![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 17, 2021, 6:51 AM IST
ಬೆಳಗಾವಿ: ಕರಾವಳಿಯ ರೈತರಿಗೆ ಅನುಕೂಲವಾಗುವಂತೆ ಹಿಂದಿನ ಸರಕಾರದಲ್ಲಿ ಭತ್ತದ ಬೆಳೆಗೆ ಹೆಕ್ಟೇರ್ಗೆ 7,500 ರೂ. ಪ್ರೋತ್ಸಾಹಧನ ನೀಡುತ್ತಿದ್ದ ಕರಾವಳಿ ಪ್ಯಾಕೇಜ್ ಪುನರ್ ಆರಂಭಿಸಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದರು.
ಅತಿವೃಷ್ಟಿ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಅಕಾಲಿಕ ಮಳೆಯಿಂದ ಕರಾವಳಿಯ ಭತ್ತ, ಅಡಿಕೆ, ತೆಂಗು, ರಬ್ಬರ್ ಹಾಗೂ ಬಾಳೆ ಹಣ್ಣಿನ ಬೆಳೆ ಸಂಪೂರ್ಣ ನಾಶವಾಗಿದೆ. ಕರಾವಳಿಯ 14 ಶಾಸಕರು ರೈತರಿಗೆ ಆಗಿರುವ ನಷ್ಟದ ಬಗ್ಗೆ ಯಾವುದೇ ಪ್ರಸ್ತಾವ ಮಾಡಿಲ್ಲ. ಕರಾವಳಿಯ ಕೃಷಿಕರು ಬೆಳೆ ಹಾನಿಯಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.
ಕಟಾವಿಗೆ ಬಂದಿದ್ದ ಭತ್ತ ಗದ್ದೆಯಲ್ಲೇ ಮೊಳಕೆಯೊಡೆದಿದೆ. ಎಡಿಆರ್ಎಫ್ ನಿಯಮದಡಿ ಭತ್ತಕ್ಕೆ ಗುಂಟೆಗೆ 6 ರೂ., ಅಡಿಗೆಗೆ 3 ರೂ., ಬಾಳೆಗೆ 20 ಪೈಸೆ ಹಾಗೂ ತೆಂಗಿಗೆ 90 ರೂ. ನೀಡಲಾಗುತ್ತಿದೆ. ಬೆಳೆ ಪರಿಹಾರ ಮೊತ್ತ ಹೆಚ್ಚಳದ ಜತೆಗೆ ಕರಾವಳಿ ಪ್ಯಾಕೇಜ್ ಪ್ರೋತ್ಸಾಹಧನ ಯೋಜನೆಯನ್ನು ಶೀಘ್ರ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.