ಪಾಂಬೂರು ಮಾನಸ ಪುನರ್ವಸತಿ ಕೇಂದ್ರ:  ರಜತ ಮಹೋತ್ಸವ ಕಾರ್ಯಕ್ರಮಗಳಿಗೆ ಚಾಲನೆ


Team Udayavani, Dec 15, 2021, 3:54 PM IST

24shirva

ಶಿರ್ವ: ಬಂಟಕಲ್ಲು ಸಮೀಪದ ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದ ರಜತ ಮಹೋತ್ಸವ ವರ್ಷದ ಕಾರ್ಯಕ್ರಮಗಳಿಗೆ ಡಿ. 15 ರಂದು ಮಾನಸ ಸಭಾ ಭವನದಲ್ಲಿ ಚಾಲನೆ ನೀಡಲಾಯಿತು.

ರಜತ ಮಹೋತ್ಸವ ಕಾರ್ಯಕ್ರಮಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೆಥೋಲಿಕ್‌ ಸಭಾ ಮಂಗಳೂರು ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ ವಂ| ಜೆ.ಬಿ. ಸಲ್ದಾನಾ ಆಶೀರ್ವಚನ ನೀಡಿ, ಸಮಾಜದ ಪರಿಧಿಯಲ್ಲಿ ಜೀವಿಸುವ ವಿಶೇಷ ಚೇತನ ಮಕ್ಕಳ ಸೇವೆ ದೇವರ ಸೇವೆಯಿದ್ದಂತೆ. ಅವರ ಬಗ್ಗೆ ಕಾಳಜಿ ವಹಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನದ ಕುರುಹು ಮಾನಸ ಪುನರ್ವಸತಿ ಕೇಂದ್ರದಲ್ಲಿ ದೊರೆಯುತ್ತದೆ. ವಿಶೇಷ ಪ್ರತಿಭೆಗಳಿರುವ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ವ್ಯಕ್ತಿತ್ವ ರೂಪಿಸಿ ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಕಪ್ಪು ಚುಕ್ಕೆಯಿಲ್ಲದೆ ವಿಶೇಷ ಗಮನಹರಿಸಿಕೊಂಡು ಬಂದಿರುವ ಸಂಸ್ಥೆಯ ಸಮಾಜಮುಖೀ ಸೇವೆಗೆ ದೇವರ ಅನುಗ್ರಹವಿರಲಿ ಎಂದು ಹೇಳಿದರು.

ರಜತ ಮಹೋತ್ಸವ ವರ್ಷದ ಲೋಗೋ ಬಿಡುಗಡೆ ಮಾಡಿದ ಆಧ್ಯಾತ್ಮಿಕ ನಿರ್ದೇಶಕ ವಂ| ಫರ್ಡಿನಾಂಡ್‌ ಗೋನ್ಸಾಲ್ವೀಸ್‌ ಮಾತನಾಡಿ ಮಾನಸ ಸಂಸ್ಥೆಯಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಸಮಾಜದ ಎಲ್ಲಾ ಸಮುದಾಯದ ಜನರಿಗೆ ಅವಕಾಶ ನೀಡಿ ವಿಶೇಷ ಮಕ್ಕಳ ಶಿಕ್ಷಣ, ಆರೈಕೆ, ಸೇವೆ ಮಾಡಲಾಗುತ್ತಿದ್ದು, ದೇವರು ಕೊಟ್ಟ ಅವಕಾಶವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುವಂತಾಗಲಿ ಎಂದರು.

ಸಾಹಿತ್ಯಕ್ಕೆ ಲಭಿಸಿದ ನಗದು ಪುರಸ್ಕಾರವನ್ನು ಸೋಲಾರ್‌ದೀಪ ಅಳವಡಿಸಲು ಮಾನಸ ಸಂಸ್ಥೆಗೆ ದೇಣಿಗೆಯಾಗಿ ನೀಡಿ 3 ಸೋಲಾರ್‌ ದೀಪವನ್ನು ಉದ್ಘಾಟಿಸಿದ ಸಾಹಿತಿ ಮಿತಾಶಾ ರಿಯಾ ರೊಡ್ರಿಗಸ್‌ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಎಲ್ರಾಯ್‌ ಕಿರಣ್‌ ಕ್ರಾಸ್ತಾ ರಜತ ಮಹೋತ್ಸವ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಕೆಥೋಲಿಕ್‌ ಸಭಾ ಮಂಗಳೂರು ಪ್ರದೇಶ್‌ನ ಅಧ್ಯಕ್ಷ ಸ್ಟಾನಿ ಲೋಬೋ, ಕೆಥೋಲಿಕ್‌ ಸಭಾ ಉಡುಪಿ ಪ್ರದೇಶ್‌ನ ಅಧ್ಯಕ್ಷೆ ಮೇರಿ ಡಿಸೋಜಾ,ಮಾನಸ ಸಂಸ್ಥೆಯ ಕಾರ್ಯದರ್ಶಿ ಜೋಸೆಫ್‌ ನೊರೊನ್ಹಾ, ವೇದಿಕೆಯಲ್ಲಿದ್ದರು. ಡಾ|ಜೆರಾಲ್ಡ್‌ ಪಿಂಟೊ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾನಸ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಕೆಥೋಲಿಕ್‌ ಸಭಾ ಉಡುಪಿ ಮತ್ತು ಮಂಗಳೂರು ಪ್ರದೇಶ್‌ನ ಪದಾಧಿಕಾರಿಗಳು, ಶಾಲೆಯ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಹೆತ್ತವರು,ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹೆನ್ರಿ ಮೆನೇಜಸ್‌ ಸ್ವಾಗತಿಸಿದರು. ಶಿಕ್ಷಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿ, ಪ್ರಾಂಶುಪಾಲೆ ಸಿ| ಅನ್ಸಿಲ್ಲಾ ಫೆರ್ನಾಂಡಿಸ್‌ ವಂದಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.