![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 20, 2021, 2:31 PM IST
ಕುಷ್ಟಗಿ: ಬೆಳಗಾವಿಯಲ್ಲಿ ದೇಶಭಕ್ತ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಧ್ವಂಸ ಖಂಡಿಸಿ ಹಾಲುಮತ ಸಮಾಜ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕುಷ್ಟಗಿಯ ಕನಕದಾಸ ವೃತ್ತದ ನಾಮಫಲಕಕ್ಕೆ ಮಾಲರ್ಪಣೆ ಮಾಡುವ ಮೂಲಕ ಪ್ರತಿಭಟನೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಂತರ ಮಾರುತಿ ವೃತ್ತ, ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ದೇಶಭಕ್ತ ಸಂಗೊಳ್ಳಿ ರಾಯಣ್ಣಪ್ರತಿಮೆ ಭಗ್ನಗೊಳಿಸಿ ಎಂ.ಇ.ಎಸ್. ಸಂಘಟನೆ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಯಿತು.
ಈ ಕಾರ್ಯದಲ್ಲಿ ಬರೀ ಬಂಧಿಸಿದರೆ ಸಾಲದು, ಗಡಿಪಾರು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ದೇಶಭಕ್ತರ ಪ್ರತಿಮೆಗಳನ್ನು ಭಗ್ನಗೊಳಿಸಿ ಕನ್ನಡಿಗರಲ್ಲಿ ಒಡಕು ಕುತಂತ್ರಿ ಬುದ್ದಿಯ ಎಂ.ಇ.ಎಸ್ ಹಾಗೂ ಶಿವಸೇನೆ ಆಟಾಟೋಪ ಮಟ್ಟಹಾಕಬೇಕು. ಸಂಗೊಳ್ಳಿ ರಾಯಣ್ಣ ಕೇವಲ ಹಾಲುಮತಕ್ಕೆ ಸೀಮಿತ ಅಲ್ಲ ಇಡೀ ಸರ್ವ ಜನಾಂಗದ ಆಸ್ತಿಯಾಗಿದ್ದಾರೆ. ಬೆಳಗಾವಿಯಲ್ಲಿ ಪದೇ ಪದೇ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಮಾಡುತ್ತಿರುವುದು ಹಾಲುಮತ ಸಮಾಜದ ಮನಸ್ಸುಗಳಿಗೆ ನೋವಾಗಿದೆ. ಈ ಪ್ರಕರಣದಲ್ಲಿ ಯಾರೇ ಆಗಿರಲಿ ಶಿಕ್ಷೆ ವಿಧಿಸಿ ಗಡಿಪಾರು ಮಾಡಬೇಕು ಎಂದು ಹಾಲುಮತ ಸಮಾಜದ ತಾಲೂಕಾ ಅದ್ಯಕ್ಷ ಮಲ್ಲಣ್ಣ ಪಲ್ಲೇದ್ ಒತ್ತಾಯಿಸಿದರು.
ಹಾಲುಮತ ಸಮಾಜದ ಗುರುಗಳಾದ ಶಿವಾನಂದಯ್ಯ ಗುರುವಿನ್, ಯುವ ಘಟಕದ ಅಧ್ಯಕ್ಷ ಕಲ್ಲೇಶ ತಾಳದ,ಎಚ್.ಬಿ.ಕುರಿ, ಮಂಜುನಾಥ ನಾಲಗಾರ, ಲಕ್ಷ್ಮಿ ಪಾಟೀಲ,ಸಂಗಪ್ಪ ಪಂಚಮ್, ಕರವೇ ಸಂಘಟನೆಯ ಅಜ್ಜಪ್ಪ ಕರಡಕಲ್, ಚಂದ್ರು ವಡಿಗೇರಿ ಮತ್ತೀತರರು ನೇತೃತ್ವವಹಿಸಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.