ಮೊಟ್ಟೆ ವಿರುದ್ದ ಸಿಡಿದೆದ್ದ ಮಠಾಧೀಶರು


Team Udayavani, Dec 14, 2021, 2:57 PM IST

23pressmeet

ಬೀದರ: ಶಾಲೆ ಮತ್ತು ಅಂಗನವಾಡಿಗಳಲ್ಲಿ ಮೊಟ್ಟೆ ಬದಲು ಸತ್ವಯುತ, ಸರ್ವಸಮ್ಮತ ಸಸ್ಯಾಹಾರ ಪದಾರ್ಥ ನೀಡಬೇಕು. ಇಲ್ಲವೇ ರಾಜ್ಯಾದ್ಯಂತ ಸಸ್ಯಾಹಾರಿ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ- ಅಂಗನವಾಡಿ ತೆರೆಯಲು ಹಕ್ಕೊತ್ತಾಯಿಸಿ ಡಿ.20ರಂದು ಅಖೀಲ ಭಾರತ ಸಸ್ಯಾಹಾರಿಗಳ ಒಕ್ಕೂಟದಿಂದ ಬೆಳಗಾವಿಯಲ್ಲಿ ಸಂತ ಸಮಾವೇಶ ಹಾಗೂ ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಒಕ್ಕೂಟದ ಪ್ರಧಾನ ಸಂಚಾಲಕ ಶ್ರೀ ದಯಾನಂದ ಸ್ವಾಮೀಜಿ ಮತ್ತು ಪ್ರಧಾನ ಸಂಘಟಕ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ಕೋಟ್ಯಂತರ ಜನರ ಹಿತಾಸಕ್ತಿ, ಧರ್ಮ ಮತ್ತು ಪರಂಪರೆ ರಕ್ಷಿಸುವುದು ಸರ್ಕಾರದ ಕರ್ತವ್ಯ. ಆದರೆ, ಸಮಾನತೆ ಬೋಧಿಸಬೇಕಾಗಿದ್ದ ಶಿಕ್ಷಣ ಕೇಂದ್ರಗಳಲ್ಲಿ ಪೌಷ್ಟಿಕಾಂಶ ಹೆಸರಿನಲ್ಲಿ ಮೊಟ್ಟೆ ತಿನ್ನಿಸುವ ಮೂಲಕ ಸರ್ಕಾರವೇ ಪರಂಪರೆ ಮೇಲೆ ಅಪರೋಕ್ಷವಾಗಿ ಆಕ್ರಮಣ ಮಾಡುತ್ತಿದೆ. ಈ ಹಿಂದೆ 1997ರಲ್ಲಿ ಕಾಂಗ್ರೆಸ್‌ ಸರ್ಕಾರ ಮತ್ತು 2006ರಲ್ಲಿ ಸಮ್ಮಿಶ್ರ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ತೀವ್ರ ಹೋರಾಟದ ಹಿನ್ನೆಲೆ ಕೈಬಿಟ್ಟಿರುವುದು ಬಿಜೆಪಿ ಸರ್ಕಾರಕ್ಕೆ ಗೊತ್ತಿದೆ. ಆದರೂ ಸಸ್ಯಾಹಾರ ಲಭ್ಯವಿದ್ದರೂ, ಹಠದಿಂದ ಕೇವಲ ಕೆಲವೇ ಪೌಲ್ಟ್ರಿಗಳ ಹಿತಾಸಕ್ತಿಗಾಗಿ ಅನಾರೋಗ್ಯಕರವಾದ ಮೊಟ್ಟೆ ತಿನ್ನಿಸಲು ಹೊರಟಿದೆ. ಮೊಟ್ಟೆ ಮೂಲಕ ಓಟ್‌ ಬ್ಯಾಂಕ್‌ ಸಿಗಬಹುದೆಂಬ ಭ್ರಮೆಯಲ್ಲಿದೆ. ಎಂದು ಆಕ್ರೋಶಗೊಂಡ ಸ್ವಾಮೀಜಿಗಳು, ಮುಂದೆ ಈ ಮೊಟ್ಟೆ ಬಗೆದೀತು ಸರ್ಕಾರದ ಹೊಟ್ಟೆ ಎಂದು ಎಚ್ಚರಿಕೆ ನೀಡಿದರು.

ಈಗಾಗಲೇ ವಿಜಯಪುರದ ಸಿದ್ದೇಶ್ವರ ಶ್ರೀ, ಸಿದ್ಧಗಂಗಾ ಮಠದ ಶ್ರೀ, ಸುತ್ತೂರು ಶ್ರೀ ಮತ್ತು ಭಾಲ್ಕಿಯ ಶ್ರೀಗಳನ್ನು ಒಳಗೊಂಡಂತೆ ನಾಡಿನ ನೂರಾರು ಮಠಾಧೀಶರು, ಸಂತರು, ಸಸ್ಯಾಹಾರಿ ಸಮುದಾಯಗಳು ಹಾಗೂ ಸಂಘಟನೆಗಳು ವಿನಂತಿಸಿದರೂ ಸರ್ಕಾರ ಇದಕ್ಕೆ ಕಿವಿಗೊಡದೇ ಮೊಟ್ಟೆ ತಿನ್ನಿಸಲು ಆರಂಭಿಸಿದೆ. ಆ ಮೂಲಕ ಸಸ್ಯಾಹಾರಿ, ಮಾಂಸಾಹಾರಿಗಳ ನಡುವೆ ಕಲಹ, ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುತ್ತಿದೆ. ಹಾಗಾಗಿ ಅನಿವಾರ್ಯವಾಗಿ ಬೀದಿಗಿಳಿದು ಹೋರಾಟ ಮಾಡುವ ಸ್ಥಿತಿ ಬಂದಿದೆ ಎಂದರು.

ಸರ್ಕಾರ ಡಿ.19ರೊಳಗೆ ಹಕ್ಕೊತ್ತಾಯಕ್ಕೆ ಮಣಿಯದಿದ್ದರೆ ಡಿ.20ರಂದು ನೂರಾರು ಮಠಾಧೀಶರು, ಸಾರ್ವಜನಿಕರೊಂದಿಗೆ ಬೆಳಗಾವಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಜೈಲು ಭರೋ ಚಳವಳಿ ನಡೆಸಲಾಗುವುದು. ನಂತರ ಲಿಂಗಾಯತ ಶಾಸಕರಿಗೆ ಮುತ್ತಿಗೆ ಸೇರಿ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಈ ವೇಳೆ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ, ಮಾತೆ ಸತ್ಯಾದೇವಿ, ವೈಜಿನಾಥ ಕಮಠಾಣೆ, ಶಿವರಾಜ ಪಾಟೀಲ ಅತಿವಾಳ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.