್ಥಿನಿಗೆಸೋಂಕು ಕಂಡು ಬಂದಿತ್ತು. 2 ನೇ ಬಾರಿ ಪರೀಕ್ಷಿಸಿದಾಗಯಾರಲ್ಲೂ ಸೋಂಕು ಕಂಡು ಬಂದಿಲ್ಲ. ನಂತರ 3 ಮತ್ತು 4ನೇ ಅವ ಧಿಯಲ್ಲಿ ಪರೀಕ್ಷಿಸಿದಾಗ 172 ಮಂದಿ ವಿದ್ಯಾರ್ಥಿಗಳಪೈಕಿ 24 ಮಂದಿಗೆ ಸೋಂಕಿರುವುದು ಕಂಡು ಬಂದಿದೆ.
ಇದರಿಂದಾಗಿ ನರ್ಸಿಂಗ್ ಕಾಲೇಜು, ಹಾಸ್ಟೆಲ್, ಆಸ್ಪತ್ರೆಯನ್ನುಸೀಲ್ಡೌನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ 165 ಮಂದಿ ಒಳರೋಗಿಗಳು ಮತ್ತು ವೈದ್ಯರು ಹಾಗೂ ಸಿಬ್ಬಂದಿಗಳನ್ನು ಸಹಪರೀಕ್ಷೆಗೆ ಒಳ ಪಡಿಸಲಾಗಿದೆ. 24 ಗಂಟೆಗಳ ಕಾಲ ಯಾರನ್ನುಒಳ ಹೋಗಲು ಬಿಡಲ್ಲ. ಇವರಲ್ಲಿ ಯಾರಿಗಾದರೂಪಾಸಿಟಿವ್ ಕಂಡು ಬಂದಲ್ಲಿ ಅವರೆಲ್ಲರ ಟ್ರಾವೆಲ್ ಹಿಸ್ಟರಿಪಡೆಯಲಾಗುತ್ತದೆ ಎಂದು ಉಪ ವಿಭಾಗಾಧಿ ಕಾರಿಡಾ| ಟಿ.ವಿ.ಪ್ರಕಾಶ್ ತಿಳಿಸಿದರು. ತಹಶೀಲ್ದಾರ್ಆರ್. ಪ್ರದೀಪ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.