ಸರ್ಕಾರಿ ಜಮೀನು ಏಕವ್ಯಕ್ತಿ ಕೋರಿಕೆ ಅರ್ಜಿಗಳ ಶೀಘ್ರ ವಿಲೇವಾರಿ: ಆರ್ ಅಶೋಕ್
Team Udayavani, Dec 15, 2021, 10:00 PM IST
ಸುವರ್ಣವಿಧಾನಸೌಧ: ಗೋಮಾಳ ಸೇರಿ ಸರ್ಕಾರಿ ಜಮೀನು ಮಂಜೂರುದಾರರಿಗೆ ಏಕವ್ಯಕ್ತಿ ಕೋರಿಕೆ ಮೇಲೆ ಸಲ್ಲಿಸಿದ ಸಮೀಕ್ಷೆ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಬುಧವಾರ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸರ್ಕಾರಿ ಜಮೀನು ಪೋಡಿ ವಿಚಾರದಲ್ಲಿ ಈವರೆಗೂ ಅನೇಕ ಗೊಂದಲಗಳಿದ್ದವು. ಮೊದಲು ನೀಡಿದವರಿಗೆ ಇದನ್ನು ಕೊಡಬೇಕಾ ಅಥವಾ ನಂತರ ಪಡೆದವರಿಗೆ ಕೊಡಬೇಕಾ ಎನ್ನುವ ಸಮಸ್ಯೆ ಎದುರಾಗಿದೆ. ಈ ವಿಚಾರದಲ್ಲಿ ಅನೇಕರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಲಕ್ಷಾಂತರ ಪ್ರಕರಣಗಳು ಅಡಕತ್ತರಿಯಲ್ಲಿ ಸಿಲುಕಿಕೊಂಡಿವೆ.
ಇಲ್ಲಿ ಭೂಮಿ ಯಾರಿಗೆ ನೀಡಬೇಕು ಎಂಬುದನ್ನು ನಿರ್ಧಾರ ಮಾಡಬೇಕಾಗಿದೆ. 2019 ರಿಂದ 2021ರವರೆಗೆ 193687 ಅರ್ಜಿಗಳು ಹಾಗೂ ಆರ್ಟಿಸಿ ತಿದ್ದುಪಡಿಗೆ 373234 ಸೇರಿ ಒಟ್ಟು 566921 ಅರ್ಜಿಗಳು ಬಂದಿವೆ. ಈ ಎಲ್ಲ ಅರ್ಜಿಗಳನ್ನು ಕಂದಾಯ ಅದಾಲತ್ನಲ್ಲಿ ಇತ್ಯರ್ಥ ಪಡಿಸಲಾಗಿದೆ. ಈ ಪೈಕಿ 193687 ಅರ್ಜಿಗಳು ಇತ್ಯರ್ಥ ಪಡಿಸಲಾಗಿದೆ ಎಂದರು.
ಇದನ್ನೂ ಓದಿ:ಹಿರಿಯ ಸಾಹಿತಿ ಮಳಿಯಪ್ಪ ಪತ್ತಾರ ನಿಲೋಗಲ್ ಹೃದಯಾಘಾತದಿಂದ ನಿಧನ
ಇದೀಗ 2000 ಭೂ ಸಮೀಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ ಎರಡು ಸಾವಿರ ಭೂ ಸಮೀಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಹೀಗಾಗಿ ಹೆಚ್ಚು ಸಮೀಕ್ಷಕರು ಬಂದ ನಂತರವಷ್ಟೇ ಇದಕ್ಕೆ ಪರಿಹಾರ ಸಿಕ್ಕುತ್ತದೆ. ಕೂಡಲೇ ಏಕವ್ಯಕ್ತಿ ಅರ್ಜಿಗಳ ಶೀಘ್ರ ವಿಲೇವಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.