ದಿಢೀರ್ ಬೆಳವಣಿಗೆ: ಸಂಸತ್ ಅಧಿವೇಶನ ರದ್ದುಗೊಳಿಸಿ ಸಿಂಗಾಪುರಕ್ಕೆ ತೆರಳಿದ ಅಧ್ಯಕ್ಷ ಗೋಟಬಯಾ
ಸಂಸತ್ ಅಧಿವೇಶನವನ್ನು ಅಮಾನತುಗೊಳಿಸಿರುವುದಾಗಿ ಡಿಸೆಂಬರ್ 12ರಂದು ಆದೇಶ ಹೊರಡಿಸಿದ್ದರು.
Team Udayavani, Dec 13, 2021, 2:34 PM IST
ಕೊಲಂಬೋ: ನಾಟಕೀಯ ಬೆಳವಣಿಗೆಯೊಂದರಲ್ಲಿ ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸ ಅವರು ಲಂಕಾ ಸಂಸತ್ ಅಧಿವೇಶನವನ್ನು ದಿಢೀರ್ ಒಂದು ವಾರಗಳ ಅಮಾನತ್ತಿನಲ್ಲಿಟ್ಟು, ಸಿಂಗಾಪುರಕ್ಕೆ ತೆರಳಿರುವ ಘಟನೆ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:20 ವರ್ಷದಿಂದ ತೆಂಗಿನ ಕಾಯಿ ವ್ಯಾಪಾರದಲ್ಲಿ ಸೈ ಎನಿಸಿಕೊಂಡ ವಸಂತ ನಾಯ್ಕ
ಸಂಸತ್ ಅಧಿವೇಶನವನ್ನು ಒಂದು ವಾರಗಳ ಕಾಲ ಅಮಾನತಿನಲ್ಲಿಟ್ಟಿರುವ ಅಧ್ಯಕ್ಷ ರಾಜಪಕ್ಸ ಅವರ ನಿರ್ಧಾರದ ಬಗ್ಗೆ ಶ್ರೀಲಂಕಾ ಸರ್ಕಾರ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ನಿಗದಿಯಂತೆ ಸಂಸತ್ ಕಲಾಪ ಶುಕ್ರವಾರ ಅಂತ್ಯಗೊಂಡಿತ್ತು.
ಇದಾದ ನಂತರ ಜನವರಿ 11ರಿಂದ ಸಂಸತ್ ಅಧಿವೇಶನ ಆರಂಭವಾಗಬೇಕಿದ್ದು, ಅಧ್ಯಕ್ಷ ರಾಜಪಕ್ಸ ಅವರು ದಿಢೀರನೆ ಒಂದು ವಾರಗಳ ಕಾಲ ಅಧಿವೇಶನ ಮುಂದೂಡಿದ್ದರಿಂದ ಜನವರಿ 18ರಿಂದ ಆರಂಭವಾಗಲಿದೆ ಎಂದು ವರದಿ ವಿವರಿಸಿದೆ.
ವಿಶೇಷ ಗಜೆಟ್ ನೋಟಿಫಿಕೇಶನ್ ಮೂಲಕ ಸಂಸತ್ ಅಧಿವೇಶನವನ್ನು ಅಮಾನತುಗೊಳಿಸಿರುವುದಾಗಿ ಡಿಸೆಂಬರ್ 12ರಂದು ಆದೇಶ ಹೊರಡಿಸಿದ್ದರು. ಸಂಸತ್ ಅಧಿವೇಶನ ಮುಂದೂಡಿದ ಬಳಿಕ ಗೋಟಬಯಾ(72) ಅವರು ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ವರದಿ ಹೇಳಿದೆ.
ರಾಜಪಕ್ಸ ಅವರ ಸಿಂಗಾಪುರ್ ಭೇಟಿ ಖಾಸಗಿಯಾಗಿದ್ದು, ಇದೊಂದು ವೈದ್ಯಕೀಯ ಉದ್ದೇಶದ ಭೇಟಿಯಾಗಿರಬೇಕು ಎಂದು ಶ್ರೀಲಂಕಾ ಅಧ್ಯಕ್ಷರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಧ್ಯಕ್ಷ ಗೋಟಬಯಾ ಅವರ ಗೈರುಹಾಜರಿಯಿಂದಾಗಿ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ವಿಚಾರಗಳ ಚರ್ಚೆಯನ್ನು ಕೈಗೆತ್ತಿಕೊಂಡಿಲ್ಲ ಎಂದು ಇಂಧನ ಸಚಿವ ಉದಯ್ ಗಮ್ಮನ್ ಪಿಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
India ವರ, ಇರಾಕ್, ಇರಾನ್ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.