![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 12, 2021, 1:02 PM IST
ತಿಹಾರ್, ಕ್ಷೌರಿಕನ ಕತ್ತರಿ, ದಾಳಿ
ತಿಹಾರ್ : ಇಲ್ಲಿನ ಜೈಲಿನ ಕೈದಿಯೊಬ್ಬರು ತಮ್ಮ ವಾರ್ಡ್ನಲ್ಲಿ ಕ್ಷೌರ ಮಾಡುವಾಗ ಇತರ ಇಬ್ಬರು ಕೈದಿಗಳು ಕ್ಷೌರಿಕನ ಕತ್ತರಿ ಬಳಸಿ ದಾಳಿ ಮಾಡಿದ್ದಾರೆ ಎಂದು ಜೈಲು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಜೈಲು ಅಧಿಕಾರಿಗಳ ಪ್ರಕಾರ, ಡಿಸೆಂಬರ್ 10 ರಂದು ತಿಹಾರ್ನ ಸೆಂಟ್ರಲ್ ಜೈಲ್ ನಂ. 8 ರೊಳಗೆ ಇಬ್ಬರು ಕೈದಿಗಳು ತಮ್ಮ ವಾರ್ಡ್ನಲ್ಲಿ ಕೂದಲನ್ನು ಕತ್ತರಿಸುತ್ತಿದ್ದಾಗ, ಕ್ಷೌರಿಕನ ಕತ್ತರಿ ಬಳಸಿ ಮತ್ತೊಬ್ಬ ಖೈದಿಯ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ.
ಹಲ್ಲೆಗೊಳಗಾದ ಕೈದಿ ಮತ್ತು ದಾಳಿಕೋರರಲ್ಲಿ ಒಬ್ಬರು ಗಾಯಗೊಂಡರು ಮತ್ತು ತಕ್ಷಣವೇ ಜೈಲು ಸಿಬ್ಬಂದಿಯಿಂದ ಪ್ರತ್ಯೇಕಿಸಲ್ಪಟ್ಟರು. ಇಬ್ಬರು ಕೈದಿಗಳು ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರನ್ನು ಚಿಕಿತ್ಸೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿಂದ ಅದೇ ದಿನ ಅವರನ್ನು ಬಿಡುಗಡೆ ಮಾಡಿ ಮತ್ತೆ ಜೈಲಿಗೆ ಕರೆ ತರಲಾಗಿದೆ ಎಂದು ಅವರು ಹೇಳಿದರು.
ಗಾಯಾಳು ಯಾವುದೇ ದೂರು ದಾಖಲಿಸಲು ಇಚ್ಛಿಸಲಿಲ್ಲ. ಆದರೆ, ಘಟನೆಯ ಬಗ್ಗೆ ಜೈಲು ಅಧಿಕಾರಿಗಳಿಂದ ಮಾಹಿತಿ ಲಭಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.