ಯಡಳ್ಳಿ ಸೊಸೈಟಿಯಿಂದ ಅಡಿಕೆ ಕೊಯ್ಲು ತರಬೇತಿ


Team Udayavani, Dec 21, 2021, 3:08 PM IST

ಯಡಳ್ಳಿ ಸೊಸೈಟಿಯಿಂದ ಅಡಿಕೆ ಕೊಯ್ಲು ತರಬೇತಿ

ಶಿರಸಿ: ತಾಲೂಕಿನ ಯಡಳ್ಳಿಯ ಕಾನಗೋಡ ಗ್ರೂಪ್ ವಿವಿಧೋದ್ದೇಶಗಳ ಸಹಕಾರಿ ಸಂಘ ದಶಂಬರ 24 ಮತ್ತು 25ರಂದು ದೋಟಿಯ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರ ನಡೆಸಲಿದೆ.

ಮರ ಏರಿ ನಡೆಸುವ ಮರಗೆಲಸದಲ್ಲಿರುವ ಅವಘಡ ಸಾಧ್ಯತೆ, ಈ ಕೆಲಸ ಮಾಡುವ ಕುಶಲಕರ್ಮಿಗಳ ಅಭಾವ ಗಮನದಲ್ಲಿಟ್ಟು ಯಡಳ್ಳಿ ಸೊಸೈಟಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಕುಶಲಕರ್ಮಿ ಮಾಡಲು ಆಸಕ್ತಿ ಇರುವ ಆಯ್ದ ೮ ಮಂದಿ ಯುವಕರು ಈ ಶಿಬಿರದಲ್ಲಿ ತರಬೇತಿ ಪಡೆಯಲಿದ್ದಾರೆ.

ಮೂರೂರು ಕಲ್ಲಬ್ಬೆಯ ಹಿರಿಯ ಕೃಷಿಕ ಆರ್.ಜಿ.ಹೆಗಡೆ ಮತ್ತವರ ಸ್ನೇಹಿತರು ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ದೋಟಿ ಮೂಲಕ ಅಡಿಕೆಯ ಮರಗೆಲಸದಲ್ಲಿ ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ದೊಡ್ಡ ಸಾಧನೆ ಮಾಡಿದೆ. ಕಳೆದೆರಡು ವರ್ಷಗಳಲ್ಲಿ ಅಲ್ಲಿ ಐವತ್ತಕ್ಕೂ ಹೆಚ್ಚು ದೋಟಿ ಜಾಬ್‌ವರ್ಕರುಗಳು ತಯಾರಾಗಿದ್ದಾರೆ. ಇವರು ತಿಂಗಳಿಗೆ ಸರಾಸರಿ 25,000 ರೂ. ಸಂಪಾದನೆ ಮಾಡುತ್ತಿದ್ದಾರೆ. ಇವರಿಗೆ ಹೆಚ್ಚುಕಡಿಮೆ ವರ್ಷಾರ್ಧ ಕಾಲ ಈ ಕೆಲಸ ಸಿಗುತ್ತಿದೆ. ಪ್ರಾಣಾಪಾಯ ಸಾಧ್ಯತೆ ಇಲ್ಲದಿರುವುದು ಮತ್ತು ಒಳ್ಳೆಯ ವರಮಾನ ಈ ಯುವಕರನ್ನು ದೋಟಿ ಮರಗೆಲಸಕ್ಕೆ ಆಕರ್ಷಿಸಿದೆ. ತರಬೇತಿಯ ಪ್ರಾಯೋಗಿಕ ಶಿಕ್ಷಣ ಯಡಳ್ಳಿ ಬೆಳ್ಳೇಕೇರಿ ಕೃಷಿಕರ ತೋಟದಲ್ಲಿ ನಡೆಯಲಿದೆ.

ತ್ಯಾಗಲಿ ಸೊಸೈಟಿ ಕಳೆದೆರಡು ವರ್ಷಗಳಿಂದ ಸ್ಥಳೀಯ ಯುವಕರಿಗೆ ದೋಟಿ ಮರಗೆಲಸ ಕಲಿಸಿ ತಾನೇ ಕೊಯ್ಲು – ಸಿಂಪಡಣೆ ನಡೆಸಿಕೊಡುತ್ತಿದೆ. ಕೃಷಿಕ ಸದಸ್ಯರ ಸಂಕಟ ನಿವಾರಣೆಯತ್ತ ಈ ಸಾಧನೆ ಒಂದು ಮೈಲಿಗಲ್ಲಾಗಿದೆ. ಈ ಸಾಧನೆಯ ಪ್ರೇರಣೆಯಿಂದ ಯಡಳ್ಳಿ ಸೊಸೈಟಿ ಈ ತರಬೇತಿ ಕೊಡಿಸಲು ಮುಂದಾಗಿದೆ.

ಅಂದು ಬೆಳಿಗ್ಗೆ 9:30ಕ್ಕೆ ನಾಣಿಕಟ್ಟ ಸೊಸೈಟಿ ಅಧ್ಯಕ್ಷ ಎನ್.ಬಿ.ಹೆಗಡೆ ಮತ್ತಿಹಳ್ಳಿ ಉದ್ಘಾಟಿಸುವರು‌. ಅತಿಥಿಗಳಾಗಿ ಮೂರೂರು ಆರ್.ಜಿ.ಹೆಗಡೆ, ಕೆಶಿನ್ಮನೆ ವಿ.ಎಸ್.ಹೆಗಡೆ ಪಾಲ್ಗೊಳ್ಳುವರು ಎಂದು ಪ್ರಕಟನೆಯಲ್ಲಿ ಸೊಸೈಟಿ ಅಧ್ಯಕ್ಷ‌ ಜಿ.ಆರ್ .ಹೆಗಡೆ ಬೆಳ್ಳೇಕೆರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.