![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 16, 2021, 7:05 AM IST
ಹೊಸದಿಲ್ಲಿ: ಸುನ್ನಿ ಇಸ್ಲಾಮಿಕ್ ಮಿಷನರಿ ಮೂವ್ಮೆಂಟ್ ತಬ್ಲಿಘಿ ಜಮಾತ್ ಭಾರತ ಮಾತ್ರವಲ್ಲದೇ ಇಡೀ ಜಗತ್ತಿಗೇ ಅಪಾಯಕಾರಿ.
ಈ ಸಂಸ್ಥೆಯು ಜೆಹಾದಿ ಸಿದ್ಧಾಂತವಾದಿ ಅಬು ಮುಸಾಬ್ ಅಲ್-ಸುರಿಯನ್ನು ಪ್ರತಿನಿಧಿಸುತ್ತಿದ್ದು, ಮಾದರಿ ಜಾಗತಿಕ ಜೆಹಾದಿ ಜಾಲವಾಗಿ ಮಾರ್ಪಾಡಾಗುವುದೇ ಇದರ ಉದ್ದೇಶ ಎಂದು ಗುಪ್ತಚರ ಮೂಲಗಳು ತಿಳಿಸಿರುವುದಾಗಿ ನ್ಯೂಸ್18 ವರದಿ ಮಾಡಿದೆ.
ಅಲ್ಕಾಯಿದಾ, ಐಸಿಸ್ನಂತಹ ಉಗ್ರ ಸಂಘಟನೆಗಳು ತಮ್ಮ ಪ್ರಭಾವವನ್ನು ಕಳೆದುಕೊಳ್ಳುತ್ತಿದ್ದರೂ, ತಬ್ಲಿಘಿ ಜಮಾತ್ ಮೇಲೆ ಯಾವ ಪರಿಣಾಮವೂ ಬೀರಿಲ್ಲ. ಈ ಸಂಸ್ಥೆಯು ಈಗಲೂ ಐಸಿಸ್ನಂಥ ಉಗ್ರ ಸಂಘಟನೆಗಳಿಗೆ ಯುವಕರನ್ನು ನೇಮಕ ಮಾಡುತ್ತಲೇ ಇದೆ. ಜಗತ್ತಿನ ಮೂಲೆಮೂಲೆಯಲ್ಲೂ ತನ್ನ ಸದಸ್ಯರಿಗೆ ತರಬೇತಿ ನೀಡುತ್ತಿದೆ.
ಪಾಕ್ನಂಥ ದೇಶಗಳ ಯುವಕರನ್ನು ಹೆಚ್ಚು ಸೆಳೆಯುತ್ತಿದೆ ಎಂದೂ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಕೆಲವು ದೇಶಗಳಲ್ಲಿ ಉಗ್ರ ಸಂಘಟನೆಗಳಿಗೆ ಹಣಕಾಸು ನೆರವನ್ನೂ ನೀಡುತ್ತಿವೆ. ಭಾರತದಲ್ಲೂ ಲಕ್ಷಾಂತರ ಮಂದಿ ತಬ್ಲಿಘಿ ಅನುಯಾಯಿಗಳಿದ್ದು, ಭವಿಷ್ಯದಲ್ಲಿ ಇದು ದೇಶಕ್ಕೆ ಅಪಾಯಕಾರಿ ಆಗುವ ಸಾಧ್ಯತೆಯಿದೆ ಎಂದೂ ಗುಪ್ತಚರ ಮೂಲಗಳು ತಿಳಿಸಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.