ಕೊಕ್ಕಡ ಕೋರಿ ಜಾತ್ರೆ ಸಂಪನ್ನ : ಹರಕೆಯ ರೂಪದಲ್ಲಿ ಗದ್ದೆಗಿಳಿದ ಜಾನುವಾರು


Team Udayavani, Dec 17, 2021, 3:20 AM IST

ಕೊಕ್ಕಡ ಕೋರಿ ಜಾತ್ರೆ ಸಂಪನ್ನ : ಹರಕೆಯ ರೂಪದಲ್ಲಿ ಗದ್ದೆಗಿಳಿದ ಜಾನುವಾರು

ಬೆಳ್ತಂಗಡಿ: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ಕೋರಿ ಜಾತ್ರೆಯು ಸಂಭ್ರಮದಿಂದ ಸಮಾಪನಗೊಂಡಿತು.

ಸಂಪ್ರದಾಯದ ಪ್ರಕಾರ ನೀಲೇಶ್ವರ ಎಡಮನೆ ದಾಮೋದರ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ದೇವಸ್ಥಾನದಲ್ಲಿ ಆರಂಭಗೊಂಡ ಧನುಪೂಜೆಯ ಅನಂತರ ಬೆಳಗ್ಗೆ ದೇವರ ಗದ್ದೆಯಲ್ಲಿ ಹರಕೆ ಹೊತ್ತ ಭಕ್ತರು ಸೊಪ್ಪನ್ನು ಗದ್ದೆಗೆ ಹಾಕುವ ಮೂಲಕ ಸಂಭ್ರಮಿಸಿದರು.

ಬಳಿಕ ದೇವಾಲಯದಲ್ಲಿ ಗಣಪತಿ ಹೋಮ, ಏಕಾದಶರುದ್ರ ಮಧ್ಯಾಹ್ನ ಮಹಾಪೂಜೆ ಬಳಿಕ ಸಂಪ್ರದಾಯದಂತೆ ದೇವರ ಗದ್ದೆಗೆ ಕಂಬಳದ ರೀತಿಯಲ್ಲಿ ಜಾನುವಾರುಗಳನ್ನು ಇಳಿಸಲಾಯಿತು. ಜಿಲ್ಲೆಯ ನಾನಾ ಭಾಗಗಳಿಂದ ಬಂದ ರೈತರು ತಮ್ಮ ಜಾನುವಾರಗಳನ್ನು ಈ ಗದ್ದೆಗೆ ಹರಕೆಯ ರೂಪದಲ್ಲಿ ಇಳಿಸಿದರು.

ಕೊಕ್ಕಡ ಕೋರಿ ಇತಿಹಾಸ:

ಕೊಕ್ಕಡ ಕೋರಿ ಜಾತ್ರೆಯು ಮಣ್ಣು ಹಾಗೂ ಮನುಷ್ಯನ ಕೃಷಿ ಕಾಯಕಕ್ಕಿರುವ ನಂಟನ್ನು ಬಿಂಬಿಸುತ್ತದೆ. ದೇವರ ಗದ್ದೆಯನ್ನು ಮೊದಲು ಉಳುಮೆ ಮಾಡಿ ಹದ ಮಾಡಿಕೊಳ್ಳಲಾಗುತ್ತದೆ. ಹಿಂದಿನ ಕಾಲದಿಂದ ಜಾತ್ರೆಗೆ ಒಂದು ತಿಂಗಳ ಮೊದಲು ಕೊಕ್ಕಡ ಸೀಮೆಗೊಳಪಟ್ಟ ಪ್ರತಿ ಗ್ರಾಮಗಳ ಮನೆಮನೆಗೂ ಕೋರಿ ಜಾತ್ರೆಗೆ ಕೊರಗ ಭೂತದ ವೇಷ ತೊಟ್ಟು ಆಹ್ವಾನಿಸುವ ಸಂಪ್ರದಾಯ ಇದೆ. ಕೊರಗ ವೇಷದ ಜತೆಗೆ ಡೋಲು ಬಾರಿಸಿಕೊಂಡು ಬೇರೆಯೇ ಒಂದು ತಂಡ ಊರಿಡೀ ತಿರುಗುತ್ತದೆ. ಕೊರಗ ದೈವಕ್ಕೂ ಕೃಷಿ ಹಾಗೂ ಜಾನುವಾರು ಸಂಬಂಧಿ ಹರಕೆ ಹೇಳಿ ತೀರಿಸಿಕೊಳ್ಳುವ ಪದ್ಧತಿ ಇಲ್ಲಿದೆ.

ಜಾತ್ರೆಯ ಹಿಂದಿನ ದಿನ ಸಾಯಂಕಾಲ ಕಂಬಳದ ಗದ್ದೆಗೆ ಹಾಲು ಹಾಕಿ ಗದ್ದೆಯ ಸುತ್ತ ದೀಪ ಹಚ್ಚಿ ಅಲಂಕರಿಸುತ್ತಾರೆ. ಮರುದಿನ ಬೆಳಗ್ಗೆ ಗುತ್ತಿನ ಮನೆಯಿಂದ ಅಲಂಕರಿಸಿದ ಹೋರಿ ಹಾಗೂ ಕೋಣಗಳ ಜತೆಗೆ ಪ್ರತಿ ಊರಿನಿಂದ ಹರಕೆ ಹೇಳಿ ಬಂದ ಜಾನುವಾರುಗಳನ್ನು ದೇವಸ್ಥಾನಕ್ಕೆ ಕರೆ ತಂದು ಅನಂತರ ದೇವರ ಗದ್ದೆಗೆ ವಾದ್ಯ ಘೋಷದೊಂದಿಗೆ ಕರೆದೊಯ್ಯಲಾಗುತ್ತದೆ. ಗುತ್ತಿನ ಹೋರಿಗಳನ್ನು ಮೊದಲು ಇಳಿಸಿ ಬಳಿಕ ಇತರ ಜಾನುವಾರುಗಳನ್ನು ಒಂದು ಬದಿಯಿಂದ ಇನ್ನೊಂದು ಬದಿಗೆ ಓಡಿಸಲಾಗುತ್ತದೆ. ಅನಾರೋಗ್ಯದ ಕಾರಣದಿಂದ ಹರಕೆ ಹೇಳಿಕೊಂಡ ಮಂದಿ ಸೊಪ್ಪಿನ ಕಟ್ಟನ್ನು ತಲೆಯಲ್ಲಿ ಹೊತ್ತು ಒಂದು ಸುತ್ತು ಬಂದು ಸೊಪ್ಪನ್ನು ಗದ್ದೆಗೆ ಹಾಕಿ ಗದ್ದೆಯ ನೀರನ್ನು ತೀರ್ಥವಾಗಿ ಸೇವಿಸಿ ಪ್ರೋಕ್ಷಣೆ ಮಾಡಿಕೊಳ್ಳುತ್ತಾರೆ. ಇದಕ್ಕೆಂದು ದೂರದೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಸಂಜೆ ದೇಗುದಲ್ಲಿ ಶ್ರೀ ವೈದ್ಯನಾಥೇಶ್ವರ ಹಾಗೂ ವಿಷ್ಣುಮೂರ್ತಿ ದೇವರ ಬಲಿ ಸೇವೆ ನಡೆಸಿ, ದೇವರ ಗದ್ದೆಗೆ ಭಕ್ತರ ಮೆರವಣಿಗೆಯೊಂದಿಗೆ ದೇವರು ಕೋರಿ ಗದ್ದೆಯ ಮಜಲಿನಲ್ಲಿರುವ ಕಟ್ಟೆಯಲ್ಲಿ ರಾರಾಜಿಸಿದರು. ರಾತ್ರಿ ಅನ್ನದಾನ ಸೇವೆ ನಡೆದು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜರಗಿತು.

ಪವಿತ್ರಪಾಣಿ ಎ.ರಾಧಕೃಷ್ಣ ಎಡಪಡಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಸಿಎ ಬ್ಯಾಂಕ್‌ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್‌ ಆಲಂಬಿಲ, ಅನ್ನದಾನ ಸೇವಕರ್ತರಾದ ಬಸವರಾಜ್‌ ಬೆಂಗಳೂರು, ವಿಶ್ವನಾಥ್‌ ಕೊಲ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.