ಬೆಂಗಳೂರಿನಲ್ಲಿ ಜ.ಬಿಪಿನ್ ರಾವತ್ಗೆ ಶ್ರದ್ಧಾಂಜಲಿ
Team Udayavani, Dec 12, 2021, 10:36 AM IST
ಬೆಂಗಳೂರು: ಸಿಟಿಜನ್ಸ್ ಫಾರ್ ಡೆಮಾಕ್ರಸಿಯಿಂದ ಶನಿವಾರ ನಗರದ ಟೌನ್ಹಾಲ್ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಡಿಎಸ್ ಜ.ಬಿಪಿನ್ ರಾವತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಆರ್ಎಸ್ಎಸ್ನ ಅಖೀಲ ಭಾರತೀಯ ಕಾರ್ಯಕಾರಿ ಸದಸ್ಯ ರಾಮ್ ಮಾಧವ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ವಿಭೂತಿಪುರ ಸ್ವಾಮೀಜಿ, ಬ್ರಿಗೇಡಿ ಯರ್ ರವಿ ಮುನಿಸ್ವಾಮಿ, ಕರ್ನಾಟಕ ಅಂಗವಿಕಲ ಕಿ.ದಾ ಸಂಘದ ಗೋಪಿನಾಥ್, ನಟ, ನಟಿಯರು ಸೇನೆಯ ಹಿರಿಯ ಅಧಿಕಾರಿಗಳು, ಕಲಾವಿದರು, ಸಾಮಾಜಿಕ ಕಾರ್ಯಕರ್ತರು, ಚಿಂತಕರು ಭಾಗವ ಹಿಸಿ, ನುಡಿ ನಮನ ಸಲ್ಲಿಸಿದ್ದರು.
ಈ ವೇಳೆ ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಜ.ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾತನಾಡಿ, ಜ.ರಾವತ್ ಅವರು ಮೂರೂ ಸೇನೆಗಳ ದಂಡನಾಯಕರಾಗಿ ರಕ್ಷಣೆಯ ಹೊಣೆ ಹೊತ್ತು ದೇಶವನ್ನು ಮುನ್ನಡೆಸಿದ್ದಾರೆ.
ಇದನ್ನೂ ಓದಿ;- ಮಕ್ಕಳಿಗೆ ಪೌಷ್ಟಿಕ ಆಹಾರ ಲಾಭ ತಲುಪಲಿ
ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಸಾವಿನ ಕುರಿತ ಅನೇಕ ವಿಕೃತಿಗಳನ್ನು ಮರೆದಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು. ವಿಯಟ್ನಾಮ್ ವಿವೇಕಾನಂದ ಕೇಂದ್ರದ ನಿರ್ದೇಶಕರಾಗಿದ್ದ ಜಿ.ಬಿ.ಹರೀಶ್ ಮಾತನಾಡಿ, ಸೈನಿಕರ ತ್ಯಾಗ ಬಲಿದಾನಗಳಿಗೆ ಸಮಾಜ ಸಂವೆ ದನೆಯಿಂದ ಮಿಡಿಯಬೇಕು. ಕಲಾವಿದರು ಕವಿಗಳು ಸಿನಿಮಾ ತಂತ್ರಜ್ಞರು ಹೀಗೆ ಬೇರೆ ಬೇರೆ ಕ್ಷೇತ್ರದಲ್ಲಿ ಸೈನಿಕರ ಬಲಿದಾನವನ್ನು ಸ್ಮರಿಸಬೇಕು ಎಂದರು.
ನಟಿ ಮಾಳವಿಕಾ ಅವಿನಾಶ್ ಮಾತನಾಡಿ, ಜನರಲ್ ರಾವತ್ ಅವರು ದೇಶದ ಮೂರು ಸೇನಾ ವಿಭಾಗಗಳಿಗೆ ಮುಖ್ಯಸ್ಥರಾಗಿದ್ದು ಅವರ ಸಾವು ದೇಶಕ್ಕೆ ತುಂಬಲಾರದ ನಷ್ಟ. ಅವರ ಸಾವನ್ನು ಸಂಭ್ರಮಿಸಿದ ವಿಕೃತಿಗಳ ಮೇಲೆ ಕ್ರಮ ಕೈಗೊಳ್ಳಲು ಆದೇಶಿಸಿರುವುದು ಸ್ವಾಗತಾರ್ಹ ಎಂದರು. ಕ್ಯಾಪ್ಟನ್ ನವೀನ್ ನಾಗಪ್ಪ, ಹಿರಿಯ ನಟಿ ತಾರಾ ಅನುರಾಧ, ಸಂತ ರಾದ ಅಭಿನವ ಹಾಲಶ್ರೀ ಸ್ವಾಮಿಜಿ, ಹಿರಿಯ ನಟ ಸೇತುರಾಮ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾದ ಸುನೀಲ್ ಪುರಾಣಿಕ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.