ಹೆಬ್ರಿ ಆರೋಗ್ಯ ಕೇಂದ್ರ: ಖಾಯಂ ವೈದ್ಯರ ಕೊರತೆ, ರೋಗಿಗಳ ಪರದಾಟ


Team Udayavani, Dec 15, 2021, 5:23 PM IST

ಹೆಬ್ರಿ ಆರೋಗ್ಯ ಕೇಂದ್ರ: ಖಾಯಂ ವೈದ್ಯರ ಕೊರತೆ, ರೋಗಿಗಳ ಪರದಾಟ

ಹೆಬ್ರಿ : ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಬೇಕಾಗಿದ್ದ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರ ಕೊರತೆಯಿಂದಾಗಿ ರೋಗಿಗಳಿಗೆ ಸರಿಯಾದ ಚಿಕಿತ್ಸೆಗಳಿಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿಂದೆ ಇದ್ದವರು ವರ್ಗಾವಣೆಗೊಂಡ ಬಳಿಕ ಇದುವರೆಗೆ ಮೆಡಿಸಿನ್‌ ವಿಭಾಗದ ವೈದ್ಯಾಧಿಕಾರಿಗಳು ಬರಲಿಲ್ಲ. ಈಗಿರುವ ವೈದ್ಯಾಧಿಕಾರಿ ಡೆಂಟಲ್‌ ವೈದ್ಯ ರಾ ಗಿ ರುವುದರಿಂದ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆಗೆ ಸಿಗುತ್ತಿಲ್ಲ. ಗುತ್ತಿಗೆ ಆಧಾರದ ವೈದ್ಯರಿಂದ ಲೂ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿವೆ.

ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ
ಒಂದೆಡೆ ಕೊರೊನಾ ಹಾಗೂ ಓಮಿಕ್ರಾನ್‌ನಿಂದಾಗಿ ಜನ ಭಯಭೀತರಾಗಿದ್ದಾರೆ. ತುರ್ತು ಚಿಕಿತ್ಸೆಗಾಗಿ ಸಂಜೆ ಅಥವಾ ರಾತ್ರಿ ಹೊತ್ತು ಆಸ್ಪತ್ರೆಗೆ ಬಂದರೆ ಇಲ್ಲಿ ವೈದ್ಯರಿಲ್ಲ ಎಂದು ರೋಗಿಗಳ ಮನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇತರ ದಿನಗಳಲ್ಲಿ ಬಂದರೂ ನೋಂದಣಿ, ರಕ್ತ ಪರೀಕ್ಷೆ, ಔಷಧಾಲಯದಲ್ಲಿ ಗಂಟೆಗಟ್ಟಲೆ ಕಾಯ ಬೇಕಾಗುತ್ತದೆ ಎಂದು ರೋಗಿಗಳು ದೂರಿದ್ದಾರೆ. ಡಿ.11ರಂದು ಆರೋಗ್ಯ ಕೇಂದ್ರದಲ್ಲಿ ಯಾರೂ ವೈದ್ಯರಿಲ್ಲದೆ ಹೆಬ್ರಿ ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ನೂರಾರು ಜನರು ಚಿಕಿತ್ಸೆ ಸಿಗದೆ ಪರದಾಡಿದ್ದಾರೆ.

ಕಟ್ಟಡ ಮಾತ್ರ ಸೌಲಭ್ಯವಿಲ್ಲ
ಕಳೆದ 3ವರ್ಷಗಳ ಹಿಂದೆ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿದೆಯೇ ಹೊರತು ಇಲ್ಲಿ ಯಾವುದೇ ಆಧುನಿಕ ಚಿಕಿತ್ಸಾ ಸೌಲಭ್ಯಗಳಿಲ್ಲ. ಇದೀಗ ತಾಲೂಕು ಕೇಂದ್ರ ವಾದ ಹೆಬ್ರಿಯಲ್ಲಿ ಖಾಸಗಿ ಸೇರಿದಂತೆ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆಧುನಿಕ ಸೌಲಭ್ಯದ ಆಸ್ಪತ್ರೆಗಳಿಲ್ಲ. ಅಪಘಾತ ಅಥವಾ ತುರ್ತು ಸ್ಕಾನಿಂಗ್‌ ಮಾಡಿಸಬೇಕಾದರೆ ಮಣಿಪಾಲ ಅಥವಾ ಉಡುಪಿಯನ್ನೆ ಅವಲಂಬಿಸಬೇಕಾಗಿದೆ.ಈ ಕೇಂದ್ರದಲ್ಲಿ ಅಥವಾ ಖಾಸಗಿಯಾಗಿ ಸ್ಕ್ಯಾನಿಂಗ್‌ ಸೆಂಟರ್‌ ನಿರ್ಮಾಣವಾಗಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.

ಹೆಚ್ಚುತ್ತಿರುವ ರೋಗಿಗಳು
ತಾಲೂಕಾಗಿ ಮಾರ್ಪಟ್ಟ ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರ ಹೊರನೋಟಕ್ಕೆ ಸುಸಜ್ಜಿತವಾಗಿದ್ದು ಇದನ್ನು ನೋಡಿದ ಜನರು ಚಿಕಿತ್ಸೆಗೆಂದು ಬಂದು ಕಾಯುವ ಹಾಗೂ ಸರಿಯಾಗಿ ಚಿಕಿತ್ಸೆ ಸಿಗದೆ ಹಿಂದಿರುಗುವ ಪರಿಸ್ಥಿತಿ ನಿರ್ಮಾಣ ವಾಗಿದೆ.ಪ್ರಸ್ತುತ ಹೆಬ್ರಿ ಆರೋಗ್ಯ ಕೇಂದ್ರಕ್ಕೆ ತಿಂಗಳಿಗೆ ಸುಮಾರು 4 ಸಾವಿರದಿಂದ 5 ಸಾವಿರ ರೋಗಿಗಳು ಬರುತ್ತಿದ್ದಾರೆ.ರೋಗಿಗಳಿಗೆ ಅಗತ್ಯವಾದ ಮೆಡಿಸಿನ್‌ ಲಭ್ಯವಿಲ್ಲದೆ ಹೊರ ವಲಯದಲ್ಲಿ ಹುಡುಕುವ ಪರಿಸ್ಥಿತಿ ಉಂಟಾಗಿದೆ.

ರಜಾ ದಿನಗಳಲ್ಲಿ ವೈದ್ಯರಿಲ್ಲ
ಈ ಕೇಂದ್ರದಲ್ಲಿ ಕಚೇರಿ ಸಮಯ ಹೊರತುಪಡಿಸಿ ರಾತ್ರಿ ಹೊತ್ತು ಹಾಗೂ ಅದಿತ್ಯವಾರದ ದಿನ ಅಪಘಾತ ಅಥವಾ
ತುರ್ತುಚಿಕಿತ್ಸೆಗೆ ಆಸ್ಪತ್ರೆಗೆ ಬಂದರೆ ವೈದ್ಯರು ಲಭ್ಯವಿರುವುದಿಲ್ಲ. ಇಲ್ಲಿ ಮೂಲಭೂತ ಸಮಸ್ಯೆ ಇದ್ದರೂ ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹುದ್ದೆಗಳು ಖಾಲಿ
ಮೆಡಿಸಿನ್‌ ವಿಭಾಗದ ಆಡಳಿತ ವೈದ್ಯಾಧಿಕಾರಿ, ಮಕ್ಕಳ, ಹೆರಿಗೆ,ಅರಿವಳಿಕೆ ತಜ್ಞರ ಈ 4 ಖಾಯಂ ವೈದ್ಯರ ಹುದ್ದೆಗಳು
ಖಾಲಿ ಇದೆ. ಆಧುನಿಕ ಸೌಲಭ್ಯದ ಚಿಕಿತ್ಸಾ ವಿಧಾನ, ಅತೀ ಅಗತ್ಯ ಔಷಧಗಳು ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ. ಅಲ್ಲದೆ ಖಾಯಂ ಮೆಡಿಸಿನ್‌ ವೈದ್ಯರಿಲ್ಲದ ಪರಿಣಾಮ ಮರಣೋತ್ತರ ಪರೀಕ್ಷೆಗೆ ಸಮಸ್ಯೆಯಾಗಿದೆ.

ಪ್ರಯೋಜನಕ್ಕೆ ಬಾರದ ಸೌಲಭ್ಯ
ಈ ಕೇಂದ್ರದಲ್ಲಿ ಲಕ್ಷಾಂತರ ಖರ್ಚು ಮಾಡಿ ಆಕ್ಸಿಜನ್‌ ಘಟಕ ನಿರ್ಮಾಣವಾಗಿದೆ.ಆದರೆ ಇದರಿಂದ ಜನರಿಗೆ ಯಾವ ಪ್ರಯೋಜನವು ಇಲ್ಲ.ಕೋವಿಡ್‌ ರೋಗಿ ತುರ್ತು ಚಿಕಿತ್ಸೆಗಾಗಿ ಇಲ್ಲಿಗೆ ಬಂದರೂ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗುತ್ತದೆ.

ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಲಿ
ಉಳಿದ ಸೌಲಭ್ಯ ಕಲ್ಪಿಸಿ ತಾಲೂಕು ಆಸ್ಪತ್ರೆಯನ್ನಾಗಿ ಮಾಡಿದಲ್ಲಿ ಇಲ್ಲಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎನ್ನುವುದು ಇಲ್ಲಿನ ನಾಗರಿಕರ ಅಭಿಪ್ರಾಯವಾಗಿದೆ.

ಶೀಘ್ರ ಮಕ್ಕಳ ವೈದ್ಯರು ಬೇಕು
ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 18 ಉಪಕೇಂದ್ರಗಳಿದ್ದು ಅದ ರಲ್ಲಿ 16 ಇದೀಗ ತಾಲೂಕು ಆದ ಬಳಿಕ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಡುತ್ತದೆ. ತೀರ ಅಗತ್ಯವಿರುವ ಮಕ್ಕಳ ವೈದ್ಯರಿಲ್ಲ ಎಂಬ ಕೊರತೆ ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಅಲ್ಲದೆ ಇದೀಗ ಮಕ್ಕಳಿಗೆ ತೀರ ಸಮಸ್ಯೆಯಾಗಿ ಪರಿಣಮಿಸಲಿರುವ ವೈರಸ್‌ನಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರಾದರೆ ತಾಲೂಕು ಕೇಂದ್ರವಾದ ಹೆಬ್ರಿಯ ಸುತ್ತಮುತ್ತ ಮಕ್ಕಳ ಖಾಸಗಿ ವೈದ್ಯರೂ ಇಲ್ಲ ಎನ್ನುವುದು ಬೇಸರದ ಸಂಗತಿ ಎಂದು ಸಾರ್ವಜನಿಕರು ಹೇಳುತ್ತಾರೆ.

ಉಗ್ರ ಪ್ರತಿಭಟನೆ
ಕೋಟ್ಯಂತರ ರೂ. ವೆಚ್ಚ ದಲ್ಲಿ ನಿರ್ಮಾಣವಾದ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ ಊಟಕ್ಕೆ ಇಲ್ಲದ ಉಪ್ಪಿನಕಾಯಿಯಂತಾಗಿದೆ. ಆಕ್ಸಿಜನ್‌ ಘಟಕ, ಕೋವಿಡ್‌ ಕೇರ್‌ ಸೆಂಟರ್‌ ಅನ್ನು ಆರೋಗ್ಯ ಸಚಿವರೇ ಬಂದು ಉದ್ಘಾಟನೆ ಮಾಡಿದ್ದಾರೆ.ಆದರೆ ಇದರಿಂದ ಜನರಿಗೆ ಯಾವ ಪ್ರಯೋಜನವೂ ಆಗಿಲ್ಲ. ಸಂಜೆ 4 ಗಂಟೆ ಮೇಲೆ ಆಸ್ಪತ್ರೆಯಲ್ಲಿ ವೈದ್ಯರು ಸಿಗುವುದಿಲ್ಲ. ರಾತ್ರಿ ಹೊತ್ತು ಅಂತೂ ಯಾರೂ ಇಲ್ಲ. ಈ ಬಗ್ಗೆ ಜನಪ್ರತಿನಿಧಿಗಳು ಯಾಕೆ ಮೌನವಾಗಿದ್ದಾರೆ. ಸಮಸ್ಯೆ ಶೀಘ್ರ ಬಗೆಹರಿಯದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಹೆಬ್ರಿಯ ಶ್ರೀಕಾಂತ್‌ ಪೂಜಾರಿ ಕುಚ್ಚಾರು ತಿಳಿಸಿದ್ದಾರೆ.

ಖಾಯಂ ವೈದ್ಯರ ಕೊರತೆ
ಖಾಯಂ ವೈದ್ಯರ ಕೊರತೆ ಇದೆ. ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಲು ಈಗ ಅವಕಾಶವಿಲ್ಲ. ಇಲ್ಲಿನ ಸಮಸ್ಯೆ ಬಗ್ಗೆ ಈ ವಾರದಲ್ಲಿ ಸ್ಥಳಕ್ಕೆ ಬಂದು ಸಭೆ ನಡೆಸಿ ಅಭಿವೃದ್ಧಿ ಹಾಗೂ ಸುಧಾರಣೆ ಬಗ್ಗೆ ಚರ್ಚಿಸಲಾಗುವುದು.ಆದಷ್ಟು ಶೀಘ್ರ ಸಮಸ್ಯೆ ಬಗೆಹರಿಸುವ ಬಗ್ಗೆ ಪ್ರಯತ್ನಿಸಲಾಗುವುದು.
-ನಾಗಭೂಷಣ ಉಡುಪ
ಜಿಲ್ಲಾ ಆರೋಗ್ಯ ಅಧಿಕಾರಿ

-ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-DC

Udupi: ಸೆಪ್ಟೆಂಬರ್ 28-29: ದಸರಾ ಕ್ರೀಡಾಕೂಟ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

k

Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.