ಅಂತರ್ಜಲ ಹೆಚ್ಚಳಕ್ಕೆ ಅಕಾಲಿಕ ಮಳೆ ನೆರವು


Team Udayavani, Dec 17, 2021, 8:15 AM IST

ಅಂತರ್ಜಲ ಹೆಚ್ಚಳಕ್ಕೆ ಅಕಾಲಿಕ ಮಳೆ ನೆರವು

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಮಳೆ ತನ್ನ ಜಾಯಮಾನ ಬದಲಿಸಿದೆ. ಬೆಂಗಳೂರು ಸೇರಿದಂತೆ ಬಯಲುಸೀಮೆಯಲ್ಲಿ ಹೆಚ್ಚು ಮಳೆ ಸುರಿಯುತ್ತಿದ್ದು, ಈ ಭಾಗಗಳಲ್ಲಿ ಅಂತರ್ಜಲ ಮಟ್ಟ ಕೂಡ ಏರಿಕೆಯಾಗುತ್ತಿದೆ. ಇದು ರೈತರಲ್ಲಿ  ಹೊಸ ಭರವಸೆ ಮೂಡಿಸಿದೆ.

ರಾಜ್ಯದ 227 ತಾಲೂಕುಗಳಲ್ಲಿ ರಾಜ್ಯ ಅಂತರ್ಜಲ ನಿರ್ದೇಶನಾಲಯ ನಿರ್ಮಿಸಿರುವ ಕೊಳವೆಬಾವಿಗಳ ಮೂಲಕ ಅಂತರ್ಜಲ ಮಟ್ಟವನ್ನು ಮಾಪನ ಮಾಡಲಾಗಿದೆ. ಈ ವೇಳೆ ಸುಮಾರು 144 ತಾಲೂಕುಗಳಲ್ಲಿ ಕನಿಷ್ಠ 0.5ರಿಂದ ಗರಿಷ್ಠ ಸುಮಾರು 27 ಮೀಟರ್‌ಗಳಷ್ಟು ಅಂತರ್ಜಲ ಮೇಲೆ ಬಂದಿರುವುದು ಕಂಡುಬಂದಿದೆ. ಇದರಲ್ಲಿ ಉತ್ತರ ಕರ್ನಾಟಕದ ಭಾಗಗಳು ಹೆಚ್ಚಿವೆ. ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಅಂತರ್ಜಲಮಟ್ಟ ಇಳಿಮುಖ ವಾಗಿರುವುದು ಅಚ್ಚರಿ ಮೂಡಿಸಿದೆ.

ಕೋಲಾರ, ಚಿಕ್ಕಬಳ್ಳಾಪುರ ಸಹಿತ ಬರದ ನಾಡಿನಲ್ಲಿ ಪ್ರಸಕ್ತ ವರ್ಷವೂ ಸೇರಿದಂತೆ ಈಚೆಗೆ ಹೆಚ್ಚು ಮಳೆಯಾಗುತ್ತಿದೆ. ಇದರೊಂದಿಗೆ ಸರಕಾರದ ವಿವಿಧ ಯೋಜನೆಗಳಡಿ ಕೆರೆ ತುಂಬಿಸುವುದು, ಕೃಷಿ ಹೊಂಡ ಅಂತರ್ಜಲ ಹೆಚ್ಚಳಕ್ಕೆ ನೆರವಾಗುತ್ತಿವೆ. ಈ ಎಲ್ಲ ಅಂಶಗಳಿಂದ ಪಾತಾಳಕ್ಕೆ ಕುಸಿದಿದ್ದ ಅಂತರ್ಜಲ ಮಟ್ಟವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಬೆಳವಣಿಗೆಯು ಭವಿಷ್ಯದಲ್ಲಿ ಆ ಭಾಗದ ಕೃಷಿ ಚಟುವಟಿಕೆಗಳಿಗೆ ಪೂರಕವಾಗಲಿದೆ.

3-4 ವರ್ಷ ಕೃಷಿಗೆ ಪೂರಕ:

ಸಾಮಾನ್ಯವಾಗಿ ಈ ಅವಧಿಯಲ್ಲಿ ಬಯಲುಸೀಮೆಯಲ್ಲಿ ಅಂತರ್ಜಲ ಮಟ್ಟ 15 ಮೀ. ಏರುತ್ತದೆ. ಆದರೆ ಈ ವರ್ಷ 25-30 ಮೀ.ವರೆಗೂ ಹೆಚ್ಚಳ ಆಗಿರುವುದು ಮಳೆಯ ಹೆಚ್ಚಳವನ್ನು ಸೂಚಿಸುತ್ತದೆ. ಅಲ್ಲದೆ, ಮಣ್ಣಿನಲ್ಲಿ ಫ‌ಲವತ್ತತೆ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕಡಿಮೆಯಾಗಿಲ್ಲ ಎಂಬುದರ ಸೂಚನೆ. ಇದು ಮುಂದಿನ 3-4 ವರ್ಷ ಕೃಷಿಗೆ ಪೂರಕವಾಗಲಿದೆ ಎಂದು ಕೃಷಿ ಹವಾಮಾನ ತಜ್ಞ ಡಾ| ಎಂ.ಬಿ. ರಾಜೇಗೌಡ ತಿಳಿಸಿದ್ದಾರೆ.

ಏಲ್ಲಿ  ಏರಿಕೆ? :  ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ಜಿಲ್ಲೆಗಳು

ಎಲ್ಲಿ  ಇಳಿಕೆ? :  ಮಲೆನಾಡು, ಕರಾವಳಿ, ಹಳೇ ಮೈಸೂರು ಭಾಗದ ಜಿಲ್ಲೆಗಳು

ಈ ಸಲ ಜೂನ್‌ನಿಂದ ನಿರಂತರವಾಗಿ ಮಳೆಯಾಗಿದೆ. ನಾಲ್ಕೈದು ದಶಕಗಳಲ್ಲಿ ಕಂಡರಿಯದ ಮಳೆ ಎಂದೂ ವಿಶ್ಲೇಷಿಸಲಾಗಿದೆ. ಇದರ ಜತೆಗೆ ಕಳೆದ ವರ್ಷ ಲಾಕ್‌ಡೌನ್‌ನಿಂದ ಬಳಕೆ ಪ್ರಮಾಣ ಕಡಿಮೆಯಾಗಿ, ಅಂತರ್ಜಲದ ಮೇಲಿನ ಒತ್ತಡವೂ ತಗ್ಗಿದೆ. ಇದರ ಫ‌ಲ ಅಂತರ್ಜಲ ಮಟ್ಟ  ಏರಿಕೆಯಾಗಿದೆ. – ವಿ.ಎಸ್‌. ಪ್ರಕಾಶ್‌, ಅಂತರ್ಜಲ ತಜ್ಞ 

-ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.