ರಾರಾಜಿಸಲಿದೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ


Team Udayavani, Dec 18, 2021, 5:49 PM IST

ರಾರಾಜಿಸಲಿದೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ

ಕೊಡಿಯಾಲಬೈಲ್‌: ಭಾರತದ ಮೊದಲ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಹೆಸರಿನಲ್ಲಿ ಕೊಡಿಯಾಲಬೈಲ್‌ನಲ್ಲಿ (ನವ ಭಾರತ ವೃತ್ತ) ನೂತನ ವೃತ್ತ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ.

ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ದಾನಿಗಳ ನೆರವಿನಲ್ಲಿ ಜೋಡುಮಠ ರಸ್ತೆಯಲ್ಲಿರುವ ಶಾಸಕ ಡಿ. ವೇದವ್ಯಾಸ್‌ ಕಾಮತ್‌ ಅಧ್ಯಕ್ಷರಾಗಿರುವ ಸೇವಾಂಜಲಿ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ವೃತ್ತ ನಿರ್ಮಾಣ, ನಿರ್ವಹಣೆ ನಡೆಸಲಾಗುತ್ತಿದೆ.

ಮಂಜೇಶ್ವರ ಗೋವಿಂದ ಪೈ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಾಡಿರುವ ಸಂಶೋಧನೆ, ಬರೆದಿರುವ ಗ್ರಂಥಗಳು, ಕವಿತೆ, ಕಥಾ ಸಂಕಲನಗಳು ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿತ್ತು. ತುಳುನಾಡಿನ ಚರಿತ್ರೆಯನ್ನು ಆಳವಾಗಿ ಅಭ್ಯಸಿಸಿದ ಮಂಜೇಶ್ವರ ಗೋವಿಂದ ಪೈ ಅವರು ಅದನ್ನು ಸಮರ್ಥವಾಗಿ ಮಂಡಿಸಬಲ್ಲರಾಗಿದ್ದರು. ಅಂತಹ ಶ್ರೇಷ್ಠ ಸಾಹಿತಿ, ಸಂಶೋಧಕ ಮತ್ತು ಮಾನವತಾವಾದಿಯ ಕೊಡುಗೆಯನ್ನು ಮುಂದಿನ ಪೀಳಿಗೆಗೆ ಸ್ಮರಿಸುವಂತೆ ಮಾಡುವ ಉದ್ದೇಶದಿಂದ ಸೇವಾಂಜಲಿ ಚಾರಿಟೆಬಲ್‌ ಟ್ರಸ್ಟ್‌ ದಾನಿಗಳ ಸಹಕಾರದಿಂದ ಈ ಕಾರ್ಯ ಕೈಗೊಂಡಿದೆ ಎಂದು ಟ್ರಸ್ಟ್‌ನ ಪ್ರಮುಖರಾದ ಹನುಮಂತ ಕಾಮತ್‌ ತಿಳಿಸಿದ್ದಾರೆ.

ಮಂಜೇಶ್ವರ ಗೋವಿಂದ ಪೈಗಳ ಕಂಚಿನ ಪ್ರತಿಮೆ ಹೊಂದಲಿರುವ ಈ ವೃತ್ತವನ್ನು ಶಿಲಾಮಯವಾಗಿ ಆಕರ್ಷಣೀಯವನ್ನಾಗಿ ಮಾಡುವ ಜವಾಬ್ದಾರಿ ಯನ್ನು ಟ್ರಸ್ಟ್‌ ವಹಿಸಿಕೊಂಡಿದೆ. ಕಾರ್ಕಳದ ಶಿಲ್ಪಿ ಗಳ
ತಂಡ ವೊಂದು ಹಗಲಿರುಳು ಈ ವೃತ್ತದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ.

ಪುರಾತನ ಬಾವಿಗೆ ಕಾಯಕಲ್ಪ
“ಅವೈಜ್ಞಾನಿಕವಾಗಿದೆ’ ಎಂಬ ಕಾರಣಕ್ಕೆ ಈ ಹಿಂದಿನ ನವಭಾರತ ವೃತ್ತವನ್ನು ಕೆಡಹುವ ಕಾಮಗಾರಿ ಇತ್ತೀಚೆಗೆ
ನಡೆಸುತ್ತಿದ್ದಾಗ ಕಾರ್ಮಿಕರಿಗೆ ಕಾಂಕ್ರೀಟ್‌ ಸ್ಲ್ಯಾಬ್ ವೊಂದು ಕಾಣಿಸಿತ್ತು. ಅದನ್ನು ಎತ್ತಿ ನೋಡಿದಾಗ ಆಳವಾದ ಬಾವಿ ಇರುವುದು ಗೊತ್ತಾಗಿದೆ. ಈ ಬಾವಿಗೆ ಸುಮಾರು 100 ವರ್ಷಗಳ ಇತಿಹಾಸವಿದೆ. ಈ ಹಿಂದೆ ಸುತ್ತಮುತ್ತಲಿನ ಅನೇಕ ಮನೆಗಳ ಕುಡಿಯುವ ನೀರಿಗೆ ಇದೇ ಬಾವಿ ಆಸರೆಯಾಗಿತ್ತು. ಬಾವಿ ಸುಮಾರು 40 ಅಡಿಗೂ ಹೆಚ್ಚಿನ ಆಳ ಇದ್ದು, ಈಗಲೂ ಬಾವಿ ತುಂಬಾ ನೀರು ಇದೆ. ವಿಶೇಷವೆಂದರೆ; ಬಾವಿಯನ್ನು ಕೆಂಪು ಕಲ್ಲಿನ ಕೆತ್ತನೆಯಿಂದ ನಿರ್ಮಾಣ ಮಾಡಲಾಗಿದೆ. ಬ್ರಿಟಿಷ್‌ ಸರಕಾರ ಇರುವ ವೇಳೆ ಈಗಿದ್ದ ನವಭಾರತ ವೃತ್ತ ಬಳಿ ರಸ್ತೆಯಲ್ಲಿ ಜಟಕಾ ಬಂಡಿ ಸವಾರಿ ಸಾಗುತ್ತಿತ್ತು. ಆ ವೇಳೆ ಕುದುರೆಗಳಿಗೆ ಬಾಯಾರಿಕೆಯಾದರೆ ಇದೇ ಬಾವಿಯಿಂದ ನೀರು ಕುಡಿಸುತ್ತಿದ್ದರು ಎಂಬ ಪ್ರತೀತಿಯಿತ್ತು.

ವೃತ್ತ ನಿರ್ಮಾಣ ಪ್ರಗತಿಯಲ್ಲಿ
ಶಾಸಕ ವೇದವ್ಯಾಸ್‌ ಕಾಮತ್‌ ಅವರ ಪರಿಕಲ್ಪನೆಯಂತೆ ಸೇವಾಂಜಲಿ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ ನಿರ್ಮಾಣ ಕಾರ್ಯ ನಡೆಸಲಾಗು ತ್ತಿದೆ. ಜತೆಗೆ ಇಲ್ಲಿ ಪತ್ತೆಯಾಗಿರುವ ಶತಮಾನದ ಇತಿಹಾಸ ಹೊಂದಿರುವ ಬಾವಿಯನ್ನು ಉಳಿಸಿಕೊಂಡು ವೃತ್ತ ನಿರ್ಮಾಣಕ್ಕೆ ಕ್ರಮ ಕೊಳ್ಳಲಾಗುತ್ತಿದೆ.
ಪ್ರೇಮಾನಂದ ಶೆಟ್ಟಿ,
ಮೇಯರ್‌, ಮಹಾನಗರ ಪಾಲಿಕೆ

 

ಟಾಪ್ ನ್ಯೂಸ್

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

WhatsApp Image 2024-09-25 at 20.56.17

Mangaluru: ಆ್ಯಂಬುಲೆನ್ಸ್‌ ಪಲ್ಟಿ; ರೋಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.