ಗೋವಾ: ಬೀಚ್ ಗಳಲ್ಲಿ ಹೆಚ್ಚುತ್ತಿದೆ ಪ್ರವಾಸಿಗರ ದಂಡು
Team Udayavani, Dec 18, 2021, 11:58 AM IST
ಪಣಜಿ: ಗೋವಾದ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಸಂಪೂರ್ಣ ಭರ್ತಿಯಾಗುತ್ತಿದೆ. ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಪ್ರಮುಖವಾಗಿ ಗೋವಾದಲ್ಲಿನ ಬೀಚ್ಗಳನ್ನು ಇಷ್ಟಪಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಬೀಚ್ಗಳಲ್ಲಿ ಪ್ರವಾಸಿಗರ ಗರ್ದಿ ಕಂಡುಬರುತ್ತಿದೆ. ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಗೋವಾದತ್ತ ಮುಖಮಾಡಿರುವ ಹಿನ್ನೆಲೆಯಲ್ಲಿ ಗೋವಾದಲ್ಲಿನ ಪ್ರವಾಸೋದ್ಯಮ ಅವಲಂಬಿತ ಉದ್ಯೋಗಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಮಾರ್ಚ್ 2020 ರಲ್ಲಿ ಕರೋನಾ ಮಹಾಮಾರಿಯಿಂದಾಗಿ ದೇಶ-ವಿದೇಶಿಯ ಪ್ರವಾಸಿಗರು ಗೋವಾಕ್ಕೆ ಭೇಟಿ ನೀಡುವುದಕ್ಕೆ ನಿರ್ಬಂಧ ಹೇರಲಾಗಿತ್ತು. ಇದರಿಂದಾಗಿ ರಾಜ್ಯ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಾಗಿತ್ತು. ರಾಜ್ಯದಲ್ಲಿ ಹೋಟೆಲ್ಗಳು, ಪ್ರವಾಸಿ ಟ್ಯಾಕ್ಸಿಗಳು, ಶಾಕ್ಗಳು, ವಾಟರ್ಬೋಟ್ಗಳು, ಪ್ರವಾಸೋದ್ಯಮ ಅವಲಂಬಿತ ಉದ್ಯೋಗಗಳು ಕಳೆದ ಸುಮಾರು ಒಂದೂವರೆ ವರ್ಷಗಳ ಕಾಲ ಸಂಪೂರ್ಣ ಬಂದ್ ಆಗಿದ್ದವು. ಆದರೆ ಇದೀಗ ಗೋವಾಕ್ಕೆ ದೇಶ-ವಿದೇಶಿಯ ಪ್ರವಾಸಿಗರು ಭಾರಿ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಅವಲಂಬಿತ ಉದ್ಯೋಗಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರವಾಸಿ ಟ್ಯಾಕ್ಸಿಗಳನ್ನು ಬಾಡಿಗೆಗೆ ನೀಡುವ ಮಿನಿನ್ ಡಯಾಸ್ ಪ್ರತಿಕ್ರಿಯೆ ನೀಡಿ- ರೈಲು ಮತ್ತು ವಿಮಾನದ ಮೂಲಕ ಬರುವ ಹೆಚ್ಚಿನ ಪ್ರವಾಸಿಗರು ಗೋವಾದಲ್ಲಿ ಓಡಾಟ ನಡೆಸಲು ಪ್ರವಾಸಿ ಟ್ಯಾಕ್ಸಿಗಳನ್ನು ಬಳಸುತ್ತಿದ್ದಾರೆ. ಇದರಿಂದಾಗಿ ಟ್ಯಾಕ್ಸಿ ಉದ್ಯೋಗವು ಪುನರಾರಂಭಗೊಂಡಿದೆ ಎಂದರು.
ನಿವಾಸಿ ಹೋಟೆಲ್ ಮಾಲೀಕರ ಪ್ರಕಾರ- ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಗೋವಾಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ರೂಂಗಳ ಅಡ್ವಾನ್ಸ್ ಬುಕಿಂಗ್ ಆರಂಭಗೊಂಡಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷ ಸಂಭ್ರಮಾಚರಣೆಗೆ ಗೋವಾಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಾಕ್ ಮಾಲೀಕ ರಾಯನ್ ಪ್ರತಿಕ್ರಿಯೆ ನೀಡಿ, ಪ್ರವಾಸೋದ್ಯಮ ಸಂಬಂಧಿತ ಹೆಚ್ಚಿನ ವ್ಯಾಪಾರ ವಹಿವಾಟು ವಿದೇಶಿ ಪ್ರವಾಸಿಗರ ಮೇಲೆ ಅವಲಂಭಿತವಾಗಿದೆ. ಸದ್ಯ ಪ್ರವಾಸೋದ್ಯಮ ಅವಲಂಬಿತ ವ್ಯಾಪಾರ ವಹಿವಾಟು ಚೇತರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಸೇರಿದಂತೆ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ತೃಪ್ತಿದಾಯಕವಾಗಿ ವ್ಯಾಪಾರ ವಹಿವಾಟು ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.