ಒತ್ತುವರಿ ಜಮೀನನ್ನು ಭೋಗ್ಯಕ್ಕೆ ಕೊಡಲು ಕಾಫಿ ಬೆಳೆಗಾರರ ಬೇಡಿಕೆ

ಕಂದಾಯ, ತೋಟಗಾರಿಕೆ ಸಚಿವರನ್ನು ಭೇಟಿಯಾದ ಕಾಫಿ ಬೆಳೆಗಾರರ ಒಕ್ಕೂಟ

Team Udayavani, Dec 16, 2021, 5:02 PM IST

ಒತ್ತುವರಿ ಜಮೀನನ್ನು ಭೋಗ್ಯಕ್ಕೆ ಕೊಡಲು ಕಾಫಿ ಬೆಳೆಗಾರರ ಬೇಡಿಕೆ

ಬೆಳಗಾವಿ : ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಫಿ ಬೆಳೆಗಾರರು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ನಿಗದಿತ ಶುಲ್ಕ ವಿಧಿಸಿ ಭೋಗ್ಯಕ್ಕೆ ನೀಡುವ ಯೋಜನೆಯನ್ನು ಜಾರಿಗೆ ತರಬೇಕೆಂಬ ಬೇಡಿಕೆಯೊಂದಿಗೆ `ಕರ್ನಾಟಕ ಬೆಳೆಗಾರರ ಒಕ್ಕೂಟ’ದ ಪ್ರತಿನಿಧಿಗಳು ಕಂದಾಯ ಸಚಿವ ಆರ್.ಅಶೋಕ್, ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಉನ್ನತ ಶಿಕ್ಷಣ ಸಚಿವ ಮುನಿರತ್ನ ಅವರನ್ನು ಗುರುವಾರ ಇಲ್ಲಿ ಭೇಟಿ ಮಾಡಿದ್ದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಏರ್ಪಡಿಸಿದ್ದ ಈ ಭೇಟಿಯಲ್ಲಿ ಬೆಳೆಗಾರರ ಒಕ್ಕೂಟವು ಕಾಡಾನೆ ಹಾವಳಿಗೆ ಪರಿಹಾರ, 10 ಎಚ್.ಪಿ.ವರೆಗಿನ ಪಂಪ್ ಸೆಟ್ ಬಳಸುವ ಕಾಫಿ ಬೆಳಗಾರರಿಗೆ ಉಚಿತ ವಿದ್ಯುತ್ ಸೌಲಭ್ಯ ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಲ್ಲಿ ತೆಗೆದುಕೊಂಡಿರುವ ಸಾಲದ ಮೇಲಿನ ಬಡ್ಡಿ ಮನ್ನಾವನ್ನು 2022ಕ್ಕೂ ವಿಸ್ತರಿಸಬೇಕು ಎಂಬ ಬೇಡಿಕೆಗಳನ್ನೂ ಸಲ್ಲಿಸಿತು.

ಒಕ್ಕೂಟದ ಪರವಾಗಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಡಾ.ಎಚ್.ಟಿ. ಮೋಹನ್ ಕುಮಾರ್, 10 ಎಕರೆ ಕಾಫಿ ತೋಟವಿರುವ ಬೆಳೆಗಾರರಿಗೆ ಇಷ್ಟೇ ವಿಸ್ತೀರ್ಣದ ಒತ್ತುವರಿ ಭೂಮಿಯನ್ನು ಭೋಗ್ಯದ ಆಧಾರದ ಮೇಲೆ ನೀಡಲಾಗುವುದು ಎಂದು ಈ ಹಿಂದೆ ರೂಪಿಸಿದ ಗುತ್ತಿಗೆ ನಿಯಮಗಳಲ್ಲಿ ಹೇಳಲಾಗಿತ್ತು. ಆದರೆ ಈ ಯೋಜನೆ ಜಾರಿಗೆ ಬಂದಿಲ್ಲ. ಇದನ್ನು ಜಾರಿಗೊಳಿಸಿದರೆ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೆ ಅನುಕೂಲವಾಗುತ್ತದೆ ಎಂದರು.

ಕಂದಾಯ ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದಲ್ಲದೆ, ಒತ್ತುವರಿ ಜಮೀನಿಗೆ ಈಗ ವಿಧಿಸಿರುವ ನೋಂದಣಿ ಶುಲ್ಕದ ಶೇ.10ರಷ್ಟು ವಾರ್ಷಿಕ ಮೌಲ್ಯವು ಅಧಿಕವಾಗಿದೆ. ಇದನ್ನು ಶೇ.5ಕ್ಕೆ ಇಳಿಸಿ, 35 ವರ್ಷಗಳ ಅವಧಿಗೆ ಭೋಗ್ಯಕ್ಕೆ ಕೊಟ್ಟರೆ ಇದರಿಂದ ಸರಕಾರದ ಬೊಕ್ಕಸಕ್ಕೆ 765 ಕೋಟಿ ರೂ. ವರಮಾನ ಬರಲಿದೆ ಎಂದು ಬೆಳೆಗಾರರ ಒಕ್ಕೂಟದ ನಿಯೋಗವು ಸಚಿವರ ಗಮನಕ್ಕೆ ತಂದಿತು.

ಜೊತೆಗೆ ಸರಕಾರಿ ಭೂ ಕಬಳಿಕೆ ಕಾಯ್ದೆಯ 192ಎ ಪರಿಚ್ಛೇದದ ಅಡಿಯಲ್ಲಿ, ಒತ್ತುವರಿ ಮಾಡಿಕೊಂಡಿರುವ ಸಣ್ಣ ರೈತರು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದು, ಬಂಧನದ ಭೀತಿಯಲ್ಲಿದ್ದಾರೆ. ಆದ್ದರಿಂದ ಈ ಕಠಿಣ ನಿಯಮಗಳಿಗೆ ಸೂಕ್ತ ತಿದ್ದುಪಡಿ ತಂದು, ಗ್ರಾಮೀಣ ಭಾಗದ ಕೃಷಿ ಜಮೀನಿಗೆ ವಿನಾಯಿತಿ ನೀಡಬೇಕು ಎಂದು ಒಕ್ಕೂಟದ ಪ್ರತಿನಿಧಿಗಳು ಕೋರಿದರು. ಇವುಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ : ದೋಟಿಹಾಳ: ಸೂಕ್ತ ಕಟ್ಟಡದ ಕೊರತೆ; ಶಾಲಾ ವರಾಂಡದಲ್ಲಿ ಮಕ್ಕಳಿಗೆ ಪಾಠ ಕೇಳುವ ಶಿಕ್ಷಕರು

ಕಾಡಾನೆ ಹಾವಳಿಗೆ ಪರಿಹಾರ ಕೋರಿಕೆ

ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿಗಳು ವಿಪರೀತವಾಗಿದ್ದು ಬೆಳೆ ಮತ್ತು ಪ್ರಾಣಹಾನಿ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಸೌರಬೇಲಿ ಅಗತ್ಯವಾಗಿದ್ದು ಇದಕ್ಕೆ ಶೇ.90ರಷ್ಟು ಸಬ್ಸಿಡಿ ಕೊಡಬೇಕು. ಅಲ್ಲದೆ, ಕಾಫಿ ಬೆಳೆ ಪ್ರದೇಶದಲ್ಲಿ ಬೀಡು ಬಿಟ್ಟಿರುವ 230ಕ್ಕೂ ಹೆಚ್ಚು ಕಾಡಾನೆಗಳನ್ನು ಸ್ಥಳಾಂತರಿಸಬೇಕು. ರೈಲ್ವೆ ಕಂಬಿ ಬಳಸಿ ತಡೆಗೋಡೆ ನಿರ್ಮಿಸಿ, ಮೂರು ಜಿಲ್ಲೆಗಳಲ್ಲೂ ಟೆಂಟಿಕಲ್ ಫೆನ್ಸಿಂಗ್ ವ್ಯವಸ್ಥೆಯನ್ನು ವಿಸ್ತರಿಸಬೇಕು. ಕಾಡಾನೆ ದಾಳಿಯಿಂದ ಪ್ರಾಣ ಕಳೆದುಕೊಳ್ಳುವವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿತು.

ಶಾಸಕರಾದ ಕೆ.ಜಿ.ಬೋಪಯ್ಯ, ಎಸ್. ಕೆ. ಕುಮಾರಸ್ವಾಮಿ, ಕರ್ನಾಟಕ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಕೃಷ್ಣಪ್ಪ ಇದ್ದರು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.