“ಪ್ರಳಯ್‌’ ಪರೀಕ್ಷೆ ಯಶಸ್ವಿ : ಪಯಣದ ಮಧ್ಯೆಯೇ ಪಥ ಬದಲಿಸುವ ಹೊಸ ತಲೆಮಾರಿನ ಕ್ಷಿಪಣಿ

ಒಡಿಶಾದ ಬಾಲಸೋರ್‌ನಲ್ಲಿ ಡಿಆರ್‌ಡಿಒದಿಂದ ಪರೀಕ್ಷೆ

Team Udayavani, Dec 22, 2021, 10:45 PM IST

“ಪ್ರಳಯ್‌’ ಪರೀಕ್ಷೆ ಯಶಸ್ವಿ : ಪಯಣದ ಮಧ್ಯೆಯೇ ಪಥ ಬದಲಿಸುವ ಹೊಸ ತಲೆಮಾರಿನ ಕ್ಷಿಪಣಿ

– ಉಡಾವಣೆಯಾದ ಸಮಯ- ಬುಧವಾರ ಬೆಳಗ್ಗೆ 10.30
– ಪ್ರಳಯ್‌ ಕ್ಷಿಪಣಿಯ ವ್ಯಾಪ್ತಿ- 150- 500 ಕಿ.ಮೀ.
– ಪೇಲೋಡ್‌ ಸಾಮರ್ಥ್ಯ- 500-1000 ಕೆಜಿ.
– ಅತ್ಯಾಧುನಿಕ ನೇವಿಗೇಷನ್‌ ಮತ್ತು ಏವಿಯೋನಿಕ್ಸ್‌ ಒಳಗೊಂಡ ಮಾರ್ಗದರ್ಶನ ವ್ಯವಸ್ಥೆ
– ಈ ಕ್ಷಿಪಣಿ ಅಭಿವೃದ್ಧಿ ಯೋಜನೆಗೆ ಒಪ್ಪಿಗೆ ಸಿಕ್ಕಿದ್ದು- ಮಾರ್ಚ್‌ 2015ರಲ್ಲಿ
– ಒಟ್ಟಾರೆ ಯೋಜನೆಯ ವೆಚ್ಚ – 333 ಕೋಟಿ ರೂ.

ಬಾಲಸೋರ್‌ : ಸ್ವದೇಶಿ ನಿರ್ಮಿತ, ನೆಲದಿಂದ ನೆಲಕ್ಕೆ ಚಿಮ್ಮಬಲ್ಲ “ಪ್ರಳಯ್‌’ ಕ್ಷಿಪಣಿಯ ಚೊಚ್ಚಲ ಪರೀಕ್ಷೆ ಬುಧವಾರ ಯಶಸ್ವಿಯಾಗಿ ನೆರವೇರಿದೆ.

ಒಡಿಶಾದ ಬಾಲಸೋರ್‌ನ ಎಪಿಜೆ ಅಬ್ದುಲ್‌ ಕಲಾಂ ದ್ವೀಪದಿಂದ ಬೆಳಗ್ಗೆ 10.30ಕ್ಕೆ ಸರಿಯಾಗಿ ಈ ಅಲ್ಪ ವ್ಯಾಪ್ತಿಯ ಅತ್ಯಾಧುನಿಕ ಕ್ಷಿಪಣಿ ನಭಕ್ಕೆ ಚಿಮ್ಮಿದ್ದು, ನಿಖರವಾಗಿ ತನ್ನ ಗುರಿ ತಲುಪಿದೆ ಎಂದು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ(ಡಿಆರ್‌ಡಿಒ) ತಿಳಿಸಿದೆ.

ಭಾರತದ ಖಂಡಾಂತರ ಕ್ಷಿಪಣಿ ಯೋಜನೆಯ ಪೃಥ್ವಿ ಡಿಫೆನ್ಸ್‌ ವೆಹಿಕಲ್‌ ಆಧರಿಸಿ ಪ್ರಳಯ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಲಾಗಿದೆ. ಹೊಸ ತಲೆಮಾರಿನ ಈ ಕ್ಷಿಪಣಿಯು ದೇಶದ ಸಶಸ್ತ್ರ ಪಡೆಗಳಿಗೆ ಹೆಚ್ಚಿನ ಬಲ ತಂದುಕೊಡಲಿದೆ ಎಂದು ಡಿಆರ್‌ಡಿಒ ಮುಖ್ಯಸ್ಥ ಡಾ. ಜಿ. ಸತೀಶ್‌ ರೆಡ್ಡಿ ಹೇಳಿದ್ದಾರೆ.

ವೈಶಿಷ್ಟ್ಯ :
ಪ್ರಳಯ್‌ ನೆಲದಿಂದ ನೆಲಕ್ಕೆ ಚಿಮ್ಮಬಲ್ಲ, ಭಾಗಶಃ ಖಂಡಾಂತರ ಕ್ಷಿಪಣಿಯಾಗಿದೆ. ಪ್ರತಿಬಂಧಕ ಕ್ಷಿಪಣಿಗಳನ್ನು ಹೊಡೆದುರುಳಿಸಬಲ್ಲಂಥ ಛಾತಿ ಹೊಂದುವಂತೆ ಈ ಸುಧಾರಿತ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಲಾಗಿದೆ. ನಿರ್ದಿಷ್ಟ ದೂರ ಸಾಗಿದ ಬಳಿಕ ತನ್ನ ಪಥವನ್ನು ಬದಲಿಸುವಂಥ ವಿಶೇಷ ಸಾಮರ್ಥ್ಯ ಇದಕ್ಕಿದೆ.

ಡಿಆರ್‌ಡಿಒ ಇಂದು ಮಹತ್ವದ ಮೈಲುಗಲ್ಲೊಂದನ್ನು ಸಾಧಿಸಿದೆ. ಅತ್ಯಾಧುನಿಕ ಕ್ಷಿಪಣಿಯ ತ್ವರಿತಗತಿಯ ಅಭಿವೃದ್ಧಿ ಮತ್ತು ಯಶಸ್ವಿ ಉಡಾವಣೆಗೆ ಕಾರಣವಾದ ಡಿಆರ್‌ಡಿಒ ತಂಡಕ್ಕೆ ಅಭಿನಂದನೆಗಳು.
– ರಾಜನಾಥ್‌ ಸಿಂಗ್‌, ರಕ್ಷಣಾ ಸಚಿವ

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.