ಕ್ರೀಡೆಯಿಂದ ಆರೋಗ್ಯ ಬಲವರ್ಧನೆ
Team Udayavani, Dec 20, 2021, 12:45 PM IST
ಭಾರತೀನಗರ: ನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯರಾಗಬೇಕು. ನಿರಂತರ ಕ್ರೀಡಾಭ್ಯಾಸದಿಂದ ಮಾನವನ ಬೌದ್ಧಿಕ ವಿಕಾಸದ ಜೊತೆ ಸಾಮಾಜಿಕ, ಆಧ್ಯಾತ್ಮಿಕ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಇಲ್ಲಿನ ಭಾರತೀಕಾಲೇಜಿನ ಭಾರತೀ ಕ್ರೀಡಾಂಗಣದಲ್ಲಿ ಡಾ.ಜಿಮಾದೇಗೌಡ ಪ್ರೀಮಿಯರ್ ಲೀಗ್ 2021ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಕ್ರಿಕೆಟ್ನಲ್ಲಿ ಸೋಲು-ಗೆಲುವು ಇರುತ್ತದೆ. ಅದನ್ನೂ ಯಾರೂ ವೈಯುಕ್ತಿಕವಾಗಿತೆಗೆದುಕೊಳ್ಳಬಾರದು. ಮಂಡ್ಯ ಜಿಲ್ಲೆಯಲ್ಲಿ ಮೊದಲ ಭಾರಿಗೆ ಯೂಟ್ಯೂಬ್ನಲ್ಲಿ ಪಂದ್ಯಗಳ ನೇರ ಪ್ರಸಾರ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕ್ರೀಡಾ ಚಟುವಟಿಕೆಯಿಂದ ಮಾನವನ ಆರೋಗ್ಯ ಬಲವರ್ಧನೆಗೊಳ್ಳಲಿದೆ. ಬದುಕುವ ಆಯಸ್ಸಿನ ಪ್ರಮಾಣ ಹೆಚ್ಚಾಗಲಿದೆ. ಶಿಕ್ಷಣ ಮತ್ತು ಕ್ರೀಡೆ ಎನ್ನುವುದು ಎರಡುಕಣ್ಣುಗಳಿದ್ದಂತೆ. ಇವುಗಳನ್ನು ಸಮಪಾಲಿನಲ್ಲಿ ತೆಗೆದುಕೊಂಡುಹೋದಲ್ಲಿ ಉತ್ತಮ ವ್ಯಕ್ತಿತ್ವ, ಜೀವನ, ಹೊಸ ಉಲ್ಲಾಸದ ಬದುಕನ್ನು ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಒತ್ತಡದ ಜೀವನಕ್ಕೆ ಕ್ರೀಡೆ ಅವಶ್ಯ: ವಿಧಾನ ಪರಿಷತ್ ಮಾಜಿ ಸದಸ್ಯ ಮಧು.ಜಿ ಮಾದೇಗೌಡ ಮಾತನಾಡಿ, ಒತ್ತಡದ ಜೀವನಕ್ಕೆಕ್ರೀಡೆ ಅತ್ಯವಶ್ಯಕ. ಪ್ರಸ್ತುತ ಸ್ವಲ್ಪ ವಿರಾಮವಾಗಿ ಇದ್ದಾರೆ ಎಂದರೆ, ಅದು ಕ್ರೀಡೆಯಿಂದ. ವಿದ್ಯಾರ್ಥಿಗಳು ಓದಿನ ಜತೆಗೆ ಯಾವ ಕ್ರೀಡೆಯಲ್ಲಿ ಆಸಕ್ತಿ ಇರುತ್ತದೆ ಎಂಬುದನ್ನು ತಿಳಿದುಕೊಂಡು ಕ್ರೀಡೆಗೆ ಹೆಚ್ಚು ಆದ್ಯತೆ ನೀಡಿದರೆ, ನಮ್ಮಲ್ಲಿ ಸಾಧಕರು ಬೆಳೆಯುತ್ತಾರೆ ಎಂದರು.
ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ, ಕೆಪಿಸಿಸಿ ಸದಸ್ಯ ಎಸ್. ಗುರುಚರಣ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಬಿ.ಎಂ.ನಂಜೇಗೌಡ, ಸಿದ್ದೇಗೌಡ, ಬಿ.ಬಸವರಾಜು, ಎ.ಎಸ್. ರಾಜೀವ್, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿಶಿವಲಿಂಗೇಗೌಡ, ಗ್ರಾಪಂ ಅಧ್ಯಕ್ಷ ರವಿಚಂದ್ರ, ಉಪನ್ಯಾಸಕ ಕೆ.ಎಚ್ .ಪ್ರಸನ್ನಕುಮಾರ್, ಡಿ.ಪಿ.ಪ್ರಮೋದ್ ಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ
Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್ ಖೇರ್ ಫೋಟೊ!
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ
Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.