ಸಾರಿಗೆ ಇಲಾಖೆಯ 30 ಸೇವೆ ಆನ್‌ಲೈನ್‌; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರಂಭ


Team Udayavani, Dec 13, 2021, 7:00 AM IST

ಸಾಂದರ್ಭಿಕ ಚಿತ್ರ

ಮಂಗಳೂರು/ ಉಡುಪಿ: ಆನ್‌ಲೈನ್‌ನಲ್ಲೇ ಸಾರಿಗೆ ಇಲಾಖೆಯ 30 ಸೇವೆಗಳನ್ನು ಪಡೆಯಲು ಸರಕಾರ ಅವಕಾಶ ಕಲ್ಪಿಸಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್‌ಟಿಒ ಕಚೇರಿಗಳಲ್ಲಿ ಈ ಸೌಲಭ್ಯ ಆರಂಭಗೊಂಡಿದೆ.
www.parivahan.gov.inನಲ್ಲಿ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಸೇವೆ ಪಡೆಯಬಹುದು. ಮಂಗಳೂರು, ಬಂಟ್ವಾಳ ಮತ್ತು ಪುತ್ತೂರು, ಉಡುಪಿ ಆರ್‌ಟಿಒ ಕಚೇರಿಗಳಲ್ಲಿ ಈ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಯಾವ ಸೇವೆಗಳು
ಕಲಿಕಾ ಚಾಲನ ಅನುಜ್ಞಾಪತ್ರ (ಎಲ್‌ಎಲ್‌ಆರ್‌) ಮತ್ತು ಹೊಸ ವರ್ಗಗಳ ಸೇರ್ಪಡೆ, ಕಲಿಕಾ ಚಾಲನ ಅನುಜ್ಞಾ ಪತ್ರದಲ್ಲಿ ಹೆಸರು ಬದಲಾವಣೆ, ಕಲಿಕಾ ಚಾಲನ ಅನುಜ್ಞಾ ಪತ್ರದಲ್ಲಿ ವಿಳಾಸ ಬದಲಾವಣೆ, ನಕಲು ಕಲಿಕಾ ಚಾಲನ ಅನುಜ್ಞಾ ಪತ್ರ, ನಿರ್ವಾಹಕ ಚಾಲನ ಅನುಜ್ಞಾ ಪತ್ರ ಸಹಿತ “ಸಾರಥಿ’ ವಿಭಾಗದ 11 ಸೇವೆಗಳು ಹಾಗೂ ಮಾರಾಟಗಾರರ ಹಂತದಲ್ಲಿ ಹೊಸ ವಾಹನಗಳ ನೋಂದಣಿ, ವಾಹನ ಮಾಲಕತ್ವ ವರ್ಗಾವಣೆ, ನಕಲು ನೋಂದಣಿ ಪ್ರಮಾಣಪತ್ರ, ಮೋಟಾರು ಕ್ಯಾಬ್‌ ಪರ್ಮಿಟ್‌ ನೀಡುವಿಕೆ/ ನವೀಕರಣ, ಸರಕು ಸಾಗಣೆ ವಾಹನ ರಹದಾರಿ ನೀಡುವಿಕೆ/ನವೀಕರಣ, ಆಟೋರಿಕ್ಷಾ ಕ್ಯಾಬ್‌ ಪರ್ಮಿಟ್‌ ನವೀಕರಣ ಇತ್ಯಾದಿ 19 ಸೇವೆಗಳನ್ನು ಆನ್‌ಲೈನ್‌ನಲ್ಲಿ ಒದಗಿಸಲಾಗುತ್ತಿದೆ.

30 ಸೇವೆಗಳು ಆನ್‌ಲೈನ್‌ನಲ್ಲಿಯೇ ದೊರೆಯುತ್ತಿವೆ. ಆನ್‌ಲೈನ್‌ಗೆ ಸಂಬಂಧಿಸಿ ತಾಂತ್ರಿಕ ಸಮಸ್ಯೆ ಉಂಟಾದರೆ ಮಾತ್ರ ಕಚೇರಿಗೆ ತೆರಳಬೇಕಾಗುತ್ತದೆ. ಉಳಿದಂತೆ ಈ 30 ಸೇವೆಗಳಿಗಾಗಿ ಯಾವುದೇ ಹಂತದಲ್ಲಿ ಕಚೇರಿಗೆ ತೆರಳುವ ಅಗತ್ಯವಿಲ್ಲ. ದ.ಕ. ಜಿಲ್ಲೆಯಲ್ಲಿ ಈಗಾಗಲೇ ಈ ಸೇವೆಗಳನ್ನು ಆರಂಭಿಸಲಾಗಿದ್ದು, ಕೆಲವರಿಗೆ ತಾಂತ್ರಿಕವಾಗಿ ಕೆಲವು ಸಂಶಯ ಉಂಟಾಗಿ ಗೊಂದಲವಾಗಿದೆ. ಮುಂದಿನ ದಿನಗಳಲ್ಲಿ ಇದು ಸರಿಯಾಗಲಿದೆ.
– ಆರ್‌. ಎಂ. ವರ್ಣೇಕರ್‌,
ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಗಳೂರು

ಹೈ ಕೋರ್ಟ್‌ ಸೂಚನೆ ಮೇರೆಗೆ ಉಡುಪಿ ಜಿಲ್ಲೆಯಲ್ಲಿಯೂ ಆನ್‌ಲೈನ್‌ ಸೇವೆ ಆರಂಭವಾಗಿದೆ. ಆದರೆ ಕೆಲವು ತಾಂತ್ರಿಕ ತೊಂದರೆಗಳು ಇರುವುದರಿಂದ ಶತ ಪ್ರತಿಶತ ಆರಂಭಗೊಂಡಿಲ್ಲ.
-ಗಂಗಾಧರ್‌,ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ

 

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Rain

Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.