ಬರಿ ಗೈನಲ್ಲಿ ಮ್ಯಾನ್ ಹೋಲ್ ಶುಚಿಗೊಳಿಸುತ್ತಿದ್ದ ಪೌರ ಕಾರ್ಮಿಕ ಸಾವು


Team Udayavani, Dec 20, 2021, 7:38 PM IST

ಬರಿ ಗೈನಲ್ಲಿ ಮ್ಯಾನ್ ಹೋಲ್ ಶುಚಿಗೊಳಿಸುತ್ತಿದ್ದ ಪೌರ ಕಾರ್ಮಿಕ ಸಾವು

ಪಿರಿಯಾಪಟ್ಟಣ: ಮಲ ಮೂತ್ರ ಶುಚಿಗೊಳಿಸಲು ಬರಿ ಗೈನಲ್ಲಿ ಮ್ಯಾನ್ ಹೋಲ್ ಒಳಗೆ ಇಳಿದಿದ್ದ ಪೌರ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಪಟ್ಟಣದ ಪೌರ ಕಾರ್ಮಿಕರ ಕಾಲೋನಿಯಲ್ಲಿ ಸೋಮವಾರ ನಡೆದಿದೆ.

ಕಾರ್ಮಿಕ ಮಧು (27) ಮೃತ ಪೌರ ಕಾರ್ಮಿಕ.

ಪಟ್ಟಣದ ಕೃಷ್ಣಾಪುರ ರಸ್ತೆಯ ಬಳಿ ಇರುವ ಅಂಗನವಾಡಿ ಶಿಕ್ಷಕಿ ನಾಗರತ್ನ ಎಂಬುವವರು ಮೂವರು ಪೌರ ಕಾರ್ಮಿಕ ಯುವಕರನ್ನು ಪಟ್ಟಣದ ವಿಜಯೇಂದ್ರ ಎಂಬುವರ ಮನೆಯ ಮಲ ಮೂತ್ರ ಶುಚಿಗೊಳಿಸಲು ಕರೆತಂದಿದ್ದರು. ಕಳೆದ ಮೂರು ದಿನಗಳ ಹಿಂದೆ ವಿಜಯೇಂದ್ರ ಎಂಬುವವರ ಮನೆ ಮುಂದಿನ ಮ್ಯಾನ್ ಹೋಲ್ ಒಳಗೆ ಇಳಿದು ಶುಚಿ ಮಾಡಿದ್ದ ಮಧು ಬಳಿಕ ಮನೆಗೆ ತೆರಳಿದ್ದ. ಇದಾದ ಮರು ದಿನವೇ ಮಧು ತೀವ್ರ ಉಸಿರಾಟದ ತೊಂದರೆಗೆ ಈಡಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಧು ಎಂಬುವ ಪೌರ ಕಾರ್ಮಿಕ ಯುವಕ ಸಾವನ್ನಪ್ಪಿದಾನೆ. ಈ ಸಂಭಂದ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ನಡೆದಿದ್ದು ಹೇಗೆ : ಪುರಸಭೆ ಅಧಿಕಾರಿಗಳ ಗಮನಕ್ಕೆ ಬಾರದಂತೆ ಮಲ ತುಂಬಿದ ಗುಂಡಿಯನ್ನು ಬರಿಗೈಯಲ್ಲಿ ಶುದ್ದಿಗಳಿಸುತ್ತಿದ್ದ ಸ್ಥಳಕ್ಕೆ ಆರೋಗ್ಯ ನಿರೀಕ್ಷಕ ಆದರ್ಶ ಮತ್ತು ಸದಸ್ಯ ಎಚ್.ಕೆ.ಮಹೇಶ್ ಆಗಮಿಸಿ ಸ್ಥಗಿತಗೊಳಿಸಿದರು.

ಪುರಸಭೆ ವ್ಯಾಪ್ತಿಗೆ ಸೇರಿದ ವಿಜೇಂದ್ರ ಎಂಬುವವರ ಖಾಸಗಿ ಮನೆಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ಪೌರಕಾರ್ಮಿಕರ ಯುವಕರಿಗೆ ಇಲ್ಲಸಲ್ಲದ ಆಮಿಷವೊಡ್ಡಿ ಕತ್ತಲಲ್ಲಿ ಮಲದ ಗುಂಡಿಗೆ ಇಳಿಸಿ ಶುಕ್ರವಾರ ಸಂಜೆ ಕೆಲಸ ಮಾಡಿಸುತ್ತಿದ್ದರು. ತಕ್ಷಣ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸಪಾಯಿಕರ್ಮಚಾರಿ ಜಾಗೃತ ಸಮಿತಿ ಸದಸ್ಯೆ ಎಚ್.ಕೆ.ಮಹೇಶ್ ಮತ್ತು ಪುರಸಭೆ ಆರೋಗ್ಯ ನಿರೀಕ್ಷಕ ಆದರ್ಶ್ ರವರು ಪುರಸಭೆಯ ಅಧಿಕಾರಿಗಳ ಗಮನಕ್ಕೆ ಬಾರದಂತೆ ಈ ಕೆಲಸ ಮಾಡಿಸುತ್ತಿರುವುದು ಸರಿಯಲ್ಲ ಎಂದು ಮಾಲೀಕರಿಗೆ ತರಾಟೆಗೆ ತೆಗೆದುಕೊಂಡರು.

ಕೆಲಸ ನಿರ್ವಹಿಸುತ್ತಿರುವ ಯುವಕರಿಗೆ ಯಾವುದೇ ರಕ್ಷಣೆ ಇಲ್ಲದೆ ಬರಿಕೈಯಲ್ಲಿ ಕೆಲಸ ಮಾಡುತ್ತಿರುವ ರಾಜೇಶ್. ಮಧು. ವಿಶ್ವ ಎಂಬುವವರಿಂದ ವಿಜೇಂದ್ರ ಎಂಬುವವರಿಗೆ ಸೇರಿದ ಮನೆಯ ಜಾಗದಲ್ಲಿ ಅಂಗನವಾಡಿ ಶಿಕ್ಷಕಿ ಈ ಕೆಲಸವನ್ನು ಯಾರ ಗಮನಕ್ಕೂ ಬಾರದಂತೆ ಮಾಡುತ್ತಿರುವದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಪೈಪು ಇದೆ ಜಗದಲ್ಲಿ ಹಾದುಹೋಗಿರುವುದರಿಂದ ಈ ಗುಂಡಿಯನ್ನು ಶುದ್ದಿ ಗೊಳಿಸಬೇಕಾಗಿದೆ ಆದ್ದರಿಂದ ಇದನ್ನು ಯುವಕರಿಂದ ಸುದ್ದಿ ಗೊಳಿಸುತ್ತಿರುವ ದ್ದಾಗಿ ಒಪ್ಪಿಕೊಂಡರು.ಈ ರೀತಿಯ ಕೆಲಸವನ್ನು ಮಾಡಿಸುತ್ತಿರುವುದು ಅಮಾನವಿಯ ಕೃತ್ಯವಾಗಿದ್ದು ಇದರ ಬಗ್ಗೆ ಶನಿವಾರ ಕಾನೂನು ಕ್ರಮ ಜರುಗಿಸುವುದಾಗಿ ಆದರ್ಶ ಮತ್ತು ಹೆಚ್.ಕೆ.ಮಹೇಶ್ ತಿಳಿಸಿ ನಡೆಯುತ್ತಿರುವ ಕೆಲಸವನ್ನು ಸ್ಥಗಿತಗೊಳಿಸಿದರು.

 

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.