ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 22 ಸ್ಥಾನ
Team Udayavani, Dec 18, 2021, 7:35 PM IST
ಚಿಕ್ಕಮಗಳೂರು: ಬಿಜೆಪಿ ದುರಾಡಳಿತದಿಂದ ನಗರಸಭೆ ಆಡಳಿತಕಲುಷಿತಗೊಂಡಿದೆ. ಕಾಂಗ್ರೆಸ್ ನಗರಸಭೆಯನ್ನು ಸ್ವತ್ಛಗೊಳಿಸಲುಸಿದ್ಧವಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ 20ರಿಂದ 22ಸ್ಥಾನಗಳಲ್ಲಿ ಗೆಲುವು ಸಾಧಿ ಸಲಿದೆಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಮೂರುವರ್ಷಗಳಿಂದ ನಗರಸಭೆ ಚುನಾವಣೆಯಾವಾಗ ನಡೆಯುತ್ತದೆ ಎಂದು ಜನತೆಕಾತುರದಿಂದ ಕಾಯುತ್ತಿದ್ದರು. ಅದರಂತೆಡಿ.27ರಂದು ನಡೆಯುವ ನಗರಸಭೆಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಸರ್ವ ಸನ್ನದ್ಧವಾಗಿದೆಎಂದರು. 2011ರಿಂದ ಇಲ್ಲಿಯವರೆಗೆ ಯುಜಿಡಿ ಕಾಮಗಾರಿಗೆ140 ಕೋಟಿ ರೂ. ಬಿಡುಗಡೆಯಾಗಿದೆ. 10 ವರ್ಷ ಕಳೆದರೂಯುಜಿಡಿ ಕಾಮಗಾರಿ ಮುಕ್ತಾಯವಾಗಿಲ್ಲ,
102 ಕೋಟಿ ರೂ.ವೆಚ್ಚದ ಅಮೃತ್ ಕುಡಿಯುವ ನೀರು ಯೋಜನೆ 2019ಕ್ಕೆಮುಕ್ತಾಯವಾಗಬೇಕಿತ್ತು. ಇನ್ನೂ ಮುಕ್ತಾಯಗೊಂಡಿಲ್ಲ. ರಾಜ್ಯಸರ್ಕಾರ, ನಗರಸಭೆ ಮತ್ತು ಶಾಸಕ ಸಿ.ಟಿ. ರವಿ ಇದರ ಹೊಣೆಹೊರಬೇಕು ಎಂದು ಹೇಳಿದರು. ಬಸವನಹಳ್ಳಿಕೆರೆ ಮತ್ತುಕೋಟೆಕೆರೆ 6 ವರ್ಷಗಳಿಂದ ಅಭಿವೃದ್ಧಿಗೊಂಡಿಲ್ಲ, ವಿರೂಪಗೊಂಡಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಕೆಡವಿ ಹಾಕಿದ್ದು,ಪ್ರತಿಮೆಯ ಮರುಸ್ಥಾಪನೆ, ಕೆಡವಿ ದ್ದು ಯಾರು ಎಂದು ತನಿಖೆನಡೆಸಿಲ್ಲ.
ಎಐಟಿ ವೃತ್ತದಿಂದ ಹಿರೇಮಗಳೂರು ವೃತ್ತದವರೆಗಿನಬೈಪಾಸ್ ರಸ್ತೆ ಕಾಮಗಾರಿ ಆರಂಭಗೊಂಡು 6 ತಿಂಗಳು ಕಳೆದರೂಪೂರ್ಣಗೊಂಡಿಲ್ಲ, ಕೆ.ಎಂ. ರಸ್ತೆಗೆ ಅವೈಜ್ಞಾನಿಕ ರಸ್ತೆ ವಿಭಜಕಅಳವಡಿಸಿದ್ದು, ನಿತ್ಯ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದುಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಬಿಜೆಪಿದುರಾಡಳಿತದಿಂದ ಬೇಸತ್ತಿರುವ ನಗರದ ಜನತೆ ಬದಲಾವಣೆಬಯಸಿದ್ದಾರೆ. ಈ ಬಾರಿಯ ನಗರಸಭೆ ಚುನಾವಣೆಯಲ್ಲಿಕಾಂಗ್ರೆಸ್ 20ರಿಂದ 22 ಸ್ಥಾನಗಳಲ್ಲಿ ಗೆಲುವು ಸಾ ಧಿಸಲಿದೆ. ಜನರುಸಹಕರಿಸುವಂತೆ ಮನವಿ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಎಚ್.ಪಿ.ಮಂಜೇಗೌಡ ಮಾತನಾಡಿ, ನಗರಸಭೆ 35 ವಾಡ್ìಗಳಲ್ಲಿ 33 ವಾರ್ಡ್ಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗಿದೆ.
2 ವಾರ್ಡ್ಗಳಲ್ಲಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲಸೂಚಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆಯನ್ನು ಪಾರದರ್ಶಕವಾಗಿಮಾಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ತನೋಜ್ಕುಮಾರ್ನಾಯ್ಡು, ಎಂ.ಡಿ. ರಮೇಶ್, ವಿನಾಯಕ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.