ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಲಿ: ರೇಣುಕಾಚಾರ್ಯ
Team Udayavani, Dec 12, 2021, 3:47 PM IST
ಹೊನ್ನಾಳಿ: ಯುವಕರು ಕ್ರೀಡೆಯಲ್ಲಿಪಾಲ್ಗೊಳ್ಳುವುದರಿಂದ ದುಶ್ಚಟಗಳಿಂದದೂರವಿರಬಹುದು ಎಂದು ಸಿಎಂರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ಪಟ್ಟಣದ ಸರ್ಕಾರಿಬಾಲಕಿಯರ ಪ್ರೌಢಶಾಲೆ ಮೈದಾನದಲ್ಲಿಶನಿವಾರ ಅಪ್ಪು ಅಭಿಮಾನಿಗಳುಆಯೋಜಿಸಿದ್ದ ಪುನೀತ್ ರಾಜ್ಕುಮಾರ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಹಾಗೂ ಪುನೀತ್ ರಾಜ್ಕುಮಾರ್ ಭಾವಚಿತ್ರಕ್ಕೆ ಪುಷ್ಪನಮನಸಲ್ಲಿಸಿ ಅವರು ಮಾತನಾಡಿದರು.ಕ್ರೀಡೆಯಲ್ಲಿ ಸೋಲು-ಗೆಲುವುಎರಡನ್ನೂ ಸಮಾನ ಮನಸ್ಸಿನಿಂದಸ್ವೀಕರಿಸಿದಾಗ ಮಾತ್ರ ನಿಜವಾದಕ್ರೀಡಾಪಟುವಾಗಲು ಸಾಧ್ಯ. ಇತ್ತೀಚಿನದಿನಗಳಲ್ಲಿ ಯುವಕರು ದುಶ್ಚಟಗಳ ದಾಸರಾಗುತ್ತಿದ್ದಾರೆ.
ಯುವಕರು ದಿನನಿತ್ಯ ಕ್ರೀಡಾಂಗಣದಲ್ಲಿ ಆಟವಾಡಿಕ್ರೀಡಾ ಮನೋಭಾವ ಬೆಳೆಸಿಕೊಳ್ಳುವಮೂಲಕ ದುಶ್ಚಟಗಳಿಂದ ದೂರಇರಬೇಕು ಎಂದು ಕರೆ ನೀಡಿದರು. ಕ್ರೀಡಾ ಚಟುವಟಿಕೆಯಲ್ಲಿ ಭಾಗಹಿಸುವುದರಿಂದ ಮಾನಸಿಕಹಾಗೂ ದೈಹಿಕ ಆರೋಗ್ಯಸುಸ್ಥಿತಿಯಲ್ಲಿರುತ್ತದೆ. ಅಲ್ಲದೆ ಮನೋಲ್ಲಾಸದಿಂದ ಕೆಲಸಕಾರ್ಯಗಳನ್ನು ಮಾಡಲು ಸಹಕಾರಿ.ಆದ್ದರಿಂದ ಕ್ರೀಡೆ ನಮ್ಮ ಜೀವನದಅವಿಭಾಜ್ಯ ಅಂಗವಾಗಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಯುವಕರುಮೊಬೈಲ್ ದಾಸರಾಗುತ್ತಿದ್ದಾರೆ ಇದುಶುದ್ಧ ತಪ್ಪು. ಮೊಬೈಲ್ ಅನ್ನು ನಮಗೆಎಷ್ಟು ಬೇಕೋ ಅಷ್ಟನ್ನು ಮಾತ್ರಬಳಸುವುದನ್ನು ಕಲಿಯಬೇಕು ಎಂದುಕಿವಿಮಾತು ಹೇಳಿದರು. ಪುನೀತ್ ರಾಜ್ಕುಮಾರ್ ಅವರುನೇತ್ರದಾನ ಮಾಡುವ ಮೂಲಕ ಅಂಧರಬಾಳಿಗೆ ಬೆಳಕಾಗಿದ್ದಾರೆ. ಪ್ರತಿಯೊಬ್ಬರೂಸ್ವಯಂಪ್ರೇರಣೆಯಿಂದ ನೇತ್ರದಾನಮಾಡುವ ಮೂಲಕ ಅಂಧತ್ವನಿವಾರಣೆಗೆ ಶ್ರಮಿಸಬೇಕೆಂದರು.
ಈ ಸಂದರ್ಭದಲ್ಲಿ ಬಿಜೆಪಿ ಹೊನ್ನಾಳಿಮಂಡಲ ಪ್ರಧಾನ ಕಾರ್ಯದರ್ಶಿಸಿ.ಕೆ. ರವಿ, ಮುಖಂಡರಾದ ಅಜಯ್ರೆಡ್ಡಿ, ಗಿರೀಶ್, ಜಯರಾಮ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.