ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಶಾಸಕರ ಪ್ರತ್ಯೇಕ ಸಭೆ


Team Udayavani, Dec 20, 2021, 5:35 PM IST

1-KK

ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಶಾಸಕರು ಸೋಮವಾರ ಸಭೆ ನಡೆಸಿ ಮಹತ್ವದ ವಿಚಾರ ಚರ್ಚೆ ಮಾಡಿದ್ದಾರೆ.

ಅಜಯ್ ಸಿಂಗ್, ಪ್ರಿಯಾಂಕ್ ಖರ್ಗೆ,ಅಮರೇಗೌಡ ಬಯ್ಯಾಪುರ,ಪರಮೇಶ್ವರ್ ನಾಯ್ಕ್ ಸೇರಿದಂತೆ ಹನ್ನೆರಡು ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು.

ಹೈದರಾಬಾದ್ ಕರ್ನಾಟಕ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಅವಕಾಶ ಕೇಳಬೇಕು, ಚರ್ಚೆ ಮಾಡಲು ನಿಳುವಳಿ ಸೂಚನೆ ನೀಡುವ ಬಗ್ಗೆ ಸಭೆಯಲ್ಲಿ ಮಾತುಕತೆ ನಡೆಸುವುದು, ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ನಿಳುವಳಿ ಸೂಚನೆ ನೀಡಲು ‌ಚರ್ಚೆ, ನಿಳುವಳಿ ಸೂಚನೆ ನೀಡಿದರೆ ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ಸಿಗಬಹುದು ಎಂದು ಮಾತುಕತೆ ನಡೆಸಲಾಗಿದೆ ಎಂದು ಸಭೆಯ ಬಳಿಕ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ವಿಷಯ ಸರ್ಕಾರ‌ ಮಲತಾಯಿ ಧೋರಣೆ ಮಾಡುತ್ತಿದೆ, ಸಿಎಂ ಕಳೆದ ಅಧಿವೇಶನದಲ್ಲಿ 10 ದಿನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ ಮಾಡುತ್ತೇನೆ ಎಂದು ಹೇಳಿದ್ದರು. ಮೂರು ತಿಂಗಳು ಕಳೆದರೂ ಮಂಡಳಿ ರಚನೆ ಆಗಿಲ್ಲ.ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕಾಗಿ 1500 ಕೋಟಿ ಘೋಷಣೆಯಾಗಿದೆ.ಇಲ್ಲಿಯವರೆಗೆ 330 ಕೋಟಿ‌ ಮಾತ್ರ ಖರ್ಚಾಗಿದೆ. ಒಂದೇ ಒಂದು ನೀರಾವರಿ ಯೋಜನೆ, ರಸ್ತೆ ಆಗಿಲ್ಲ.ಎರಡನೇ ದರ್ಜೆ ರೀತಿಯಲ್ಲಿ ನೋಡಲಾಗುತ್ತಿದೆ.ಆದ್ದರಿಂದ ಹೈದರಾಬಾದ್ ಕರ್ನಾಟಕ ಶಾಸಕರು ಸೇರಿ ಚರ್ಚೆ ಮಾಡಿದ್ದೇವೆ. ನಾಳೆ ನಿಳುವಳಿ ಸೂಚನೆ ನೀಡುವ ಬಗ್ಗೆ ಮಾತಾಡಿದ್ದೇವೆ. ಈ ಭಾಗದ ಬಗ್ಗೆ ಚರ್ಚೆ ಆಗಬೇಕು ಎಂದು ಬೆಳಗಾವಿಯಲ್ಲಿ ಅಧಿವೇಶನ ಮಾಡಲಾಗುತ್ತದೆ.
ಆದರೆ ಅಧಿವೇಶನದಲ್ಲಿ ಬರೀ ಶೂನ್ಯವಾಗಿದೆ. ವಿಪಕ್ಷದವರನ್ನು ಕೆಣಕಿ, ಸದನ ನಡೆಯದ ರೀತಿಯಲ್ಲಿ ಮಾಡುವುದು ಅವರ ಹುನ್ನಾರವಾಗಿದೆ.
ತರಾತುರಿಯಲ್ಲಿ ಬಿಲ್ ಪಾಸ್ ಮಾಡಲು ಮುಂದಾಗಿದ್ದಾರೆ. ಕಾಟಚಾರಕ್ಕೆ ಅಧಿವೇಶನ ನಡೆಸಲಾಗುತ್ತಿದೆ ಎಂದರು.

*ಬೆಳಗಾವಿ ಘಟನೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಸಿಟಿ ರವಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಟಿ ರವಿ ಒಂದು ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರ ಹೇಳಿಕೆಗೆ ಯಾವುದೇ ಕಿಮ್ಮತಿಲ್ಲ. ಸುಳ್ಳುನ್ನು ಸತ್ಯ ಮಾಡಲು ಹೊರಟಿದ್ದಾರೆ. ಅವರ ಬಣ್ಣ ಬಯಲಾಗಿದೆ. ದುರ್ಬಲ ಸರ್ಕಾರವಿದೆ, ಅದಕ್ಕಾಗಿ ಪ್ರತಿಮೆ ಧ್ವಂಸ, ಕನ್ನಡ ಬಾವುಟ ಸುಡುವ ಕೆಲಸವಾಗುತ್ತಿದೆ ಎಂದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.