ಪುತ್ತೂರು: 156 ವರ್ಷಗಳ ಪುರಾತನ ಕಟ್ಟಡ ನೆಲಸಮ

ಡಾ| ಕೆ. ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ ಶಾಲೆ

Team Udayavani, Dec 14, 2021, 5:12 PM IST

ಪುತ್ತೂರು: 156 ವರ್ಷಗಳ ಪುರಾತನ ಕಟ್ಟಡ ನೆಲಸಮ

ಪುತ್ತೂರು: ಕಡಲ ತಡಿಯ ಭಾರ್ಗವ ಡಾ| ಕೆ. ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ ಉಪ ವಿಭಾಗದಲ್ಲೇ ಅತ್ಯಂತ ಪ್ರಾಚೀನ ಎಂದೆನಿಸಿದ 156 ವರ್ಷ ಹಳೆಯ ಕಟ್ಟಡವನ್ನು ಸ್ಮಾರಕವಾಗಿ ಸಂರಕ್ಷಣೆ ಮಾಡುವ ಬದಲು ಜೆಸಿಬಿ ಬಳಸಿ ಇಡೀ ಕಟ್ಟಡ ನೆಲ ಸಮ ಮಾಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಇದು ಕಾರಂತರ ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿದೆ.

ಪುತ್ತೂರಿನ ಹೃದಯ ಭಾಗದ ನೆಲ್ಲಿಕಟ್ಟೆಯಲ್ಲಿರುವ ಸರಕಾರಿ ಶಾಲೆಯ ಪ್ರಾಚೀನ ಕಟ್ಟಡ ಇದಾಗಿದ್ದು ಸಂರಕ್ಷಣೆ ಇಲ್ಲದೆ ಕಟ್ಟಡದ ಒಂದೊಂದೇ ಭಾಗ ಕುಸಿದು ಧರಾಶಾಯಿಯಾಗುವ ಸ್ಥಿತಿಗೆ ತಲುಪಿತು. 19, 20 ಹಾಗೂ 21 ಹೀಗೆ 3 ಶತಮಾನಗಳ ನಡುವಿನ ಕೊಂಡಿಯಾಗಿದ್ದ ಈ ವಿದ್ಯಾದೇಗುಲದಲ್ಲಿ 83 ವರ್ಷಗಳ ಹಿಂದೆ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ| ಕೆ.ಶಿವರಾಮ ಕಾರಂತರು ನಾಟ್ಯ ನಿರ್ದೇಶನ ಮಾಡುತ್ತಿದ್ದರು. ರಂಗಭೂಮಿ ಚಟುವಟಿಕೆಗಳ ಕೇಂದ್ರವಾಗಿ ಬೆಳೆಸಿದ್ದರು. ಜಿಲ್ಲೆಯಲ್ಲೇ ಅತ್ಯಂತ ಪ್ರಾಚೀನ ನಾಡಹಬ್ಬ ದಸರಾ ಆಚರಣೆಯನ್ನು ಇದೇ ಶಾಲೆಯಲ್ಲಿ ಆರಂಭಿಸಿದ್ದರು. ಇಂಥ ಐತಿಹಾಸಿಕ ಕಟ್ಟಡವನ್ನು ನೆಲಶಾಹಿ ಮಾಡುವ ಮೂಲಕ ಸಾಂಸ್ಕೃತಿಕ ಕೇಂದ್ರ ಕಣ್ಮರೆಯಾಗಿದ್ದು ಉದ್ದೇಶಪೂರ್ವಕವಾಗಿಯೇ ಕೆಡವಿರುವ ಗುಮಾನಿ ಮೂಡಿದೆ.

ಕುಸಿಯುತ್ತಿದೆ ಎಂಬ
ಕಾರಣಕ್ಕೆ ನೆಲಸಮ
ಡಿ.11 ರಂದು ಸ್ಥಳೀಯ ಶಾಲಾ ಮಕ್ಕಳು ಆಡವಾಡುತ್ತಿದ್ದ ವೇಳೆ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿತ್ತು. ಮಕ್ಕಳ ಓಡಾಟದ ವೇಳೆ ಅಪಾಯ ಸಂಭವಿಸಬಾರದು ಎಂಬ ಕಾರಣ ನೀಡಿ ಸ್ಥಳೀಯ ಶಾಲಾ ಎಸ್‌ಡಿಎಂಸಿ ನೇತೃತ್ವದಲ್ಲಿ ಜೆಸಿಬಿ ಮೂಲಕ ಡಿ. 12ರ ರಾತ್ರಿ ಕಟ್ಟಡವನ್ನು ನೆಲಸಮ ಮಾಡಲಾಗಿದೆ.

ಶಾಲೆಯ ಕಟ್ಟಡವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಎಸ್‌.ಡಿ.ಎಂ.ಸಿ. ಮೂಲಕ ಅನೇಕ ಬಾರಿ ಶಾಸಕರಿಗೆ, ಸಂಬಂಧಿಸಿದ ಇಲಾಖೆಗೆ ಮನವಿ ಮಾಡಲಾಗಿತ್ತು. ಯಾವುದೇ ಅನುದಾನ ಬಾರದ ಕಾರಣ ದುರಸ್ತಿ ಆಗಿರಲಿಲ್ಲ. ಈ ನಡುವೆ ಶಾಲೆಯ ಮಕ್ಕಳು ಮತ್ತು ಪರಿಸರದ ಮಕ್ಕಳು ಅಲ್ಲಿ ಆಟವಾಡುತ್ತಿದ್ದ ವೇಳೆ ಕಟ್ಟಡದ ಕೆಲವು ಭಾಗ ಧರೆಗೆ ಉರುಳಿದೆ. ಈ ನಿಟ್ಟಿನಲ್ಲಿ ರವಿವಾರ ಶಾಲಾ ಎಸ್‌ಡಿಎಂಸಿ ಮತ್ತು ಸ್ಥಳೀಯರು ಸೇರಿ ಕಟ್ಟಡ ನಿರ್ವಹಣೆ ಮಾಡಲು ಶಾಸಕರ ಅನುಮತಿ ಪಡೆದು ಹೆಂಚು ತೆರವು ಕಾರ್ಯ ನಡೆಸಿದ್ದಾರೆ.

ಈ ವೇಳೆ ಕಟ್ಟಡದ ಒಂದು ಭಾಗ ಪೂರ್ಣ ಕುಸಿದು ಬಿತ್ತು. ಆ ಸಂದರ್ಭ ಮುಂದೆ ಕಟ್ಟಡದ ಉಳಿದ ಭಾಗವು ಬೀಳುವ ಹಂತದಲ್ಲಿದೆ ಎಂದು ತುರ್ತಾಗಿ ಎಸ್‌ಡಿಎಂಸಿ ಮತ್ತು ಸ್ಥಳೀಯರ ಜತೆ ಸಭೆ ನಡೆಸಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕಟ್ಟಡ ತೆರವು ಮಾಡುವ ನಿರ್ಣಯ ಕೈಗೊಂಡು ಕಟ್ಟಡ ತೆರವುಗೊಳಿಸಿದ್ದೇವೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಪಂಚಾಕ್ಷರಿ ಪ್ರತಿಕ್ರಿಯಿಸಿದ್ದಾರೆ.

ಕಮರಿದ ಪಾರಂಪರಿಕ ತಾಣದ ಕನಸು
ಭವ್ಯ ಇತಿಹಾಸ ಹೊಂದಿರುವ ಕಟ್ಟಡವನ್ನು ಪಾರಂಪರಿಕ ತಾಣವಾಗಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೆಲವು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ಗೆ 50 ಲಕ್ಷ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆ ಅನುದಾನ ಮಂಜೂರಾಗಲಿಲ್ಲ. ಹತ್ತಾರು ವರ್ಷಗಳಿಂದ ಕಟ್ಟಡ ಇದೇ ಸ್ಥಿತಿಯಲ್ಲಿದ್ದರೂ ಸಂಬಂಧಿಸಿದ ಇಲಾಖೆ, ಜನಪ್ರತಿನಿಧಿಗಳು ಸಂರಕ್ಷಣೆಗೆ ಇಚ್ಛಾ ಶಕ್ತಿ ಪ್ರದರ್ಶಿಸದ ಪರಿಣಾಮ ಕಟ್ಟಡ ಅನಾಥ ಸ್ಥಿತಿಯಲ್ಲಿತ್ತು ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಟ್ಟಡದ ಇತಿಹಾಸ
1865ರಲ್ಲಿ ಬ್ರಿಟಿಷ್‌ ಸರಕಾರ ಕಟ್ಟಿದ ಗವರ್ನಮೆಂಟ್‌ ಎಲಿಮೆಂಟರಿ ಶಾಲೆ ಇದು. ನಗರದ ಹೃದಯ ಭಾಗದಲ್ಲಿ 3.26 ಎಕ್ರೆ ಜಮೀನು ಇದಕ್ಕಿದೆ. ಸ್ವಾತಂತ್ರ್ಯ ಅನಂತರ ಇದನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತೂರು ಎನ್ನಲಾಯಿತು. ಈಗ ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎನ್ನಲಾಗುತ್ತದೆ. ಜನ ಆಡುಮಾತಿನಲ್ಲಿ ನೆಲ್ಲಿಕಟ್ಟೆ ಶಾಲೆ ಎನ್ನುತ್ತಾರೆ. ಇಲ್ಲಿ ನಡೆಯುತ್ತಿದ್ದ ಪ್ರಾಥಮಿಕ ಶಾಲೆ ಪಕ್ಕದ 2 ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಇಲ್ಲಿ ನಡೆಯುತ್ತಿದ್ದ 3 ಕಾಲೇಜುಗಳೂ ಬೇರೆ ಕಡೆ ಹೋಗಿವೆ.

ಪುತ್ತೂರು ಉಪ ವಿಭಾಗದ ಮೊದಲ ಶಾಲೆಯಾಗಿ ಬ್ರಿಟಿಷ್‌ ಸರಕಾರ ಕಟ್ಟಿತ್ತು. 1935ರ ಸುಮಾರಿಗೆ ಪುತ್ತೂರಿಗೆ ಬಂದ ಡಾ|ಶಿವರಾಮ ಕಾರಂತರು ಬಾಲವನ ಅಭಿವೃದ್ಧಿಪಡಿಸುವ ಮೊದಲು ಈ ಶಾಲೆಯನ್ನು ರಂಗ ಚಟುವಟಿಕೆ ಕೇಂದ್ರವಾಗಿ ಬೆಳೆಸಿದರು. ತಾವೇ ಸ್ವತಃ ನಾಟ್ಯ, ನಾಟಕ ನಿರ್ದೇಶನ ಮಾಡುತ್ತಿದ್ದರು. ಶಾಲೆಯ ಒಳಗೆ ಗ್ರೀಕ್‌ ಮಾದರಿಯ ರಂಗವೇದಿಕೆಯಿದ್ದು, ಅದರಲ್ಲಿ ನಾಟಕ ಆಡಿಸುತ್ತಿದ್ದರು. 73 ವರ್ಷಗಳ ಹಿಂದೆ ಪುತ್ತೂರು ನಾಡಹಬ್ಬ ಇಲ್ಲೇ ಆರಂಭಿಸಿದರು. ದಶಕಗಳ ಬಳಿಕ ನಾಡಹಬ್ಬ ಮಹಾಲಿಂಗೇಶ್ವರ ದೇಗುಲಕ್ಕೆ ಸ್ಥಳಾಂತರಗೊಂಡಿತು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.