![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 18, 2021, 6:08 PM IST
ತಾಳಿಕೋಟೆ: ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ತ ಪಟ್ಟಣದ ಪೊಲೀಸ್ ಠಾಣೆ ಪಿಎಸೈ ವಿನೋದ ದೊಡಮನಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಒಳಗೊಂಡಂತೆ ಅಪಘಾತ ಸಮಯದಲ್ಲಿ ಪ್ರಾಣ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು.
ಪಟ್ಟಣದ ವಿಜಯಪುರ ವೃತ್ತದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ಬೈಕ್ ಸವಾರರನ್ನು ತಡೆದ ಪೊಲೀಸರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಪಘಾತ ಸಂದರ್ಭದಲ್ಲಿ ನಿಮ್ಮ ಜೀವವನ್ನು ರಕ್ಷಿಸುವಂತಹ ಕವಚವಾಗಿದೆ. ನಾಲ್ಕು ಚಕ್ರದ ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಯಾವುದೇ ವಾಹನ ಚಲಾಯಿಸುತ್ತಿರಲಿ ಆ ಸಮಯದಲ್ಲಿ ಮದ್ಯಸೇವನೆ ಮಾಡಿರಬಾರದು. ಮದ್ಯಸೇವನೆಯಿಂದ ಅನೇಕ ಅಪಘಾತಗಳು ನಡೆದು ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ರೀತಿ ಸಂಚಾರ ಅಪರಾಧವಾಗಿದ್ದು ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ಕೂಡಾ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರಲ್ಲದೇ ರಸ್ತೆ ನಿಯಮ ಪಾಲನೆ ಕುರಿತು ಮತ್ತು ಉಲ್ಲಂಘನೆಯಾದಲ್ಲಿ ಪೊಲೀಸ್ ಇಲಾಖೆಯಿಂದ ದಂಡ ವಿ ಧಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.
ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿಗಳೆಲ್ಲರೂ ಹೆಲ್ಮೆಟ್ ಧರಿಸಿ ಜೀವ ರಕ್ಷಿಸಿಕೊಳ್ಳಿ ಎಂಬ ಘೋಷವಾಕ್ಯದೊಂದಿಗೆ ಭಿತ್ತಿ ಚಿತ್ರಗಳ ಮೂಲಕ ಸಂಚರಿಸಿದರು. ಜಾಗೃತಿ ಕಾರ್ಯಕ್ರಮದಲ್ಲಿ ಎಎಸೈ ಅಶೋಕ ನಾಯ್ಕೊಡಿ, ಎಸ್.ಎಂ. ಪಡಶೆಟ್ಟಿ, ಗಿರೀಶ ಚಲವಾದಿ, ಯಲ್ಲಪ್ಪ ಹದಗಲ್ಲ, ಸಂಜೀವ ದೊಡಮನಿ, ವೀರಣ್ಣ ಅಜ್ಜನವರ, ಹುಸೇನ್ ಕುಂಟೋಜಿ, ರಮೇಶ ರೇವೂರ, ಎಂ.ಕೆ. ಡೋಣೂರ ಸೇರಿದಂತೆ ಇತರರು ಭಾಗವಹಿಸಿದ್ದರು.
ಹೆಲ್ಮೆಟ್ ಧರಿಸದೇ, ಲೈಸನ್ಸ್ ಇಲ್ಲದೆ ಅಥವಾ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದು ಅಪರಾಧ. ಹೆಲ್ಮೆಟ್ ಧರಿಸುವುದರಿಂದ, ದೊಡ್ಡ ವಾಹನಗಳಲ್ಲಿ ಬೆಲ್ಟ್ ಧರಿಸದೇ ಸಂಚರಿಸುವುದರಿಂದ ಜೀವಕ್ಕೆ ಕುತ್ತು ಬರುವದು ಖಚಿತ. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ರಸ್ತೆ ನಿಯಮ ಪಾಲಿಸಿಕೊಂಡು ಸಂಚರಿಸಬೇಕು. -ವಿನೋದ ದೊಡಮನಿ ಪಿಎಸೈ, ತಾಳಿಕೋಟೆ ಠಾಣೆ
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.