ರಾಯಣ್ಣ ಮೂರ್ತಿಗೆ ಅವಮಾನ: ಕುಳಗೇರಿ ಕ್ರಾಸ್ ನಲ್ಲಿ ಮುಂದುವರೆದ ಪ್ರತಿಭಟನೆ


Team Udayavani, Dec 19, 2021, 4:53 PM IST

ರಾಯಣ್ಣ ಮೂರ್ತಿಗೆ ಅವಮಾನ: ಕುಳಗೇರಿ ಕ್ರಾಸ್ ನಲ್ಲಿ ಮುಂದುವರೆದ ಪ್ರತಿಭಟನೆ

ಬಾಗಲಕೋಟೆ (ಕುಳಗೇರಿ ಕ್ರಾಸ್) : ಕರ್ನಾಟಕ ನವ ನಿರ್ಮಾಣ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ಪಡೆಯ ಕಾರ್ಯಕರ್ತರು ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿಯಲ್ಲಿ ಎಂಇಎಸ್ ನಡೆಸಿದ ಪುಂಡಾಟಿಕೆ ವಿರುದ್ಧ ಗ್ರಾಮದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗಿಳಿದ ವಿವಿಧ ಸಂಘಟನೆ ಕಾರ್ಯಕರ್ತರು ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.

ಬೆಳಗಾವಿಯಲ್ಲಿ ಮರಾಠಿಗರು ರಾತ್ರಿ ಹೊತ್ತು ನಕ್ಷಲರಂತೆ ರಾಯಣ್ಣನ ಮೂರ್ತಿಗೆ ಅಪಮಾನ ಮಾಡಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ.   ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಿ  ಶೌರ್ಯ ಪ್ರದರ್ಶನ ಮಾಡುತ್ತಿರುವ  ಎಂಇಎಸ್ ನವರ ಗುಂಡಾಗಿರಿಯನ್ನ ಸರಕಾರ ಹತ್ತಿಕ್ಕಬೇಕು. ಇಲ್ಲದಿದ್ದರೆ ನಮ್ಮ ಪ್ರಾಣ ಹೋದರು ಚಿಂತೆಯಿಲ್ಲ ಪ್ರತಿ ಗ್ರಾಮದಿಂದ ಪ್ರತಿಭಟನೆ ಮಾಡುವ ಮೂಲಕ ಬೆಳಗಾವಿ ಪ್ರವೇಶ ಮಾಡಿ ಬ್ರಿಟಿಷರಂತೆ ಮರಾಠಿಗರನ್ನು ಮಹಾರಾಷ್ಟ್ರಕ್ಕೆ ಓಡಿಸಬೇಕಾಗುತ್ತದೆ ಎಂದು ಗ್ರಾಪಂ ಸದಸ್ಯ ಹನುಮಂತ ನರಗುಂದ ಮರಾಠರ ವಿರುದ್ಧ ಹರಿಹಾಯ್ದರು.

ಸದ್ಯ ಬರಿ ಶಾಂತಿ ಪಾಲನೆಯಲ್ಲಿ ಮುನ್ನಡೆದ ನಮ್ಮ ಸರಕಾರ ಸೂಕ್ತ ನಿರ್ಧಾರ ತೆಗೆದುಕೊಂಡು ಪುಂಡಾಟಿಕೆ ನಡೆಸಿದವರನ್ನ ಕರ್ನಾಟಕ ದಿಂದ ಹೊರಹಾಕಿ  ಎಂದು ಆಗ್ರಹಿಸಿದರು.

ನವಿಲುತಿರ್ಥ ಜಲಾಶಯ ಕಾಡಾ ನಿರ್ದೇಶಕ ನಾಗಪ್ಪ ಅಡಪಟ್ಟಿ ಮಾತನಾಡಿ ಬೆಳಗಾವಿ ನಮ್ದೈತಿ ನಿಮ್ಮಪ್ಪಗೂ ಬಿಟ್ಟುಕೊಡಲ್ಲ, ನಿವೆನಾದ್ರು ಬಾಲ ಬಿಚ್ಚಿದ್ದ ಕರೆಆದ್ದ ಕರೆಆದ್ರ, ನೀವು ನಮ್ಮ ದ್ವಜ ಸುಟ್ಟ ಅಪಮಾನ ಮಾಡಿರಿ ನಾವು ನಿಮ್ಮನ್ನ ಸುಡ್ತೇವಿ ಹುಷಾರ್ ಎಂದು ಎಚ್ಚರಿ ನೀಡಿದರು.

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ರಾಯಣ್ಣ-ಶಿವಾಜಿ ಒಂದೆ ಎಂದುಕೊಂಡು ಪೂಜಿಸುತ್ತಿದ್ದ  ಕನ್ನಡಿಗರ ಮನಸ್ಸನ್ನ ಚಿದ್ರ ಮಾಡಿ ನಮ್ಮ ದೇಶಭಕ್ತರನ್ನ  ಬೇರೆ ಬೇರೆ ಮಾಡುತ್ತಿದ್ದಿರಿ ಈ ವಿಷಯವನ್ನು ಮಹಾರಾಷ್ಟ್ರ ಸರಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು, ಉದ್ದಟತನ ನಿಲ್ಲಿಸಿ ಇಂಥವರಿಗೆ ಕಾನೂನು ಕ್ರಮ ಜರುಗಿಸಿ ಬುದ್ದಿ ಕಲಿಸಬೇಕು, ಇಲ್ಲದಿದ್ದಲ್ಲಿ  ಬಾರಿ ತೊಂದರೆ ಅನುಭವಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ನವ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಬಸಪ್ಪ ಧರೆಗೌಡ್ರ, ತಾಲೂಕಾಧ್ಯಕ್ಷ ಬೀರಪ್ಪ ಕರಡಿಗುಡ್ಡ,  ಕರ್ನಾಟಕ ರಕ್ಷಣಾ ಪಡೆ ತಾಲೂಕು ಅಧ್ಯಕ್ಷ ಮೋದಿನ ನರಗುಂದ, ಉಪಾಧ್ಯಕ್ಷ ಬಾಲಪ್ಪ ಎತ್ತಿನಮನಿ ಮಾತನಾಡಿ ನಮ್ಮ ರಾಜ್ಯದಲ್ಲಿದ್ದು ನಮ್ಮ ತಾಯಿಗೆ, ದೇಶ ಭಕ್ತರಿಗೆ, ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದರೆ ನೋಡಿಕೊಂಡು ಸುಮ್ಮನಿರುವ ಸರ್ಕಾರಕ್ಕೆ ಎನೆಂದು ಹೇಳಬೇಕು. ಇಷ್ಟು ತಾಳ್ಮೆ, ಸಹನೆ, ಶಾಂತಿ ತೆಗೆದುಕೊಳ್ಳುತ್ತಿರುವುದು ಏತಕ್ಕಾಗಿ ಎಂದು ಸರ್ಕಾರವನ್ನು ಪ್ರಶ್ನಿಸಿದ ಸಂಘಟನೆಯವರು  ಬೆಳಗಾವಿ ವಿಷಯದಲ್ಲಿ ಸರ್ಕಾರ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ರಾಜ್ಯದ ಎಲ್ಲ ಸಂಘಟನೆಗಳು ಒಂದಾಗಿ ಎಲ್ಲರಿಗೂ ಪಾಠ ಕಲಿಸಬೇಕಾಗುತ್ತೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಸೇರಿದಂತೆ ಸುತ್ತ ಗ್ರಾಮಸ್ಥರು, ವಿವಿಧ ಸಂಘಟನೆ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.