ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಸೆಮಿಫೈನಲ್‌: ಜಪಾನ್‌ ವಿರುದ್ಧ ಭಾರತವೇ ಫೇವರಿಟ್‌

ಪಾಕಿಸ್ಥಾನ-ಕೊರಿಯಾ ನಡುವೆ ಮತ್ತೊಂದು ಸೆಮಿಫೈನಲ್‌

Team Udayavani, Dec 21, 2021, 5:00 AM IST

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಸೆಮಿಫೈನಲ್‌: ಜಪಾನ್‌ ವಿರುದ್ಧ ಭಾರತವೇ ಫೇವರಿಟ್‌

ಢಾಕಾ: ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಕೂಟದ ಅಂತಿಮ ಲೀಗ್‌ ಪಂದ್ಯದಲ್ಲಿ ಜಪಾನ್‌ ವಿರುದ್ಧ ಜಬರ್ದಸ್ತ್ ಪ್ರದರ್ಶನ ನೀಡಿದ ಭಾರತವೀಗ ಮಂಗಳವಾರದ ಸೆಮಿಫೈನಲ್‌ನಲ್ಲಿ ಜಪಾನ್‌ ವಿರುದ್ಧವೇ ಸೆಣಸಾಟಕ್ಕಿಳಿಯಲಿದೆ.
ಮನ್‌ಪ್ರೀತ್‌ ಸಿಂಗ್‌ ಪಡೆ ಮತ್ತೆ ನೆಚ್ಚಿನ ತಂಡವಾಗಿ ಗೋಚರಿಸುತ್ತಿದೆ.

ಮೊದಲ ಸೆಮಿಫೈನಲ್‌ ಪಂದ್ಯ ಕೊರಿಯಾ-ಪಾಕಿಸ್ಥಾನ ನಡುವೆ ಸಾಗಲಿದ್ದು, ಅಪರಾಹ್ನ 3 ಗಂಟೆಗೆ ಆರಂಭ ವಾಗಲಿದೆ. ಭಾರತ-ಜಪಾನ್‌ ಮುಖಾಮುಖಿ ಸಂಜೆ 6 ಗಂಟೆಗೆ ಮೊದಲ್ಗೊಳ್ಳಲಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಮೆರೆದ ಭಾರತ ಈ ಕೂಟದಲ್ಲಿ ಇದಕ್ಕೆ ತಕ್ಕ ಪ್ರದರ್ಶನ ನೀಡುತ್ತ ಬಂದಿದೆ. ತಂಡದ ಕೆಲವೇ ಮಂದಿ ಹಿರಿಯ ಆಟಗಾರರೊಂದಿಗೆ ಮೀಸಲು ಹಾಕಿಪಟುಗಳು ತಮ್ಮ ಸಾಮರ್ಥ್ಯ ತೋರುವಲ್ಲಿ ಯಶಸ್ವಿಯಾಗಿರುವುದು ಉಲ್ಲೇಖನೀಯ.

ಏಕೈಕ ಅಜೇಯ ತಂಡ
ಭಾರತ ಈ ಕೂಟದ ಏಕೈಕ ಅಜೇಯ ತಂಡವಾಗಿದ್ದು, ಜಂಟಿ ಹಾಲಿ ಚಾಂಪಿಯನ್‌ ಕೂಡ ಆಗಿದೆ. 4 ಪಂದ್ಯಗಳಲ್ಲಿ ಮೂರನ್ನು ಗೆದ್ದು ಅಗ್ರಸ್ಥಾನದೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಇರಿಸಿದೆ. ಕೊರಿಯಾ ಎದುರಿನ ಆರಂಭಿಕ ಪಂದ್ಯ ವನ್ನು 2-2 ಡ್ರಾ ಮಾಡಿಕೊಂಡ ಬಳಿಕ ಮನ್‌ಪ್ರೀತ್‌ ಸಿಂಗ್‌ ಪಡೆ ಹಿಂದಿರುಗಿ ನೋಡಿದ್ದಿಲ್ಲ. ಬಾಂಗ್ಲಾದೇಶ (9-0), ಪಾಕಿಸ್ಥಾನ (3-1) ಮತ್ತು ಜಪಾನ್‌ ವಿರುದ್ಧ (6-0) ಅಧಿಕಾರಯುತ ಗೆಲುವನ್ನೇ ಸಾಧಿಸಿದೆ.

ಇನ್ನೊಂದೆಡೆ ಜಪಾನ್‌ ಏಶ್ಯನ್‌ ಚಾಂಪಿಯನ್‌ ಎಂಬ ಹೆಗ್ಗಳಿಕೆ ಹೊಂದಿದೆ. ಆದರೆ ಕೂಟದಲ್ಲಿ ಇದಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫ‌ಲವಾಗಿದೆ. ಇದಕ್ಕೆ ಭಾರತದೆದುರು ಕೊನೆಯ ಲೀಗ್‌ ಪಂದ್ಯದಲ್ಲಿ ಅನು ಭವಿಸಿದ 6-0 ಪರಾಭವವೇ ಸಾಕ್ಷಿ. 4 ಪಂದ್ಯಗಳಲ್ಲಿ ಒಂದನ್ನಷ್ಟೇ ಜಯಿಸಿದೆ. ಒಂದರಲ್ಲಿ ಎಡವಿದ್ದು, ಎರಡನ್ನು ಡ್ರಾ ಮಾಡಿಕೊಂಡಿದೆ.

ಇದನ್ನೂ ಓದಿ:ಮತ್ತೆ ಪಾಕಿಸ್ಥಾನಕ್ಕೆ ಬರಲಿದೆ ಕಿವೀಸ್‌ ಕ್ರಿಕೆಟ್‌ ತಂಡ

ಅಪಾಯಕಾರಿ ಹರ್ಮನ್‌ಪ್ರೀತ್‌
ಉಪನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಭಾರತದ ಕೀ ಪ್ಲೇಯರ್‌ ಆಗಿದ್ದು, ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿಸುವಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದಾರೆ. ಜಪಾನ್‌ ವಿರುದ್ಧದ ರವಿವಾರದ ಮುಖಾಮುಖೀಯಲ್ಲಿ ಅವರು ಪೆನಾಲ್ಟಿ ಕಾರ್ನರ್‌ ಮೂಲಕವೇ ಗೋಲು ಸಿಡಿಸಿದ್ದರು. ಹೀಗಾಗಿ ಹರ್ಮನ್‌ಪ್ರೀತ್‌ ಜಪಾನ್‌ ಪಾಲಿಗೆ ಮತ್ತೆ ಕಂಟಕವಾಗಿ ಕಾಡು ವುದರಲ್ಲಿ ಅನುಮಾನವಿಲ್ಲ.

ಭಾರತದ ಮಿಡ್‌ಫೀಲ್ಡ್ ಕೂಡ ಬಲಿಷ್ಠವಾಗಿದೆ. ನಾಯಕ ಮನ್‌ಪ್ರೀತ್‌ ಸಿಂಗ್‌ ಮತ್ತು ಹಾರ್ದಿಕ್‌ ಸಿಂಗ್‌ ಇಲ್ಲಿನ ಕಟ್ಟಾಳುಗಳು. ಫಾರ್ವರ್ಡ್‌ ಲೈನ್‌ನಲ್ಲಿ ದಿಲ್‌ಪ್ರೀತ್‌, ಜರ್ಮನ್‌ಪ್ರೀತ್‌, ಆಕಾಶ್‌ದೀಪ್‌ ಸಿಂಗ್‌, ಶಮ್ಶೆàರ್‌ ಸಿಂಗ್‌ ಉತ್ತಮ ಲಯದಲ್ಲಿದ್ದಾರೆ.

ಸೂರಜ್‌ ಕರ್ಕೇರ ಸಾಹಸ
ಹಾಗೆಯೇ ಯುವ ಗೋಲ್‌ಕೀಪರ್‌ ಸೂರಜ್‌ ಕರ್ಕೇರ ಅವರ ಸಾಹಸವನ್ನು ಮರೆಯುವಂತಿಲ್ಲ. ಆದರೆ ತಂಡದ ಡಿಫೆನ್ಸ್‌ ವಿಭಾಗದಲ್ಲಿ ಹೆಚ್ಚಿನ ಸುಧಾರಣೆ ಆಗಬೇಕಿದೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.