ದಲಿತ ಕೇರಿಗಿಲ್ಲ ಆಶ್ರಯ ಭಾಗ್ಯ


Team Udayavani, Dec 23, 2021, 11:19 AM IST

ದಲಿತರ ಕೇರಿ

ದೇವನಹಳ್ಳಿ: ತಾಲೂಕಿನ ಕುಂದಾಣ ಹೋಬಳಿ ಯ ಜಾಲಿಗೆ ಗ್ರಾಪಂ ವ್ಯಾಪ್ತಿಯ ಅರದೇಶನಹಳ್ಳಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಕಾಲೋನಿ ಯಲ್ಲಿ ಇದುವರೆಗೂ ಆಶ್ರಯ ಭಾಗ್ಯ ಕಲ್ಪಿಸುವಲ್ಲಿ ಈ ಭಾಗದ ಜನಪ್ರತಿನಿಧಿಗಳು ಮತ್ತು ಅಧಿ ಕಾರಿಗಳು ಸಂಪೂರ್ಣವಾಗಿ ವಿಫ‌ಲರಾಗಿದ್ದಾರೆ ಎಂಬುದು ದಲಿತ ಕೇರಿ ಜನರ ಆರೋಪವಾಗಿದೆ.

ಸರ್ಕಾರವು ದಲಿತರ ಕಾಲೋನಿಗಳ ಅಭಿವೃದ್ಧಿಗೆ ಕೋಟ್ಯಂತರ ರೂ.ಖರ್ಚು ಮಾಡುತ್ತಿದ್ದರೂ ಸಹ ಇಂದಿಗೂ ಸಹ ಮೂಲ ಸೌಕರ್ಯಗಳ ಕೊರತೆ ಹಾಗೂ ಒಂದೊಂದು ಮನೆಯಲ್ಲಿ ಮೂರ್‍ನಾಲ್ಕು ಕುಟುಂಬಗಳು ವಾಸಿಸುವ ಸ್ಥಿತಿ ಬಂದೊದಗಿದೆ. ಸರ್ಕಾರ ಆಶ್ರಯ ಯೋಜನೆಗಳಲ್ಲಿ ಹೆಚ್ಚಿನ ಮನೆ ನೀಡುತ್ತೇವೆ ಎಂದು ಹೇಳುತ್ತಾರೆ. ಕೇವಲ ಸರ್ಕಾರದ ಕಡತಗಳಲ್ಲಿ ಸೀಮಿತವಾಗುತ್ತಿದೆ. ಬಡವರಿಗೆ ನಿವೇಶನದ ಸೂರು ಕನಸಾಗಿಯೇ ಉಳಿಯುತ್ತಿದೆ ಎಂದು ದಲಿತ ಕುಟುಂಬಗಳ ಅಳಲಾಗಿದೆ.

ಡೀಸಿಗೂ ಸಹ ಮನವಿ: ಮಳೆಯಿಂದಾಗಿ ಕಾಲೋನಿಯಲ್ಲಿನ ಸುಮಾರು 3-4 ಮನೆಗಳು ಕುಸಿದಿದ್ದು, ಸ್ಥಳ ಪರಿಶೀಲನೆಗೆ ಅಧಿಕಾರಿಗಳು ಮೇಲ್ನೋಟಕ್ಕೆ ಬಂದು ಪರಿಶೀಲಿಸಿ ಹೋಗಿದ್ದಾರೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ. ಸುಮಾರು ವರ್ಷಗಳಿಂದ ಸ್ಮಶಾನ ಮತ್ತು ನಿವೇಶನಕ್ಕಾಗಿ ಹೋರಾಟ ಮಾಡಲಾಗುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಇತ್ತ ಗಮನಹರಿಸುತ್ತಿಲ್ಲ.

ಇದನ್ನೂ ಓದಿ: ಜನರ ಉತ್ತಮ ಭವಿಷ್ಯದ ಬದುಕನ್ನು ನಿರ್ಮಿಸುವ ಸರಕಾರ ನಮ್ಮದು: ಸಿಎಂ ಬೊಮ್ಮಾಯಿ

ಈ ಬಗ್ಗೆ ಜಿಲ್ಲಾಧಿಕಾರಿಗೂ ಸಹ ಮನವಿ ಮಾಡಲಾಗಿದೆ ಎಂದು ದಲಿತ ಮುಖಂಡ ಅರದೇಶನಹಳ್ಳಿ ಕುಮಾರ್‌ ಅವರ ಆರೋಪವಾಗಿದೆ. ಈ ಕೇರಿ ಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿಯ 40 ಬಡ ಕುಟುಂಬಗಳು ಬಹುತೇಕ ಕಲ್ಲುಮನೆ, ಸೀಟುಗಳು, ಹೆಂಚಿನ ಮನೆಗಳಲ್ಲಿ ವಾಸವಿದ್ದು, 2 ಸಾವಿರ ಜನಸಂಖ್ಯೆ ಹೊಂದಿದೆ.

ಒತ್ತುವರಿ ಆರೋಪ: ಒಂದೊಂದು ಮನೆಯಲ್ಲಿ 3-4 ಕುಟುಂಬಗಳು ವಾಸವಿದ್ದಾರೆ. ದಲಿತ ಕೇರಿಗೆ ಸ್ಮಶಾನದ ಜಾಗವಿಲ್ಲ. ಸುಮಾರು 80-90 ವರ್ಷದ ಹಿಂದಿನಿಂದಲೂ 10 ಗುಂಟೆ ಜಾಗದ ಸರ್ವೆ ನಂ.57ರಲ್ಲಿ ಸ್ಮಶಾನದ ಜಾಗವಿತ್ತು. ಆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ಅದನ್ನು ಅಧಿಕಾರಿಗಳು ಮಂಜೂರು ಮಾಡಿಕೊಟ್ಟಿರುತ್ತಾರೆ.

ವಾಸ್ತವದಲ್ಲಿ ಅದು ಗೋಮಾಳ ಜಾಗವಾಗಿದೆ. ನಿವೇಶನಗಳಿಗಾಗಿ ಸರ್ವೆ ನಂ.69ರಲ್ಲಿ ಸರ್ಕಾರಿ ಜಮೀನು ಇದ್ದು, ಅದನ್ನು ಬಡವರಿಗೆ ನಿವೇಶನಕ್ಕಾಗಿ ಮಂಜೂರು ಮಾಡುವುದನ್ನು ಬಿಟ್ಟು ಆ ಜಾಗವನ್ನು ಸ್ಮಶಾನಕ್ಕಾಗಿ ಮೀಸಲಿಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಗ್ರಾಮಸ್ಥರು ಆಕ್ರೊಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.